Gl
ಕರಾವಳಿ

ರಸ್ತೆ ಅಗಲೀಕರಣ  ಮೂರು ಅಂತಸ್ತಿನ  ಕಟ್ಟಡವೇ ಸ್ಥಳಾಂತರ..!!

ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5 ಅಡಿಯಷ್ಟು ಹಿಂದಕ್ಕೆ ಜರುಗಿಸಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ

Pashupathi

ಅತ್ಯಾಧುನಿಕ ತಂತ್ರಜ್ಞಾನ ಬಳಸಿಕೊಂಡು ಮೂರಂತಸ್ತಿನ ಕಟ್ಟಡವೊಂದನ್ನು ಸುಮಾರು 20 ಅಡಿಗಳಷ್ಟು ಹಿಂದಕ್ಕೆ ತಳ್ಳುವ ಸಾಹಸ ನಡೆಯುತ್ತಿದೆ. ಹಿರಿಯೂರು ನಗರದ ಅವಧಾನಿ ಬಡಾವಣೆ ಮುಂಭಾಗದ ಹೋಟೆಲ್ ಕಟ್ಟಡವನ್ನು ಹಿಂದಕ್ಕೆ ತಳ್ಳಿ ಯಥಾಸ್ಥಿತಿಯಲ್ಲಿಯೇ ಕೂರಿಸುವ ಕಾಮಗಾರಿಯ ಮೊದಲ ಭಾಗವಾಗಿ ಸೋಮವಾರ ಸುಮಾರು 5 ಅಡಿಯಷ್ಟು ಹಿಂದಕ್ಕೆ ಜರುಗಿಸಲಾಗಿದೆ.

akshaya college

ನಗರದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಂಚಿನಲ್ಲಿದ್ದ ಕೆಲವು ಕಟ್ಟಡಗಳನ್ನು ತೆರವುಗೊಳಿಸಲು ಆದೇಶಿಸಲಾಗಿದೆ. ಈ ಹೋಟೆಲ್ ಕಟ್ಟಡದ ಮುಂಭಾಗವನ್ನು ತೆರವು ಮಾಡಬೇಕಿತ್ತು. ಕಟ್ಟಡದ ಅರ್ಧ ಭಾಗ ರಸ್ತೆ ವಿಸ್ತರಣೆಗೆ ಹೋಗುವ ಸ್ಥಿತಿಯಲ್ಲಿ ಇದ್ದದ್ದರಿಂದ ಕಟ್ಟಡ ಮಾಲೀಕರು ಹೋಟೆಲನ್ನು ಹಿಂದಿನ ಖಾಲಿ ಜಾಗಕ್ಕೆ ಕಟ್ಟಡ ಜರಗಿಸಿಕೊಳ್ಳುವ ನಿರ್ಧಾರ ಮಾಡಿದ್ದಾರೆ.

ತಮಿಳುನಾಡಿನ ಹೈಡ್ರಾಲಿಕ್ ಜಾಕ್ ಬಳಸಿ ಕಟ್ಟಡ ತಳ್ಳುವ ಪಾರಮೌಂಟ್ ಕಂಪನಿ 20 ಅಡಿಯಷ್ಟು ಕಟ್ಟಡವನ್ನು ಹಿಂದೆ ತಳ್ಳುವ ಕಾಮಗಾರಿಯನ್ನು 22 ಲಕ್ಷ ರೂ.ಗೆ ವಹಿಸಿಕೊಂಡಿದೆ. 37 ಅಡಿ ಎತ್ತರ ಹಾಗೂ 37 ಅಡಿ ಅಗಲದ ಮೂರಂತಸ್ತಿನ ಕಟ್ಟಡವನ್ನು 400ಕ್ಕೂ ಹೆಚ್ಚು ಹೈಡ್ರಾಲಿಕ್ ಜಾಕ್ ಬಳಸಿಕೊಂಡು ಹಿಂದಕ್ಕೆ ಸ್ಥಳಾಂತರಿಸುವ ಕಾಮಗಾರಿ ಭರದಿಂದ ಸಾಗಿದೆ.

ಕಟ್ಟಡ ಸರಿಸುವ ಕೆಲಸ ಹಿರಿಯೂರು ನಗರಕ್ಕೆ ಹೊಸದೇನು ಅಲ್ಲ. ಈಗಾಗಲೇ ಅಕ್ಷಯ ಪುಡ್ ಪಾರ್ಕ್‌ ಕಟ್ಟಡವನ್ನು 100 ಅಡಿಯಷ್ಟು ಹಿಂದೆ ಸರಿಸಲಾಗಿತ್ತು. ಶ್ರೀನಿವಾಸ ಲಾಡ್ಜ್, ವೇದಾವತಿ ನಗರದ ಮಸೀದಿ ಹಾಗೂ ಪುಷ್ಪಾಂಜಲಿ ಚಿತ್ರಮಂದಿರದ ಬಳಿಯ ಕಟ್ಟಡಗಳನ್ನು ಈಗಾಗಲೇ ಸ್ಥಳಾಂತರ ಮಾಡಲಾಗಿದೆ. ಇದೀಗ ಉದಯ ಹೋಟೆಲ್ ಕಟ್ಟಡವನ್ನು ಪ್ರತಿದಿನ 4 ರಿಂದ 5 ಅಡಿ ತಳ್ಳುವ ಗುರಿ ಇಟ್ಟುಕೊಂಡು ಕೆಲಸ ಆರಂಭಿಸಿದ್ದಾರೆ.

ಹೈಡ್ರಾಲಿಕ್ ಜಾಕ್, ಕಟ್ಟೆತುಂಡುಗಳು (ಮರದ ತುಂಡುಗಳು), ಆಂಗ್ಲರ್, ಕಬ್ಬಿಣದ ಶೀಟ್, ಕಬ್ಬಿಣದ ಲೀವರ್ ಹಾಗೂ ಬೇಕಾದ ಇನ್ನಿತರ ವಸ್ತುಗಳನ್ನು ಬಳಸಿ ಕಟ್ಟಡವನ್ನು ಇಂಚಿಂಚೇ ಜರಗಿಸಲಾಗುತ್ತದೆ. ಮೊದಲು ಕಟ್ಟಡದ ಒಳಭಾಗದಲ್ಲಿರುವ ಮಣ್ಣನ್ನು ಹೊರಗಡೆ ತೆಗೆದು ಹಾಕಲಾಗುತ್ತದೆ. ಬಳಿಕ ಮಧ್ಯ ಭಾಗದಲ್ಲಿರುವ ಪಿಲ್ಲರ್ ಕಂಬಗಳಿಗೆ ಜಾಕ್ ಕೂರಿಸುತ್ತಾರೆ. ನಂತರ ತಳಪಾಯದ ಸುತ್ತಲಿನ ಮಣ್ಣು ತೆಗೆದು ಕಟ್ಟಡಕ್ಕೆ ಇಂತಿಷ್ಟು ದೂರಕ್ಕೆ ಎಂಬಂತೆ ಕಬ್ಬಿಣದ ಆಂಗ್ಲರ್ ಹಾಕಿ ಅದರ ಮೇಲೆ ಒಂದೊಂದೇ ಜಾಕ್ ಅಳವಡಿಸಲಾಗುತ್ತದೆ. ಕಟ್ಟಡದ ಕಿಟಕಿ, ಬಾಗಿಲು ಸೇರಿದಂತೆ ಖಾಲಿ ಜಾಗಗಳಿಗೆ ಇಟ್ಟಿಗೆಗಳಿಂದ ಗೋಡೆ ನಿರ್ಮಾಣ ಮಾಡಿಕೊಳ್ಳುತ್ತಾರೆ. ಕಟ್ಟಡ ತಳ್ಳುವ ಜಾಗದಲ್ಲಿ ಹೊಸ ತಳಪಾಯ ಸಿದ್ದಪಡಿಸಿಕೊಳ್ಳುತ್ತಾರೆ. ಬಿಲ್ಡಿಂಗ್ ಹಿಂಭಾಗದಲ್ಲಿ ಕಬ್ಬಿಣದ ಆಂಗ್ಲರ್‌ಗಳೊಂದಿಗೆ ಗಾಲಿ ಚಕ್ರದ ಜಾಕ್ ಅಳವಡಿಸಿಕೊಂಡು ಕಬ್ಬಿಣದ ಲೀವರ್ ತಿರುಗಿಸುವ ಮೂಲಕ ಕಟ್ಟಡವನ್ನು ಇಂಚು ಇಂಚಾಗಿ ಸರಿಸುತ್ತಾ ಹೋಗುತ್ತಾರೆ. ಇದು ಕಟ್ಟಡ ತೆರವು ಮಾಡಿಕೊಂಡು ಮತ್ತೆ ಕಟ್ಟಿಸಿಕೊಳ್ಳುವುದಕ್ಕಿಂತ ಕಡಿಮೆ ಖರ್ಚಿನ ಕೆಲಸ ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಪೊಲೀಸ್‌ ಕಮಿಷನ‌ರ್ ಆಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ | ಕಾನೂನು ಎಲ್ಲರಿಗೂ ಒಂದೇ: ಸುಧೀರ್ ಕುಮಾರ್ ರೆಡ್ಡಿ

ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಕೋಮು ದ್ವೇಷದ ದಳ್ಳುರಿಗೆ ತುತ್ತಾಗಿರುವ ಮಂಗಳೂರಿಗೆ…