tamanvi
ಕರಾವಳಿ

ಪ್ರವಾಸಿ ಬೋಟ್ ಪಲ್ಟಿ: ಇನ್ನೂ ಪತ್ತೆಯಾಗದ ರೈಡರ್..!!

D_shiva_bhat
ತ್ರಾಸಿ ಬೀಚ್‌ನಲ್ಲಿ ಬೋಟ್ ಪಲ್ಟಿಯಾಗಿ (Boat Drowned) ರೈಡರ್ ಕಣ್ಮರೆಯಾಗಿರುವ ಘಟನೆ ವರದಿಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದ್ದು ಕಣ್ಮರೆಯಾಗಿರುವ ರೈಡರ್‌ಗಾಗಿ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿದೆ. 

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ :ತ್ರಾಸಿ ಬೀಚ್‌ನಲ್ಲಿ ಬೋಟ್ ಪಲ್ಟಿಯಾಗಿ (Boat Drowned) ರೈಡರ್ ಕಣ್ಮರೆಯಾಗಿರುವ ಘಟನೆ ವರದಿಯಾಗಿದೆ. ಬೋಟ್‌ನಲ್ಲಿದ್ದ ಪ್ರವಾಸಿಗನನ್ನು ರಕ್ಷಿಸಲಾಗಿದ್ದು ಕಣ್ಮರೆಯಾಗಿರುವ ರೈಡರ್‌ಗಾಗಿ ಭಾರೀ ಶೋಧ ಕಾರ್ಯ ನಡೆಸಲಾಗುತ್ತಿದೆ. ಇನ್ನು ನಾಪತ್ತೆಯಾದ ರೈಡರ್‌ನನ್ನು ರವಿದಾಸ್ ಎಂದು ಗುರುತಿಸಲಾಗಿದೆ.

maithri

ತ್ರಾಸಿ(trasi) ಕಡಲ ಕಿನಾರೆಯಲ್ಲಿ ಕಾರ್ಯಾಚರಿಸುತ್ತಿರುವ ಬೆಳುಗಾ ವಾಟರ್ ಸ್ಪೋರ್ಟ್ಸ್ನ ಜೆಟ್‌ಸ್ಟೀ ಬೋಟ್‌ನಲ್ಲಿ ಓರ್ವ ಪ್ರವಾಸಿಗನನ್ನು ಕೂರಿಸಿಕೊಂಡು ಸಮುದ್ರದಲ್ಲಿ ವಿಹಾರ ನಡೆಸಲಾಗುತ್ತಿತ್ತು. ಈ ವೇಳೆ ರೈಡರ್ ನಿಯಂತ್ರಣ ತಪ್ಪಿ ಜೆಟ್‌ಸ್ಕಿ ಮಗುಚಿ ಬಿದ್ದಿತ್ತು. ರೈಡ್‌ಗೂ ಮೊದಲು ಪ್ರವಾಸಿಗರಿಗೆ ಲೈಫ್ ಜಾಕೆಟ್ ಹಾಕಿ ಸುರಕ್ಷತಾ ಕ್ರಮ ವಹಿಸಿದ್ದರಿಂದ ಆತನನ್ನು ರಕ್ಷಿಸಲಾಗಿದೆ.

ಬೆಂಗಳೂರು ಮೂಲದ ಪ್ರವಾಸಿಗ ಪ್ರಶಾಂತ್ ಎಂಬವರು ಟೂರಿಸ್ಟ್ ಬೋಟಿನಲ್ಲಿ ಬೋಟಿಂಗ್ ನಡೆಸುತ್ತಿರುವಾಗ ಬೋಟ್ ಪಲ್ಟಿ ಆದ ಪರಿಣಾಮ ಪ್ರವಾಸಿಗ ಹಾಗೂ ರೈಡರ್ ಇಬ್ಬರೂ ನೀರಿಗೆ ಬಿದ್ದ ಪರಿಣಾಮ ರೈಡ‌ರ್ ನಾಪತ್ತೆಯಾಗಿದ್ದಾರೆ. ಲೈಫ್ ಜಾಕೆಟ್ ಧರಿಸಿದ್ದ ಪರಿಣಾಮ ಪ್ರವಾಸಿಗ ಪ್ರಶಾಂತ್ ಬಚಾವ್ ಆಗಿದ್ದಾರೆ.

ಮುರುಡೇಶ್ವರ ನಿವಾಸಿಯಾದ ರೋಹಿದಾಸ್ ತ್ರಾಸಿಯಲ್ಲಿಯೇ ವಾಸಿಸುತ್ತಿದ್ದು ಜೆಟ್‌ ಸ್ಕಿ ಮತ್ತಿತರ ಬೋಟ್ ರೈಡ್ ಕಾಯಕ ಮಾಡಿಕೊಂಡಿದ್ದರು. ನಾಪತ್ತೆಯಾದ ರವಿದಾಸ್ ನ ಶೋಧ ಕಾರ್ಯ ನಡೆಯುತ್ತಿದ್ದು ಗಂಗೊಳ್ಳಿ ಪೊಲೀಸರು ಹಾಗೂ ಕರಾವಳಿ ಪೊಲೀಸ್ ಪಡೆ ಮತ್ತು ಸ್ಥಳೀಯರು ಶೋಧ ಕಾರ್ಯದಲ್ಲಿ ನಿರತರಾಗಿದ್ದಾರೆ. ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…