Gl jewellers
ಶಿಕ್ಷಣ

ರಾಷ್ಟ್ರ  ಮಟ್ಟದ ‘ಶಿಕ್ಷಣ ಸೌರಭ’ ಪ್ರಶಸ್ತಿಗೆ ದಿಲೀಪ್ ಕುಮಾರ್ ಆಯ್ಕೆ

ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ‍್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ಕಡಬ ತಾಲೂಕಿನ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಓಂತ್ರಡ್ಕದಲ್ಲಿ ಆಂಗ್ಲ ಭಾಷ ಪದವೀಧರ ಶಿಕ್ಷಕರಾಗಿ ಕರ‍್ಯನಿರ್ವಹಿಸುತ್ತಿರುವ ಶೈಕ್ಷಣಿಕ ಚಿಂತಕ, ಅಂಕಣಕಾರ, ಕಥೆಗಾರ ದಿಲೀಪ್ ಕುಮಾರ್ ಸಂಪಡ್ಕ ಇವರಿಗೆ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ನೀಡುವ ರಾಷ್ಟಿçÃಯ ಶಿಕ್ಷಣ ಸೌರಭ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇವರು ಓಂತ್ರಡ್ಕ ಶಾಲೆಯಲ್ಲಿ ೦೯ ವರ್ಷಗಳಿಂದ ಪದವೀಧರ ಪ್ರಾಥಮಿಕ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಸುಮಾರು ಒಂಭತ್ತು ವರ್ಷಗಳ ಕಾಲ ಬೆಂಗಳೂರಿನ ಪ್ರತಿಷ್ಠಿತ ಸಿ.ಬಿ.ಎಸ್.ಸಿ ಶಾಲೆಗಳಲ್ಲಿ ಶೈಕ್ಷಣಿಕ ಕೋ-ಆರ್ಡಿನೇಟರ್, ಪ್ರಾಂಶುಪಾಲರಾಗಿ ಸಹ ಕಾರ್ಯನಿರ್ವಹಿಸಿರುತ್ತಾರೆ. ಒಟ್ಟು ೧೬ ವರ್ಷಗಳ ಸೇವಾನುಭವನ್ನು ಹೊಂದಿದ್ದಾರೆ. ಶಿಕ್ಷಣ ಇಲಾಖೆಯಲ್ಲಿ ಹಲವು ತರಬೇತಿಗಳಿಗೆ ರಾಜ್ಯ ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಶಿಕ್ಷಕರಿಗೆ ತರಬೇತುದಾರರಾಗಿ ಸೇವೆ ಸಲ್ಲಿಸಿದ್ದಾರೆ. ಕೊರೋನಾ ಕಾಲದಲ್ಲಿ ಕಲಿಕಾ ಚೇತರಿಕೆಯ ೮ನೇ ತರಗತಿಯ ಇಂಗ್ಲೀಷ್ ಕಲಿಕಾ ಹಾಳೆ ತಯಾರಿಕೆಯ ಸಂಪನ್ಮೂಲ ತಂಡದಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿರುತ್ತಾರೆ. ಇವರ ಹಲವು ಲೇಖನಗಳು ರಾಜ್ಯದ ಹಲವು ಪತ್ರಿಕೆಗಳಲ್ಲಿ, ರಾಷ್ಟಿçÃಯ ಮತ್ತು ಅಂತರಾಷ್ಷೀಯ ನಿಯತಕಾಲಿಕೆಗಳಲ್ಲಿ ಕೂಡ ಪ್ರಕಟಗೊಂಡಿದೆ. ಈ ಹಿಂದೆ ಇವರು ಬರೆದಿರುವ ಲೇಖನವನ್ನು ಮೆಚ್ಚಿ ಅಂದಿನ ಶಿಕ್ಷಣ ಸಚಿವರಾಗಿದ್ದ ಶ್ರೀ ಸುರೇಶ್ ಕುಮಾರ್‌ರವರು ಇವರಿಗೆ ದೂರವಾಣಿ ಕರೆ ಮಾಡಿ ಅಂಭಿನAದಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಇದರ ಜೊತೆ ರಾಷ್ಡಿçÃಯ ಮಟ್ಟದಲ್ಲಿ ಶೈಕ್ಷಣಿಕ ಆಡಳಿತ ಸುಧಾರಣೆಗೆ ಭಾರತೀಯ ಶಿಕ್ಷಣ ಸೇವೆ (ಐಇಎಸ್) ಯನ್ನು ಆರಂಭಿಸಬೇಕು ಮತ್ತು ಈ ಪರೀಕ್ಷೆಯನ್ನು ನಡೆಸುವ ನಿಯಮಗಳ ಬಗ್ಗೆ ಇವರು ಸಿದ್ದಪಡಿಸಿದ ಪ್ರಸ್ತಾವನೆಗೆ ಪ್ರಧಾನ ಮಂತ್ರಿಗಳಿAದ ಸ್ಪಂದನೆ ಕೂಡ ದೊರೆತಿರುವುದು ಇವರ ಶೈಕ್ಷಣಿಕ ಚಿಂತನೆಗೆ ಸಾಕ್ಷಿಯಾಗಿದೆ. ಇವರು ರಾಷ್ಟಿçÃಯ ಮತ್ತು ಅಂತರಾಷ್ಷೀಯ ಸಮ್ಮೆಳನಗಳಲ್ಲಿ ಕೂಡ ತಮ್ಮ ಸಂಶೋಧನಾ ಲೇಖನಗಳನ್ನು ಮಂಡಿಸಿರುತ್ತಾರೆ. ಕೆಲವು ಪದವಿ ಮಟ್ಟದ ಪಠ್ಯಪುಸ್ತಕಗಳಿಗೆ ಪಾಠಗಳನ್ನು ಬರೆದಿರುವ ಅನುಭವ ಇವರಿಗಿದೆ. ಕುವೆಂಪು ವಿಶ್ವವಿದ್ಯಾನಿಲಂiÀiದಿAದ ಎಂ.ಎ ಅರ್ಥಶಾಸ್ತçದಲ್ಲಿ ಎಳನೆಯ ರ‍್ಯಾಂಕ್ ಗಳಿಸಿರುವ ಇವರು ಅಳಗಪ್ಪ ವಿಶ್ವವಿದ್ಯಾನಿಲಯಿಂದ ಎಂ.ಎ (ಇಂಗ್ಲೀಷ್), ಕುವೆಂಪು ವಿಶ್ವವಿದ್ಯಾನಿಲಯಿಂದ ಎಂ.ಎ (ಇತಿಹಾಸ), ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಿಂದ ಎಂ.ಇಡಿ (ಶಿಕ್ಷಣ)ಮತ್ತು ಮೈಸ್ ನಿಂದ ಡಿ.ಸಿ.ಎ ಪದವಿಗಳನ್ನು ಪಡೆದಿರುತ್ತಾರೆ. ಕೆ-ಸೆಟ್ ಪರೀಕ್ಷೆಯನ್ನು ಕೂಡ ತೆರ್ಗಡೆ ಹೊಂದಿರುತ್ತಾರೆ. ಇವರು ರಂಗಭೂಮಿ ಕಲಾವಿದರಾಗಿ, ಹಲವಾರು ರಂಗಪ್ರÀದರ್ಶನಗಳಲ್ಲಿ ಸಹ ಹೆಸರು ಮಾಡಿದ್ದಾರೆ. ವಿವಿಧ ಶಿಕ್ಷಕ ಸಂಘಟನೆಗಳ ಮೂಲಕ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ದಿಲೀಪ್ ಕುಮಾರ್‌ರವರ ಶಿಕ್ಷಣ, ಸಂಘಟನೆ ಹಾಗೂ ಸಮಾಜ ಸೇವೆೆಯನ್ನು ಪರಿಗಣಿಸಿ ಭಾನುವಾರ ಶಿವಮೊಗ್ಗದ ಕರ್ನಾಟಕ ಸಂಘದ ಸಭಾಭವನದಲ್ಲಿ ನಡೆದ ರಾಷ್ಟçಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ಹೂವಿನ ಹಡಗಲಿ (ರಿ) ಅಧ್ಯಕ್ಷರಾದ ಶ್ರೀ ಮುಧುನಾಯ್ಕ ಲಂಬಾಣಿ ಇವರ ಸಮ್ಮುಖದಲ್ಲಿ ರಾಷ್ಟçಮಟ್ಟದ ಶಿಕ್ಷಣ ಸೌರಭ ಪ್ರಶಸ್ತಿಯನ್ನು ಪ್ರಧಾನ ಮಾಡಲಾಯಿತು. ಈ ಹಿಂದೆ ಇವರಿಗೆ ಕನ್ನಡ ರಕ್ಷಣಾ ವೇದಿಕೆಯು ರಾಜ್ಯಮಟ್ಟದ ಶಿಕ್ಷಣ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಇತ್ತೀಚಿಗೆ ಇವರ ‘ಕೊರೊನಾ ಕಾಲದ ಮಾತು ಮಂಥನ’ ಎಂಬ ಕೃತಿಯು ಪ್ರಕಟಗೊಂಡಿದೆ. ರಾಜ್ಯ ಮತ್ತು ಜಿಲ್ಲೆಯ ಹಲವು ಸಂಘ, ಸಂಸ್ಥೆಗಳೂ ಸೇರಿದಂತೆ ಶಿಕ್ಷಕರು, ಸಂಘಟನೆಗಳು ಇವರನ್ನು ಅಭಿನಂದಿಸಿವೆ.

Pashupathi
Papemajalu garady
Karnapady garady

ಈ ಸುದ್ದಿಯನ್ನು ಶೇರ್ ಮಾಡಿ

Related Posts

ಅಕ್ಷಯ ಕಾಲೇಜಿನಲ್ಲಿ ‘ಪ್ರಿನ್ಸ್ ಆಂಡ್ ಪ್ರಿನ್ಸೆಸ್’ ಫ್ಯಾಷನ್ ಶೋ| 6 ವಿಭಾಗದಲ್ಲಿ ನಡೆದ ಸ್ಪರ್ಧೆಯ ಬಹುಮಾನ ವಿತರಣೆ

ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ ಹಾಗೂ ಸಾಂಸ್ಕೃತಿಕ ಮತ್ತು ಲಲಿತಕಲಾ ಸಂಘದ ವತಿಯಿಂದ…