tamanvi
ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ ಮಾಹಿತಿ ಕಾರ್ಯಕ್ರಮ

D_shiva_bhat
ಇಲ್ಲಿನ ಅಕ್ಷಯ ಕಾಲೇಜು ರಾಷ್ಟ್ರೀಯ  ಸೇವಾ ಯೋಜನೆ ಮತ್ತು ಡಾ  ಕೆ ಶಿವರಾಮ ಕಾರಂತ ಸರಕಾರಿ  ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಯೋಗದಲ್ಲಿ,  ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ  ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಇವುಗಳ ಸಯುಕ್ತ ಆಶ್ರಯದಲ್ಲಿ "ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ" ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:  ಇಲ್ಲಿನ ಅಕ್ಷಯ ಕಾಲೇಜು ರಾಷ್ಟ್ರೀಯ  ಸೇವಾ ಯೋಜನೆ ಮತ್ತು ಡಾ  ಕೆ ಶಿವರಾಮ ಕಾರಂತ ಸರಕಾರಿ  ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇದರ ಸಹಯೋಗದಲ್ಲಿ,  ಸಮಾಜ ಕಾರ್ಯ ವಿಭಾಗ ಮತ್ತು ಪ್ರಜ್ಞಾಶ್ರಮ ಬೌದ್ಧಿಕ  ದಿವ್ಯಾಂಗರ ವಸತಿಯುಕ್ತ ಕೇಂದ್ರ ಬೀರಮಲೆ ಬೆಟ್ಟ ಪುತ್ತೂರು ಇವುಗಳ ಸಯುಕ್ತ ಆಶ್ರಯದಲ್ಲಿ “ಒತ್ತಡ ಮತ್ತು ಮಾನಸಿಕ ಆರೋಗ್ಯ ನಿರ್ವಹಣೆ” ಕಾರ್ಯಕ್ರಮ ಅಕ್ಷಯ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು

ವಿಶೇಷ ಚೇತನರ ವಿವಿದ್ದುದೇಶ ಪುನರ್ವಸತಿ ಪುತ್ತೂರು ತಾಲೂಕು ಇಲ್ಲಿಯ ಕಾರ್ಯಕರ್ತ ನವೀನ್ ಕುಮಾರ್ ಕಾರ್ಯಕ್ರಮವನ್ನು ಉದ್ಘಾಟಿಸಿ, ಪ್ರಸ್ತುತ ಸಮಾಜದಲ್ಲಿ ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಬೀಳುವ ಒತ್ತಡ ಮತ್ತು ಮಾನಸಿಕ ಖಿನ್ನತೆಯ ಕುರಿತು ವಿದ್ಯಾರ್ಥಿಗಳಿಗೆ ಮನದಟ್ಟು ಆಗುವಂತೆ  ಮಾಹಿತಿ ನೀಡಿದರು.

ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಸಂಪತ್ ಕೆ. ಪಕ್ಕಳ, ಇಂದಿನ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳ ಮೇಲೆ ಪ್ರಭಾವ ಬೀರುವ ಮಾನಸಿಕ ಖಿನ್ನತೆಗೆ ವೈದ್ಯಕೀಯ ಚಿಕಿತ್ಸೆಯ ಜೊತೆಗೆ ದೈವದೇವರ ಮೇಲಿಡುವ ನಂಬಿಕೆಯೂ ಫಲಕಾರಿಯಾಗಬಹುದು ಎಂದು ಹೇಳಿದರು.

ವೇದಿಕೆಯಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮಾಕಾರಿಗಳಾದ ಕಿಶೋರ್ ಕುಮಾರ್ ರೈ ಮತ್ತು ಮೇಘಶ್ರೀ ಉಪಸ್ಥಿತರಿದ್ದರು.ಡಾI ಕೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ಬೆಳ್ಳಾರೆ ಇಲ್ಲಿಯ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಗಿರೀಶ್ ಸಿ ಆರ್ ಪ್ರಾಸ್ತಾವಿಕವಾಗಿ ಮಾತನಾಡಿದರು. 

ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಾದ ಅಶೋಕ್ ಸ್ವಾಗತಿಸಿ, ಲಿಖಿನ್ ವಂದಿಸಿದರು. ಅಕ್ಷಯ ಕಾಲೇಜಿನ ವಿದ್ಯಾರ್ಥಿ ಕೀರ್ತನ್ ಕೃಷ್ಣ ಪ್ರಾರ್ಥಿಸಿದರು. ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.

 


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…