tamanvi
ಶಿಕ್ಷಣ

ರಾಜ್ಯದ ಎಲ್ಲಾ ಶಾಲೆಗಳಲ್ಲೂ ಹೆಣ್ಣು ಮಕ್ಕಳಿಗೆ ಶೇ.50 ಮೀಸಲು, ಶಿಕ್ಷಣ ಇಲಾಖೆ ಮಹತ್ವದ ಆದೇಶ!

ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಅಂಶಗಳ ಸುತ್ತೋಲೆ ಹೊರಡಿಸಿದೆ

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್ ಸೇರಿ ಸಹಶಿಕ್ಷಣ ಹೊಂದಿರುವ ರಾಜ್ಯದ ಎಲ್ಲಾ ಮಾದರಿ ಖಾಸಗಿ ಶಾಲೆಗಳಲ್ಲೂ ಶೇ.50ರಷ್ಟು ಸೀಟುಗಳನ್ನು ಹೆಣ್ಣು ಮಕ್ಕಳಿಗೆ ಕಡ್ಡಾಯವಾಗಿ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸೂಚಿಸಿದೆ.2025-26ನೇ ಶೈಕ್ಷಣಿಕ ಸಾಲಿಗೆ ಖಾಸಗಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಸಂಬಂಧಿಸಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಹಲವು ಅಂಶಗಳ ಸುತ್ತೋಲೆ ಹೊರಡಿಸಿರುವ ಇಲಾಖೆ ಆಯುಕ್ತ ತ್ರಿಲೋಕ್ ಚಂದ್ರ, ಸಹಶಿಕ್ಷಣ ಹೊಂದಿರುವ ಶಾಲೆಗಳಲ್ಲಿ ಕಡ್ಡಾಯವಾಗಿ ಮೀಸಲಾತಿಯನ್ವಯ ಒಟ್ಟು ಪ್ರವೇಶದಲ್ಲಿ ಶೇ.50ರಷ್ಟು ಸ್ಥಳಾವಕಾಶಗಳನ್ನು ಹೆಣ್ಣುಮಕ್ಕಳಿಗೆ ಕಡ್ಡಾಯವಾಗಿ ನೀಡಬೇಕು. ಶೇ.50ರಷ್ಟು ಸೀಟುಗಳ ಪ್ರವೇಶಕ್ಕೆ ಹೆಣ್ಣು ಮಕ್ಕಳು ದೊರೆಯದೆ ಹೋದಲ್ಲಿ ಉಳಿಯುವ ಸೀಟುಗಳನ್ನು ಮೀಸಲಾತಿ ನಿಯಮದಂತೆ ಗಂಡು ಮಕ್ಕಳಿಗೆ ನೀಡಬೇಕು ಎಂದು ಸೂಚಿಸಿದ್ದಾರೆ.

ಶಾಲಾ ಪ್ರವೇಶಕ್ಕಾಗಿ ವಿದ್ಯಾರ್ಥಿಯನ್ನಾಗಲಿ, ಅವರ ಪೋಷಕರನ್ನಾಗಲಿ ಪರೀಕ್ಷಿಸುವುದು ಅಥವಾ ಸಂದರ್ಶನ ನಡೆಸುವುದು ಕಾನೂನು ಬಾಹಿರ. ಪ್ರತಿ ಶಾಲೆಯೂ ನಿಗದಿತ ಶುಲ್ಕದ ಮೊತ್ತವನ್ನು ಸಾರ್ವಜನಿಕ ಮಾಹಿತಿಗೆ ಶಾಲೆಯ ನೋಟಿಸ್‌ ಬೋರ್ಡ್, ಜಾಲತಾಣ ಮತ್ತು ಎಸ್‌ಎಟಿಎಸ್ ತಂತ್ರಾಂಶದಲ್ಲಿ ಪ್ರಕಟಿಸಬೇಕು. ಶಾಲೆ ಮಾಹಿತಿ ಪುಸ್ತಕದಲ್ಲೂ ಮುದ್ರಿಸಬೇಕೆಂದು. ಈ ಶುಲ್ಕ ಹೊರತುಪಡಿಸಿ ಕ್ಯಾಪಿಟೇಷನ್‌ ಶುಲ್ಕವಸೂಲಿ ಮಾಡುವಂತಿಲ್ಲ. ಈ ನಿಯಮಗಳನ್ನು ಉಲ್ಲಂಘಿಸಿದರೆ ದಂಡ ವಿಧಿಸುವ ಹಾಗೂ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…