ಶಿಕ್ಷಣ

2025-26ನೇ ಸಾಲಿನಿಂದ ಅಂಬಿಕಾದಲ್ಲಿ ವೇದಗಣಿತ ಹಾಗೂ ಬರವಣಿಗೆ ತರಗತಿ ಆರಂಭ | ಹೆತ್ತವರ ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಘೋಷಣೆ

GL
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು. ಮಕ್ಕಳನ್ನು ಟಿ.ವಿ., ಮೊಬೈಲ್‌ಗಳಿಂದ ದೂರವಿರಿಸಿ ಸಂಸ್ಕಾರಗಳನ್ನು ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.

chennai-shopping
maithri

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ ಸುಬ್ರಮಣ್ಯ ನಟ್ಟೋಜ ಮಾತಾಡಿ ಮಕ್ಕಳಲ್ಲಿ ಶಿಸ್ತು ಅತ್ಯಗತ್ಯವಾಗಿ ಇರಲೇಬೇಕು. ಶಿಸ್ತನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು. 2025-26ನೇ ಸಾಲಿನಿಂದ ವೇದ ಗಣಿತ ಹಾಗೂ ಉತ್ತಮ ಬರವಣಿಗೆಯ ತರಗತಿಗಳನ್ನು ಅಂಬಿಕಾ ವಿದ್ಯಾಲಯದಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಉಪಸ್ಥಿತರಿದ್ದರು. ಶಿಕ್ಷಕಿ ಸುಷ್ಮಾ ಮಿಥುನ್ ಕಾರ್ಯಕ್ರಮ ನಿರ್ವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts