Gl
ಕರಾವಳಿ

ಕಾಂತೇರಿ ಜುಮಾದಿಗೆ ‘ಕಾಂತಾರ’ದಂತ ಭೀತಿ!! ಇದು ದಂತಕಥೆಯಲ್ಲ; ನೈಜಕಥೆ-  ಸೆಝ್’ನಿಂದ ಹೊಸ ತಪರಾಕಿ!

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರಿನಲ್ಲಿ ಸರ್ಕಾರಿ ಸ್ವಾಮ್ಯದ ಕಂಪೆನಿಯೊಂದು ತುಳುನಾಡಿನ ದೈವಾರಾಧನೆಗೆ ತಡೆಯೊಡ್ಡುವ ಮೂಲಕ ಭಾರೀ ವಿವಾದ ಸೃಷ್ಟಿಸಿದೆ.

Pashupathi

ಬಜಪೆ ಗ್ರಾಮದ ನೆಲ್ಲಿದಡಿಗುತ್ತಿನ ದೈವ ಕಾಂತೇರಿ ಜುಮಾದಿ ಸ್ಥಾನಕ್ಕೆ ತೆರಳಿ ನಿತ್ಯ ಆರಾಧನೆಗೆ ಮುಂದಿನ ದಿನಗಳಿಂದ ಅವಕಾಶವನ್ನು ನಿರಾಕರಿಸುವ ಮೂಲಕ ಮಂಗಳೂರು ಎಸ್‌ಇಝೆಡ್‌ ಕಂಪನಿ ತುಳುನಾಡಿನ ಆಸ್ಮಿತೆ, ನಂಬಿಕೆ ಮೇಲೆ ಸವಾರಿ ಮಾಡಲು ಹೊರಟಿದೆ.

akshaya college

ಮಂಗಳೂರಿನಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯದ(ಎಸ್‌ಇಝಡ್) ನಡೆ ಸದ್ಯ ಭಾರೀ ವಿವಾದ ಸೃಷ್ಟಿಸಿದೆ. ಎಂಎಸ್‌ಇಝಡ್ ವ್ಯಾಪ್ತಿಯಲ್ಲಿರೋ ಕಾಂತೇರಿ ಜುಮಾದಿ ದೇವಸ್ಥಾನದ ಆಚರಣೆಗೆ ಎಂಎಸ್‌ಇಝಡ್ ಅಧಿಕಾರಿಗಳು ತಡೆ ಒಡ್ಡಿದ ಆರೋಪ ಕೇಳಿ ಬಂದಿದೆ. ಮಂಗಳೂರು ಹೊರವಲಯದ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತುವಿನ ಕಾಂತೇರಿ ಜುಮಾದಿ ದೈವಸ್ಥಾನಕ್ಕೆ 800 ವರ್ಷಗಳ ಇತಿಹಾಸವಿದೆ. ಆದರೆ ಇದೀಗ ನೆಲ್ಲಿದಡಿ ಗುತ್ತಿನ ದೈವಕ್ಕೆ ಹೂವು, ನೀರು ಇಡಲು ಬಿಡುವುದಿಲ್ಲವೆನ್ನುವ ಮೂಲಕ ಎಸ್‌ಇಝೆಡ್ ಅಧಿಕಾರಿಗಳು ವಿವಾದ ಸೃಷ್ಟಿಸಿದ್ದಾರೆ.

ಏನಿದು ಪ್ರಕರಣ?

2006ರಲ್ಲಿ ಕೈಗಾರಿಕಾ ಪ್ರದೇಶಕ್ಕಾಗಿ ಸಾವಿರಾರು ಎಕರೆ ಜನವಸತಿ ಜಾಗ ಸರ್ಕಾರದಿಂದ ಭೂ ಸ್ವಾಧೀನವಾಗಿತ್ತು. ಬಜ್ಪೆ, ಬಾಳ, ಕುತ್ತೆತ್ತೂರು, ಪೆರ್ಮುದೆ ಕಳವಾರು ಗ್ರಾಮದ ಸಾವಿರಾರು ಎಕರೆ ಭೂ ಸ್ವಾಧೀನವಾಗಿತ್ತು. ಸಮೃದ್ಧ ಗದ್ದೆಗಳು, ಸಾವಿರಾರು ನಾಗಬನಗಳು, ಬ್ರಹ್ಮಸ್ಥಾನಗಳು, ದೈವದ ಗುಡಿಗಳು, ಕೆರೆ, ತೊರೆ, ಶಾಲೆ, ಚರ್ಚು, ಮಸೀದಿ ಸಾವಿರಾರು ಮನೆಗಳು ಭೂ ಸ್ವಾಧೀನಕ್ಕೆ ನೆಲಸಮವಾಗಿತ್ತು. ಆದರೆ 800 ವರ್ಷಗಳ ಇತಿಹಾಸವಿದ್ದ ನೆಲ್ಲಿದಡಿ ಗುತ್ತಿನ ದೇವಸ್ಥಾನ ಮುಟ್ಟಲಾಗಲಿಲ್ಲ. ನೆಲ್ಲಿದಡಿ ಗುತ್ತಿನ ಪೂರ್ತಿ ಜಾಗವನ್ನು ಕಂಪನಿ ಬಲಾತ್ಕಾರದಿಂದ ತನ್ನ ಹೆಸರಿಗೆ ಬರೆಸಿಕೊಂಡರೂ ದೈವಸ್ಥಾನ ಮಟ್ಟಲಾಗಲಿಲ್ಲ‌. ಯಾವ ಕಾರಣಕ್ಕೂ ನಾನು ಈ ಮಣ್ಣನ್ನು ಬಿಡುವುದಿಲ್ಲ ಎಂದು ದೈವ ನುಡಿದ ಕಾರಣ ಸಾವಿರಾರು ಎಕರೆ ಕೈಗಾರಿಕಾ ಪ್ರದೇಶದಲ್ಲಿ ಏಕಾಂಗಿಯಾಗಿ ಕಾಂತೇರಿ ಜುಮಾದಿ ದೈವದ ದೈವಸ್ಥಾನ ಈಗಲೂ ಇದೆ. 2016ರಲ್ಲಿ ಕಂಪನಿ ಮತ್ತೊಮ್ಮೆ ನೆಲ್ಲಿದಡಿ ಗುತ್ತನ್ನು ನೆಲಸಮ ಮಾಡಲು ಯತ್ನಿಸಿದರೂ ಆಗಲಿಲ್ಲ. ಕೊನೆಗೆ ಅಂದಿನ ಜಿಲ್ಲಾಧಿಕಾರಿ ದೈವಸ್ಥಾನವನ್ನು ಒಂದು ಸ್ಮಾರಕದ ಹಾಗೆ ಉಳಿಸಿಕೊಳ್ಳುವ ಭರವಸೆ ನೀಡಿದ್ದರು.

ಮಂಗಳೂರು ಎಸ್‌ಇಝೆಡ್‌ ಕಂಪನಿಯು ಭೂ ಸ್ವಾಧೀನದ ವೇಳೆ ನೆಲ್ಲಿದಡಿ ಗುತ್ತಿನ 22 ಮನೆಗಳ ಸ್ಥಳಾಂತರ ಮಾಡಲು ಮನವೊಲಿಸುವ ಸಭೆಯಲ್ಲಿ ದೈವಕ್ಕೆ ನಿತ್ಯ ಹೂ ನೀರು, ಸಂಕ್ರಮಣ, ದೀಪಾವಳಿ, ಚೌತಿ, ಅಷ್ಟಮಿ, ಮಾರಿ ಉತ್ಸವ, ಬಂಡಿ ಉತ್ಸವ, ಚಾವಡಿ ನೇಮ, ಕುಟುಂಬದಲ್ಲೆ ಮೃತಪಟ್ಟರೆ ಅದರ ಕಾರ್ಯಕ್ರಮ ಹೀಗೆ ಹತ್ತು ಹಲವು ಕೆಲಸಗಳನ್ನು ಮಾಡಲು ಅವಕಾಶ ನೀಡುವುದಾಗಿ ಭರವಸೆ ನೀಡಲಾಗಿತ್ತು. 2016ರ ಡಿಸೆಂಬರ್‌ನಲ್ಲಿ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲೂ ಇದೇ ತೀರ್ಮಾನಕ್ಕೆ ಬರಲಾಗಿತ್ತು.

ಅದರಂತೆ ನೆಲ್ಲಿದಡಿಗುತ್ತು ಹಾಗೂ ಊರಿನವರು ಎಂಎಸ್‌ಇಝೆಡ್‌ ಅಧಿಕಾರಿಗಳಿಗೆ ಮಾಹಿತಿ ನೀಡಿ, ದೈವಸ್ಥಾನಕ್ಕೆ ತೆರಳಿ ಸೇವಾ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದರು. ಆದರೆ ಫೆ.12ರಂದು ಸಂಕ್ರಮಣ ಸೇವೆ ಮಾಡಲು ತೆರಳಲು ಮನವಿ ಪತ್ರ ನೀಡುವ ವೇಳೆ ಇದು ಕೊನೆಯ ಅವಕಾಶವಾಗಿದ್ದು, ಮುಂದಿನ ದಿನಗಳಿಂದ ಆರಾಧನೆಗೆ ಅವಕಾಶ ಇರುವುದಿಲ್ಲ ಎಂದು ಎಂಎಸ್‌ಇಝೆಡ್‌ ಕಂಪನಿ ಅಧಿಕಾರಿಗಳು ಹೇಳಿದ್ದಾರೆ.ತುಳುನಾಡಿನ ಅತ್ಯಂತ ಪ್ರಸಿದ್ಧ ದೈವಸ್ಥಾನದಲ್ಲಿ ದೈವಕ್ಕೆ ಹೂವು ನೀರು ಇಡಲು ನಿರ್ಬಂಧ ಹೇರಲಾಗಿದೆ. ಸದ್ಯ ಕಂಪೆನಿ ಅಧಿಕಾರಿಗಳ ನಡೆಯ ವಿರುದ್ದ ಸಾಮಾಜಿಕ ತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ನೆಲ್ಲಿದಡಿ ಗುತ್ತು ಉಳಿಸಿ ಹೆಸರಿನಲ್ಲಿ ಭಾರೀ ಅಭಿಯಾನ ಆರಂಭವಾಗಿದೆ.

ಇನ್ನು ಈ ಕುರಿತಾಗಿ ನೆಲ್ಲಿದಡಿ ಗುತ್ತುವಿನ ಯಜಮಾನ ಲಕ್ಷ್ಮಣ ಚೌಟ ಪ್ರತಿಕ್ರಿಯಿಸಿದ್ದು ಸಂಕ್ರಮಣ ಸೇವೆ ಆಗದೇ ಇದ್ದರೆ ಏನಾಗುತ್ತೆ ಅಂತ ಹೇಳಲು ಸಾಧ್ಯವಿಲ್ಲ, ಅಷ್ಟು ತೊಂದರೆಯಿದೆ ಎಂದಿದ್ದಾರೆ. ಎಸ್‌ಇಝಡ್‌ನವರು, ಅಲ್ಲಿನ ಕಂಪೆನಿಯವರಿಗೆ ಎಲ್ಲಾ ವಿಷಯ ಗೊತ್ತಿದೆ, ಕಷ್ಟಗಳನ್ನ ಅನುಭವಿಸಿಯೂ ಹೀಗೆ ಮಾಡ್ತಾ ಇದಾರೆ. ಈ ಹಿಂದೆ ಭೂ ಸ್ವಾಧೀನ ಆದಾಗಲೂ ದೈವವೇ ನಮಗೆ ಚಾವಡಿ ಬಿಟ್ಟು ಹೋಗಬೇಡ ಅಂದಿತ್ತು. ಹಾಗಾಗಿ ನಾನು ಹೋಗಿಲ್ಲ, ಸತ್ತರೂ ಅಲ್ಲೇ ಸಾಯುತ್ತೇನೆ ಅಂತ ಆ ಜಾಗ ಬಿಡಲೇ ಇಲ್ಲ. ಇದ್ದಬದ್ದವರನ್ನು ಕಾಡಿಬೇಡಿ ನಾವು ಇಷ್ಟರ ತನಕ ಅಲ್ಲಿ ದೈವಾರಾಧನೆ ಮಾಡಿದ್ದೇವೆ. ಇನ್ನು ಮಾಡಲು ಅಸಾಧ್ಯ ಅಂತ ಅವರು ಹೇಳುವಾಗ ನಾವು ಏನು ಮಾಡೋದು ಎಂದು ಪ್ರಶ್ನೆಸಿದ್ದಾರೆ.

ಅಲ್ಲದೆ ಕಂಪೆನಿ ಒಳಗಡೆ ಮೂರು ಮೂರು ಸಲ ಬೆಂಕಿ ಬಿದ್ದಿದೆ. ಆದರೂ ಅವರಿಗೆ ಅರ್ಥ ಆಗಲ್ಲ. ಕಳೆದ ಸಂಕ್ರಮಣದ ದಿನ ನಮಗೆ ತಡೆ ಒಡ್ಡಿದ್ದಾರೆ, ಅಲ್ಲಿಗೆ ಹೋಗಲು ಬಿಡಲ್ಲ ಅಂತ ಗೇಟ್‌ನಲ್ಲಿ ನಿಲ್ಲಿಸಿದ್ದಾರೆ. ಮಾರ್ಚ್‌, ಎಪ್ರಿಲ್‌ನಲ್ಲಿ ಅಲ್ಲಿ ಚಾವಡಿ ನೇಮ, ಬಂಡಿ ಉತ್ಸವಗಳು ನಡೆಯುತ್ತೆ, ಅದಕ್ಕೆ ಏನ್‌ ಮಾಡೋದು? ನಮಗೆ ಯಾವ ಅಧಿಕಾರಿಯನ್ನ ಸಂಪರ್ಕಿಸಿದ್ರೂ ಸಮಸ್ಯೆಗೆ ಪರಿಹಾರವೇ ಸಿಕ್ಕಿಲ್ಲ. ಡಿಸಿ, ಎಸಿ, ಎಂಪಿ, ಎಂಎಲ್‌ಎ ಯಾರನ್ನ ಭೇಟಿಯಾದ್ರೂ ಆಚರಣೆಗೆ ಅನುಮತಿ ಸಿಕ್ಕಿಲ್ಲ. ದೈವಸ್ಥಾನದ ಜಾಗ ಕೈಗಾರೀಕರಣದ ಮಧ್ಯೆಯೂ ಅಲ್ಲಿ ಉಳಿದಿದೆ, ಆದರೆ ಈಗ ಆಚರಣೆಗೆ ಸಮಸ್ಯೆ ಬಂದಿದೆ. ಜನರ ಭಾವನೆಗಳ ಮೇಲೆ ಆಟವಾಡಿ ಕೈಗಾರೀಕರಣ, ಅಭಿವೃದ್ದಿ ನಮಗೆ ಬೇಡವೇ ಬೇಡ. ಎಸ್‌ಇಝಡ್‌ ಅಧಿಕಾರಿಗಳು, ಸ್ಥಳೀಯ ಜಿಲ್ಲಾಡಳಿತ ನೆಲ್ಲಿದಡಿಗುತ್ತು ದೈವಾರಾಧನೆ ನಿಲ್ಲಿಸಬಾರದು.‌ ಈಗ ಅಧಿಕಾರಿಗಳು ತಡೆ ಒಡ್ಡಿದ ಕಾರಣದಿಂದ ಗ್ರಾಮದ ಜನರಿಗೆ ದೈವದ ಪ್ರಸಾದ ಸಿಗದಂತೆ ಆಗಿದೆ ಎಂದಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕರಾವಳಿಗೆ ವಿಶೇಷ ಕಾರ್ಯಪಡೆ: ಉದ್ಘಾಟಿಸಿದ ಗೃಹ ಸಚಿವ! ಕೋಮು ಸಂಘರ್ಷ ತಡೆಯಲು ಸ್ಪೆಷಲ್ ಆ್ಯಕ್ಷನ್ ಫೋರ್ಸ್ ರಚಿಸಿದ ಸರಕಾರ!

ಮಂಗಳೂರು: ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…