tamanvi
ಶಿಕ್ಷಣ

2025-26ನೇ ಸಾಲಿನಿಂದ ಅಂಬಿಕಾದಲ್ಲಿ ವೇದಗಣಿತ ಹಾಗೂ ಬರವಣಿಗೆ ತರಗತಿ ಆರಂಭ | ಹೆತ್ತವರ ಸಭೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಘೋಷಣೆ

D_shiva_bhat
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್  ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಶನಿವಾರ ಪೋಷಕರ ಸಭೆ ನಡೆಯಿತು. ಈ ಸಂದರ್ಭದಲ್ಲಿ ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಅವರು ಮಾತನಾಡಿ ರಜಾ ದಿನಗಳಲ್ಲಿ ಮಕ್ಕಳು ನಮ್ಮ ಸಂಸ್ಕೃತಿಯ ಬಗ್ಗೆ ಕಲಿಯಲು ಪ್ರೋತ್ಸಾಹಿಸಬೇಕು. ಮಕ್ಕಳನ್ನು ಟಿ.ವಿ., ಮೊಬೈಲ್‌ಗಳಿಂದ ದೂರವಿರಿಸಿ ಸಂಸ್ಕಾರಗಳನ್ನು ನೀಡುವ ಕೆಲಸ ಮಾಡಬೇಕು ಎಂದು ತಿಳಿಸಿದರು.

maithri

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ ಸುಬ್ರಮಣ್ಯ ನಟ್ಟೋಜ ಮಾತಾಡಿ ಮಕ್ಕಳಲ್ಲಿ ಶಿಸ್ತು ಅತ್ಯಗತ್ಯವಾಗಿ ಇರಲೇಬೇಕು. ಶಿಸ್ತನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಉತ್ತಮ ಸಾಧನೆ ಮಾಡಬಹುದು. 2025-26ನೇ ಸಾಲಿನಿಂದ ವೇದ ಗಣಿತ ಹಾಗೂ ಉತ್ತಮ ಬರವಣಿಗೆಯ ತರಗತಿಗಳನ್ನು ಅಂಬಿಕಾ ವಿದ್ಯಾಲಯದಲ್ಲಿ ಆರಂಭಿಸಲಾಗುವುದು ಎಂದು ತಿಳಿಸಿದರು.

ವೇದಿಕೆಯಲ್ಲಿ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ರಾಜಶ್ರೀ ನಟ್ಟೋಜ ಉಪಸ್ಥಿತರಿದ್ದರು. ಶಿಕ್ಷಕಿ ಸುಷ್ಮಾ ಮಿಥುನ್ ಕಾರ್ಯಕ್ರಮ ನಿರ್ವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…