tamanvi
ಕರಾವಳಿ

ಶಾಲೆಯಲ್ಲಿ ಜೇನು ನೊಣ ದಾಳಿ:  40ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಗಾಯ!!

D_shiva_bhat
ಹೆಚ್ಚೇನು ಕಡಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ವಳಕಾಡು ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಹೆಚ್ಚೇನು ಕಡಿದ ಪರಿಣಾಮ 40ಕ್ಕೂ ಅಧಿಕ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಗರದ ವಳಕಾಡು ಶಾಲಾ ಆವರಣದಲ್ಲಿ ಇಂದು ಮಧ್ಯಾಹ್ನ 3.30ರ ಸುಮಾರಿಗೆ ನಡೆದಿದೆ.

maithri

ಗಾಯಗೊಂಡ 41 ವಿದ್ಯಾರ್ಥಿಗಳಿಗೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ನೀಡಿದ್ದು, ಇದರಲ್ಲಿ ಮೂರು ಮಕ್ಕಳನ್ನು ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಿಕೊಳ್ಳಲಾಗಿದೆ. ಓರ್ವ ಪೋಷಕರು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ ಮಕ್ಕಳು ಹೊರರೋಗಿಯಾಗಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ ಎಂದು ಜಿಲ್ಲಾ ಸರ್ಜನ್ ಡಾ.ಅಶೋಕ್ ಕುಮಾ‌ರ್ ತಿಳಿಸಿದ್ದಾರೆ.

ಶಾಲಾ ಆವರಣದಲ್ಲಿ ಆಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ, ಕಟ್ಟಡದಲ್ಲಿದ್ದ ಜೇನುಗೂಡಿಗೆ ಕಲ್ಲು ಎಸೆದಿದ್ದ ಎನ್ನಲಾಗಿದೆ. ಇದರಿಂದ ಜೇನು ನೋಣಗಳು ಅಲ್ಲಿದ್ದ ಮಕ್ಕಳ ಮೇಲೆ ದಾಳಿ ನಡೆಸಿತ್ತೆನ್ನಲಾಗಿದೆ. ಇದರಿಂದ ಮಕ್ಕಳು ಬೊಬ್ಬೆ ಹಾಕಿ ಓಡಿ ಹೋಗಿದ್ದು, ಕೂಡಲೇ ಶಿಕ್ಷಕರು, ಪೋಷಕರು ಗಾಯಗೊಂಡ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…