ಪುತ್ತೂರು: ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ ಆರಂಭವಾಗುವುದೇ ಹಲ್ಲುಜ್ಜುವ ಪ್ಲಾಸ್ಟಿಕ್ ಬ್ರಷ್ನಿಂದ. ಸೌಂದರ್ಯ ವರ್ಧಕಗಳು, ಫೇಸ್ ಮಾಸ್ಕ್, ತಿನ್ನುವ ಆಹಾರ, ಕುಡಿಯುವ ನೀರು ಇವೆಲ್ಲವೂ ಪ್ಲಾಸ್ಟಿಕ್ನಿಂದ ಕೂಡಿವೆ. ಆದ್ದರಿಂದಲೇ ಒಂದಲ್ಲ ಒಂದು ರೀತಿಯ ಅರೋಗ್ಯ ಸಮಸ್ಯೆಗಳು ಮನುಷ್ಯನನ್ನು ಭಾದಿಸುತ್ತಲೇ ಇರುತ್ತವೆ ಎಂದು ಪುತ್ತೂರು ಉಪವಲಯ ಅರಣ್ಯ ಅಧಿಕಾರಿ ಉಲ್ಲಾಸ್ ಕೆ. ಇವರು ಮಾತನಾಡಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯಲ್ಲಿ ಗುರುವಾರ ಆಚರಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ಲಾಸ್ಟಿಕ್ ನಿರ್ಮೂಲನೆಗೆ ಕ್ರಮ ಕೈಗೊಂಡು ಏಳು ವರ್ಷಗಳಾದರು ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿಲ್ಲ. ನಾವು ಪ್ರತಿನಿತ್ಯ ಪ್ಲಾಸ್ಟಿಕ್ ಬಳಸುವುದನ್ನು ಕಡಿಮೆ ಮಾಡಿ ಬಯೋ ಡಿಗ್ರೆಡೆಬಲ್ ಉತ್ಪನ್ನಗಳನ್ನು ಬಳಸುವುದರಿಂದ ಸ್ವಲ್ಪ ಮಟ್ಟಿನ ಬದಲಾವಣೆಗಳನ್ನು ತರಲು ಸಾಧ್ಯ ಎಂದ ರಲ್ಲದೆ ಭೂಮಿಯ ಬಗೆಗೆ ಕಾಳಜಿಯನ್ನು ವಹಿಸಿ, ಅದನ್ನು ಸಂರಕ್ಷಿಸುವ ಸಲುವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಬೇಕೆನ್ನುವ ತೀರ್ಮಾನವನ್ನು ವಿಶ್ವಸಂಸ್ಥೆಯು 1972 ರಲ್ಲಿ ಕೈಗೊಂಡಿತು. ಅದರನ್ವಯ ನಾವು ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸುತ್ತೇವೆ ಎಂದು ಇತಿಹಾಸದೆಡೆಗೆ ಬೆಳಕು ಚೆಲ್ಲಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಪ್ಲಾಸ್ಟಿಕ್ ಎಂಬುದು ಪರಿಸರಕ್ಕೆ ಹಾನಿಕಾರಕ. ಅದು ಮಣ್ಣಲ್ಲಿ ಮಣ್ಣಾಗುವುದಿಲ್ಲ, ನೀರಲ್ಲಿ ಕರಗುವುದಿಲ್ಲ, ಬೆಂಕಿಯಲ್ಲಿ ಸುಡುವುದಿಲ್ಲ. ಹಾಗಾಗಿ ನಾವು ಪ್ಲಾಸ್ಟಿಕ್ ಕೈ ಚೀಲ ಬಳಸುವುದರ ಬದಲು ಬಟ್ಟೆಯ ಕೈಚೀಲವನ್ನು ಬಳಸಬೇಕು. ಪ್ರಕೃತಿಯನ್ನು ಉಳಿಸುವುದು, ಸಂರಕ್ಷಿಸುವುದು ನಮ್ಮ ಕರ್ತವ್ಯ. ಪ್ರಕೃತಿಯನ್ನು ನಾವು ಸಂರಕ್ಷಿಸದೇ ಇದ್ದಲ್ಲಿ ಪ್ರಕೃತಿಯಲ್ಲಿ ಖಂಡಿತವಾಗಿ ನಮ್ಮ ಅಸ್ತಿತ್ವ ಇರಲು ಸಾಧ್ಯವಿಲ್ಲ ಎಂದರು.
10ನೇ ತರಗತಿ ವಿದ್ಯಾರ್ಥಿನಿ ತನ್ವಿ ಯು. ಪರಿಸರ ಮಾಲಿನ್ಯದ ಕುರಿತು ಮಾತನಾಡಿದರೆ, ೮ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಹವಾಮಾನದ ಕುರಿತು, 7ನೇ ತರಗತಿ ವಿದ್ಯಾರ್ಥಿನಿ ಶಾಂಭವಿ ರಂಜನ್ ಪ್ರಕೃತಿಯ ವೈಶಿಷ್ಟ್ಯತೆಯ ಕುರಿತು ಮಾಹಿತಿಯನ್ನು ಹಂಚಿಕೊAಡರು. ವೇದಿಕೆಯಲ್ಲಿ ಶಾಲಾ ಪ್ರಂಶುಪಾಲೆ ಮಾಲತಿ ಡಿ. ಭಟ್ ಉಪಸ್ಥಿತರಿದ್ದರು.
9ನೇ ತರಗತಿಯ ವಿದ್ಯಾರ್ಥಿನಿ ದ್ವಿತಿ ಸ್ವಾಗತಿಸಿ, 9ನೇ ತರಗತಿಯ ವಿದ್ಯಾರ್ಥಿ ಯಶಸ್ ವಂದಿಸಿದರು. 8ನೇ ತರಗತಿಯ ವಿದ್ಯಾರ್ಥಿ ಶ್ರೀರಾಮ್ ಕಾರ್ಯಕ್ರಮ ನಿರೂಪಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ | ಪ್ಲಾಸ್ಟಿಕ್’ನಿಂದ ಪರಿಸರ ಮತ್ತು ಆರೋಗ್ಯ ಹಾನಿ : ಉಲ್ಲಾಸ್ ಕೆ.
ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ ಆರಂಭವಾಗುವುದೇ ಹಲ್ಲುಜ್ಜುವ ಪ್ಲಾಸ್ಟಿಕ್ ಬ್ರಷ್ನಿಂದ. ಸೌಂದರ್ಯ ವರ್ಧಕಗಳು, ಫೇಸ್ ಮಾಸ್ಕ್, ತಿನ್ನುವ ಆಹಾರ, ಕುಡಿಯುವ ನೀರು ಇವೆಲ್ಲವೂ ಪ್ಲಾಸ್ಟಿಕ್ನಿಂದ ಕೂಡಿವೆ. ಆದ್ದರಿಂದಲೇ ಒಂದಲ್ಲ ಒಂದು ರೀತಿಯ ಅರೋಗ್ಯ ಸಮಸ್ಯೆಗಳು ಮನುಷ್ಯನನ್ನು ಭಾದಿಸುತ್ತಲೇ ಇರುತ್ತವೆ ಎಂದು ಪುತ್ತೂರು ಉಪವಲಯ ಅರಣ್ಯ ಅಧಿಕಾರಿ ಉಲ್ಲಾಸ್ ಕೆ. ಇವರು ಮಾತನಾಡಿದರು.
What's your reaction?
- 594c
- 494cc
- 4ai technology
- 4alwas
- 4apology
- 4artificial intelegence
- 4avg
- 4bihar minister
- 4bjp
- 4bjp leader
- 4bjp national president
- 4bt ranjan
- 4co-operative
- 4coastal
- 3crime news
- 3darmasthala
- 3death news
- 3dust bin
- 3education
- 3gl
- 3gods own country
- 3google for education
- 3independence
- 3jewel
- 3jewellers
- 3jnana vikasa
- 2karnataka state
- 2kerala village
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 2mohan alwa
- 2mudubidre
- 2nidana news
- 2nirvathu mukku
- 2nitin nabin
- 2ptr tahasildar
- 1puttur
- 1puttur news
- 1puttur tahasildar
- 1republic
- 1revenue
- 1revenue department
- 1revenue minister
- 1school
- 1society
- 1sowmya
- 1students
- 1tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಹೊಸ ಶಾಲೆ ಆರಂಭಕ್ಕೆ ಇನ್ಮುಂದೆ ಬೇಕು ಈ 3 ಹೊಸ ಸರ್ಟಿಫಿಕೇಟ್!!
ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ದಿನದಿಂದ ದಿನಕ್ಕೆ…
ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು…
ತೃತೀಯ ಭಾಷೆ ಹಿಂದಿಗೆ ಕಡ್ಡಾಯ ತೇರ್ಗಡೆ ಬೇಡ: ಒತ್ತಾಯ
2025-26ನೇ ಸಾಲಿನ ಎಸ್ಎಸ್ಎಲ್ಸಿ (SSLC) ಪರೀಕ್ಷೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ,…
ಪಿಜಿ ನೀಟ್ 2025 ಸೀಟು ಹಂಚಿಕೆ, ಫಾರ್ಮಾ ಕೋರ್ಸ್ಗಳ ಅಪ್ಡೇಟ್ ನೀಡಿದ ಕೆಇಎ
ಬೆಂಗಳೂರು: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- ಸ್ನಾತಕೋತ್ತರ (PGNEET 2025)…
ಯುವಜನತೆ ಡಿಜಿಟಲ್ ಸಾಕ್ಷರತೆಯ ರಾಯಭಾರಿಗಳಾಗಲಿ: ಅಮ್ಮಣ್ಣ ರೈ | ಪಾಪೆಮಜಲು ಶಾಲೆಯಲ್ಲಿ ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ
ಪುತ್ತೂರು: ವಿದ್ಯಾರ್ಥಿ ಜೀವನದಲ್ಲಿ ಸಮಯದ ಪಾಲನೆ ಅತ್ಯಂತ ಮುಖ್ಯ. ಶಿಸ್ತು ಮತ್ತು ಸೇವಾ…
ಕಿರುಕುಳ: ಹಾರಾಡಿ ಶಾಲಾ ವಿದ್ಯಾರ್ಥಿಯಿಂದ ಶಾಸಕರಿಗೆ ಮನವಿ! ವಿದ್ಯಾರ್ಥಿ ಜೊತೆ ನಿಂತ ಶಿಕ್ಷಕರು, ಪೋಷಕರು!!
ಪುತ್ತೂರು: ಹಾರಾಡಿ ಸರಕಾರಿ ಹಿ ಪ್ರಾ ಶಾಲೆಯಲ್ಲಿನ ವಿದ್ಯಾರ್ಥಿಯ ಪೋಷಕನೋರ್ವ ಶಾಲೆಯ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…
ಅಂಬಿಕಾ ಸಂಸ್ಥೆಯಲ್ಲಿ ಪರಾಕ್ರಮ ದಿವಸ್, ವಸಂತ ಪಂಚಮಿ ಆಚರಣೆ | ದೇಶಕ್ಕಾಗಿ ಸಮರ್ಪಿಸಿಕೊಂಡವರು ಸುಭಾಷ್ ಚಂದ್ರ ಬೋಸ್ : ಆದರ್ಶ ಗೋಖಲೆ
ಪುತ್ತೂರು: ಸ್ವಾತಂತ್ರ್ಯವನ್ನು ನಾವು ಬೇಡಿಕೊಳ್ಳಬೇಕಾಗಿಲ್ಲ, ಪರಕೀಯರನ್ನು ದೇಶದಿಂದ…
ಡಿಸೆಂಬರ್ 27 : ಪರಮವೀರ ಚಕ್ರ ಪ್ರಶಸ್ತಿ ಪುರಸ್ಕೃತ ಲೆಫ್ಟಿನೆಂಟ್ ಸಂಜಯ್ ಕುಮಾರ್ ಅವರೊಂದಿಗೆ ವಿದ್ಯಾರ್ಥಿ ಸಂವಾದ | ನ್ಯಾಶನಲ್ ಡಿಫೆನ್ಸ್ ಅಕಾಡೆಮಿ ಸೇರಬಯಸುವವರಿಗೆ ಸಮಗ್ರ ಮಾಹಿತಿ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…




















