tamanvi
ಕರಾವಳಿ

3 ದಿನಗಳ ಎಸ್.ಡಿ.ಪಿ. ಕಲೋಪಾಸನಾ 2025ಕ್ಕೆ ಚಾಲನೆ | SDP ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಸಾಂಸ್ಕೃತಿಕ ಕಲಾ ಸಂಭ್ರಮ

D_shiva_bhat
ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಮೂರು ದಿನಗಳ ಸಾಂಸ್ಕೃತಿಕ ಕಲಾ ಸಂಭ್ರಮ ಕಲೋಪಾಸನಾಕ್ಕೆ ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ನಲ್ಲಿ ಶನಿವಾರ ಸಂಜೆ ಚಾಲನೆ ನೀಡಲಾಯಿತು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ಅರ್ಪಿಸುವ ಮೂರು ದಿನಗಳ ಸಾಂಸ್ಕೃತಿಕ ಕಲಾ ಸಂಭ್ರಮ ಕಲೋಪಾಸನಾಕ್ಕೆ ಪರ್ಲಡ್ಕ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ನಲ್ಲಿ ಶನಿವಾರ ಸಂಜೆ ಚಾಲನೆ ನೀಡಲಾಯಿತು.

maithri

ಪಾಣಾಜೆ ಸುಬೋಧ ಶಾಲಾ ನಿವೃತ್ತ ಮುಖ್ಯಶಿಕ್ಷಕ ಪಿ.ಕೃಷ್ಣ ಭಟ್ ದೀಪ ಬೆಳಗಿಸಿ ಚಾಲನೆ ನೀಡಿ ಮಾತನಾಡಿ, ಸಂಗೀತ ಎಂಬುದು ಮನಸ್ಸಿಗೆ ಪುನಶ್ಚೇತನ ನೀಡುವ ಔಷಧಿ. ಈ ನಿಟ್ಟಿನಲ್ಲಿ ಇಂದಿನ ಕಾರ್ಯಕ್ರಮ ಆಯಸ್ಸಿಗೆ ಜೀವ ಕೊಡುವ ಕಾರ್ಯಕ್ರಮ ಆಗಿ ಮೂಡಿ ಬಂದಿದೆ. ದೈವಾನುಗ್ರಹದ ಜತೆ ಪರಿಶ್ರಮ ಇದ್ದರೆ ಎತ್ತರಕ್ಕೆ ಬೆಳೆಯಲು ಸಾಧ್ಯ. ಇಂತಹಾ ಕಾರ್ಯಕ್ರಮಗಳನ್ನು ಏರ್ಪಡಿಸುವ ಡಾ.ಹರಿಕೃಷ್ಣ ಪಾಣಾಜೆಯವರು ಇದಕ್ಕೆ ಉದಾಹರಣೆ. ಬದುಕು ಎಲ್ಲರಿಗೂ ಬೇಕು. ಎಲ್ಲರೂ ಬದುಕುತ್ತಾರೆ. ಬದುಕನ್ನು ನಂಬಿದವರು ಹರಿಕೃಷ್ಣ ಪಾಣಾಜೆಯವರು ಎಂದು ಹೇಳಿದರು.

ಉದ್ಘಾಟನಾ ಸಮಾರಂಭದಲ್ಲಿ ಎಸ್ಡಿಪಿ ರೆಮಿಡೀಸ್ ಆಂಡ್ ರಿಸರ್ಚ್ ಸೆಂಟರ್ ನಿರ್ದೇಶಕ ಡಾ.ಹರಿಕೃಷ್ಣ ಪಾಣಾಜೆ, ನಿರ್ದೇಶಕಿ ರೂಪಲೇಖಾ, ಡಾ.ಕೇದಾರಕೃಷ್ಣ, ಮೇಘನಾ ಪಾಣಾಜೆ, ಮನೇಕ್ ಕಿಶೋರ್, ಗೋಪಾಲ ಪಣಿಕ್ಕರ್, ಗೌರಿ ಪಣಿಕ್ಕರ್ ಉಪಸ್ಥಿತರಿದ್ದರು.

ಉದ್ಘಾಟಕರಾದ ನಿವೃತ್ತ ಶಿಕ್ಷಕ ಪಿ.ಕೃಷ್ಣ ಭಟ್ ಅವರನ್ನು ಗೌರವಿಸಲಾಯಿತು.
ನಿವೃತ್ತ ಪ್ರಾಂಶುಪಾಲ ಎಚ್.ಮಾಧವ ಭಟ್ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಬಳಿಕ ರಂಜನಿ ಗಾಯತ್ರಿ ಅವರ ಕರ್ನಾಟಕ ಶಾಸ್ತ್ರೀಯ ಹಾಡುಗಾರಿಕೆಗೆ ಎಲ್.ರಾಮಕೃಷ್ಣನ್ (ವಯಲಿನ್), ದಿಲ್ಲಿ ಸಾಯಿರಾಮ್ (ಮೃದಂಗ), ವಝಪಿಲ್ಲಿ ಕೃಷ್ಣ ಕುಮಾರ್ (ಘಟಂ)ನಲ್ಲಿ ಸಾಥ್ ನೀಡಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…