tamanvi
ಕರಾವಳಿ

ಪ್ರೇತ ಉಚ್ಚಾಟನೆ: ನಗರದ ಪ್ರಮುಖ ರಸ್ತೆ ಬಂದ್ !! 

D_shiva_bhat
ಪ್ರೇತ ಉಚ್ಚಾಟನೆಗೆ ನಗರದ ರಸ್ತೆಯನ್ನು ಬಂದ್‌ ಮಾಡಿದಂತಹ ವಿಚಿತ್ರ ಪ್ರಕರಣ ಒಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು : ಪ್ರೇತ ಉಚ್ಚಾಟನೆಗೆ ನಗರದ ರಸ್ತೆಯನ್ನು

maithri

ಬಂದ್‌ ಮಾಡಿದಂತಹ ವಿಚಿತ್ರ ಪ್ರಕರಣ ಒಂದು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಸದ್ಯ ಪ್ರೇತ ಉಚ್ಚಾಟನೆ ಬ್ಯಾನರ್‌ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹೌದು, ನಗರದ ಕೊಟ್ಟಾರದಲ್ಲಿರುವ ಮಹಾದೈವರಾಜ ಕೋಟೆದ ಬಬ್ಬುಸ್ವಾಮಿ ದೈವಸ್ಥಾನದ ಬಳಿ ರಣಕಾಳಿ ಹಾಗೂ ಬ್ರಹ್ಮರಾಕ್ಷಸ ಅನ್ಯಪ್ರೇತ ಉಚ್ಚಾಟನೆ ಹಿನ್ನೆಲೆ ಕೊಟ್ಟಾರದ ಪ್ರಮುಖ ರಸ್ತೆಗಳಲ್ಲಿ ವಾಹನ ಸಂಚಾರ ಮಾಡದಂತೆ ಸೂಚಿಸಿ ಬ್ಯಾನರ್ ಅಳವಡಿಸಲಾಗಿದೆ.

ಹೀಗಾಗಿ ನಿನ್ನೆ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 3 ಗಂಟೆಯವರೆಗೆ ಜನರು ಓಡಾಡದಂತೆ ಮನವಿ ಮಾಡಲಾಗಿತ್ತು. ಸದ್ಯ ಪ್ರೇತ ಉಚ್ಚಾಟನೆ ಬ್ಯಾನ‌ರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ದೈವ ಆರಾಧಕ ಪ್ರಜ್ವಲ್ ಹೇಳಿದ್ದೇನು?

ದೈವಸ್ಥಾನ ಜೀರ್ಣೋದ್ದಾರ ಮಾಡುವ ಸಲುವಾಗಿ ತಾಂಬೂಲ ಪ್ರಶ್ನೆ ಕೇಳಲಾಯಿತು. ಆಗ ಈ ಪ್ರದೇಶದಲ್ಲಿ ರಾಕ್ಷಸ, ಪ್ರೇತಾತ್ಮಗಳಿರುವುದು ಕಂಡು ಬಂದಿತ್ತು. ದೈವಸ್ಥಾನದ ಜೀರ್ಣೋದ್ಧಾರಕ್ಕೂ ಮೊದಲು ಈ ಪ್ರೇತಾತ್ಮಗಳ ಉಚ್ಚಾಟನೆ ಆಗಬೇಕು ಎಂದು ಬಂದಿತ್ತು. ಅಮವಾಸ್ಯೆ ರಾತ್ರಿ 12 ಗಂಟೆ ವೇಳೆಗೆ ಪ್ರೇತಾತ್ಮ ಉಚ್ಚಾಟಣೆ ನಡೆಯಲಿದೆ. ಆಗ ಸುತ್ತಮುತ್ತ ಉಚ್ಚಾಟನೆ ವಿಧಿ ವಿಧಾನ ನಡೆಯುತ್ತೆ ಎಂದು ಹೇಳಿದ್ದರು.

ಅಲ್ಲದೆ ಮಂಗಳೂರು ಪೊಲೀಸ್ ಇಲಾಖೆಗೂ ಆಯೋಜಕರು ಮನವಿ ಮಾಡಲಾಗಿತ್ತು. ಸುಮಾರು 3-4 ಕಿಮೀ ರಸ್ತೆಯಲ್ಲಿ ವಾಹನ ಹಾಗೂ ಜನ ಸಂಚಾರವನ್ನು ನಿಷೇಧಿಸಿದ್ದು, ಅಂದರೆ ಸುಮಾರು ಐದು ಗಂಟೆಗಳ ಕಾಲ ಮಂಗಳೂರಿನ ಪ್ರಮುಖ ರಸ್ತೆ ಕೊಟ್ಟಾರ ಬಂದ್‌ ಆಗಿತ್ತು ಎನ್ನಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…