tamanvi
ಕರಾವಳಿ

ಸೇತುವೆಗಳ ಬಳಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿ: ಉಸ್ತುವಾರಿ ಸಚಿವ ಸೂಚನೆ

D_shiva_bhat
ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಸೇತುವೆಗಳ ಎರಡೂ ಬದಿಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ಮುಖ್ಯ ರಸ್ತೆಗಳ ಸೇತುವೆಗಳ ಎರಡೂ ಬದಿಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಸುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದರು

maithri

ಪೊಳಲಿ-ಅದ್ದೂರು ರಾಜ್ಯ ಹೆದ್ದಾರಿ ಸೇತುವೆಯನ್ನು ಬಲಪಡಿಸುವ ಕಾಮಗಾರಿಯನ್ನು ಬುಧವಾರ ವೀಕ್ಷಿಸಿದ ಬಳಿಕ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಸೇತುವೆಯ 500 ಮೀಟರ್ ವ್ಯಾಪ್ತಿಯಲ್ಲಿ ಮರಳನ್ನು ತೆಗೆಯಬಾರದೆಂಬ ನಿಯಮ ಇದೆ. ಆದರೂ ಸೇತುವೆಗಳ ಆಸುಪಾಸಿನಲ್ಲಿ ನದಿಯಲ್ಲಿ ಮರಳನ್ನು ತೆಗೆಯಲಾಗುತ್ತಿದೆ. ಇದರಿಂದ ಸೇತುವೆಗಳು ದುರ್ಬಲವಾಗುತ್ತಿರುವ ಬಗ್ಗೆ ದೂರುಗಳು ಬಂದಿವೆ. ನದಿಯಲ್ಲಿ ಮರಳುಗಾರಿಕೆ ನಡೆಸಿದ್ದರಿಂದ ಕೆಲವೆಡೆ ಸೇತುವೆಗಳು ದುರ್ಬಲಗೊಂಡಿವೆ. ಈ ರೀತಿ ಅಕ್ರಮವಾಗಿ ನದಿಯಿಂದ ಮರಳು ತೆಗೆಯುವುದನ್ನು ತಡೆಯಲು ಎಲ್ಲಾ ಪ್ರಮುಖ ಸೇತುವೆಗಳ ಎರಡು ಬದಿಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾ ವಹಿಸಬೇಕು’ ಎಂದು ಸಚಿವರು ನಿರ್ದೇಶನ ನೀಡಿದರು.

‘ಅದ್ದೂರು ಸೇತುವೆ ಬಲಪಡಿಸುವ ಕಾಮಗಾರಿಯನ್ನು ಸುಮಾರು ₹ 6.10 ಕೋಟಿ ವೆಚ್ಚದಲ್ಲಿ ನಿರ್ವಹಿಸಲಾಗುತ್ತಿದೆ. ಇಲ್ಲಿ ಹೊಸ ಸೇತುವೆ ನಿರ್ಮಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಲೋಕೋಪಯೋಗಿ ಇಲಾಖೆಗೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…