tamanvi
ಶಿಕ್ಷಣ

ಭರತನಾಟ್ಯ ವಿದ್ವತ್ ಪರೀಕ್ಷೆ: ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆಯಾದ ಸಿಂಚನ ಲಕ್ಷ್ಮಿ ಕೋಡಂದೂರು

ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾಲಯ ಮೈಸೂರ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕರ್ನಾಟಕ ರಾಜ್ಯ ಡಾ .ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ವಿಶ್ವವಿದ್ಯಾಲಯ ಮೈಸೂರ್ ನಡೆಸಿದ ಕರ್ನಾಟಕ ಶಾಸ್ತ್ರೀಯ ಭರತನಾಟ್ಯ ವಿದ್ವತ್ ಪರೀಕ್ಷೆಯ ಅಂತಿಮ ವಿಭಾಗದಲ್ಲಿ ಸಿಂಚನ ಲಕ್ಷ್ಮಿ ಕೋಡಂದೂರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ.

ಸ್ವರ ಸಿಂಚನ ಕಲಾತಂಡದ ಅರಳು ಪ್ರತಿಭೆಯಾಗಿದ್ದು, ಭರತನಾಟ್ಯದ ಜೊತೆಗೆ ಸಂಗೀತಕ್ಕೂ ಸೈ ಎನಿಸಿ ತನ್ನ ಕಲಾ ಪ್ರೌಢಿಮೆಯನ್ನು ಮೆರೆದಿದ್ದಾರೆ. ಇವರು ವಿವೇಕಾನಂದ ಇಂಜಿನಿಯರಿಂಗ್ ಕಾಲೇಜ್ ಅಂಡ್ ಟೆಕ್ನಾಲಜಿ ಫೈನಲ್ ಇಯರ್ (BE)Data Science ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ.

2024ರ ನವರಾತ್ರಿಗೆ ಧರ್ಮಸ್ಥಳದಲ್ಲಿ ಸಂಗೀತ ಕಚೇರಿ ನೀಡಿದ್ದು ಇವರ ಹೆಗ್ಗಳಿಕೆ.
ಅಲ್ಲದೆ ತೃತೀಯ ವಿಶ್ವ ಹವ್ಯಕ ಸಮ್ಮೇಳನ ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭರತನಾಟ್ಯ ಪ್ರದರ್ಶನವನ್ನು ನೀಡಿದ್ದಾರೆ. ಏಪ್ರಿಲ್ ತಿಂಗಳಲ್ಲಿ ಭರತನಾಟ್ಯ ರಂಗ ಪ್ರವೇಶವನ್ನು ನೀಡಲಿದ್ದಾರೆ. ಇವಳಿಗೆ ಈಗಾಗಲೇ ಪೆರ್ನಾಜೆ ಪ್ರಶಸ್ತಿ, ಗಡಿನಾಡ ದ್ವನಿ ಪ್ರಶಸ್ತಿ ಸೇರಿದಂತೆ ಹಲವಾರು ಸಂಘ ಸಂಸ್ಥೆಗಳು ಗೌರವಿಸಿದೆ.

ಇವರು ಕುಂಬಳೆ ನಾಟ್ಯ ವಿದ್ಯಾಲಯದ ವಿದುಷಿ ಡಾ. ವಿದ್ಯಾ ಲಕ್ಷ್ಮಿ ಇವರ ಶಿಷ್ಯೆ ಹಾಗೂ ವಿಟ್ಲ ಐ ಟಿ ಐ ಸುಪ್ರಜೀತ್ ಕಾಲೇಜಿನ ನಿವೃತ ಪ್ರಾಂಶುಪಾಲ ಕೆ ರಘುರಾಮ ಶಾಸ್ತ್ರಿ ಹಾಗೂ ಸ್ವರ ಸಿಂಚನ ಸಂಗೀತ ಶಾಲೆ ಶಿಕ್ಷಕಿ ಸವಿತಾ ಕೊಡಂದೂರು ಅವರ ಪುತ್ರಿ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…