ಪುತ್ತೂರು: ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ ಆರಂಭವಾಗುವುದೇ ಹಲ್ಲುಜ್ಜುವ ಪ್ಲಾಸ್ಟಿಕ್ ಬ್ರಷ್ನಿಂದ. ಸೌಂದರ್ಯ ವರ್ಧಕಗಳು, ಫೇಸ್ ಮಾಸ್ಕ್, ತಿನ್ನುವ ಆಹಾರ, ಕುಡಿಯುವ ನೀರು ಇವೆಲ್ಲವೂ ಪ್ಲಾಸ್ಟಿಕ್ನಿಂದ ಕೂಡಿವೆ. ಆದ್ದರಿಂದಲೇ ಒಂದಲ್ಲ ಒಂದು ರೀತಿಯ ಅರೋಗ್ಯ ಸಮಸ್ಯೆಗಳು ಮನುಷ್ಯನನ್ನು ಭಾದಿಸುತ್ತಲೇ ಇರುತ್ತವೆ ಎಂದು ಪುತ್ತೂರು ಉಪವಲಯ ಅರಣ್ಯ ಅಧಿಕಾರಿ ಉಲ್ಲಾಸ್ ಕೆ. ಇವರು ಮಾತನಾಡಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯಲ್ಲಿ ಗುರುವಾರ ಆಚರಿಸಲಾದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.
ಪ್ಲಾಸ್ಟಿಕ್ ನಿರ್ಮೂಲನೆಗೆ ಕ್ರಮ ಕೈಗೊಂಡು ಏಳು ವರ್ಷಗಳಾದರು ಅದರ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿಲ್ಲ. ನಾವು ಪ್ರತಿನಿತ್ಯ ಪ್ಲಾಸ್ಟಿಕ್ ಬಳಸುವುದನ್ನು ಕಡಿಮೆ ಮಾಡಿ ಬಯೋ ಡಿಗ್ರೆಡೆಬಲ್ ಉತ್ಪನ್ನಗಳನ್ನು ಬಳಸುವುದರಿಂದ ಸ್ವಲ್ಪ ಮಟ್ಟಿನ ಬದಲಾವಣೆಗಳನ್ನು ತರಲು ಸಾಧ್ಯ ಎಂದ ರಲ್ಲದೆ ಭೂಮಿಯ ಬಗೆಗೆ ಕಾಳಜಿಯನ್ನು ವಹಿಸಿ, ಅದನ್ನು ಸಂರಕ್ಷಿಸುವ ಸಲುವಾಗಿ ವಿಶ್ವ ಪರಿಸರ ದಿನವನ್ನು ಆಚರಿಸಬೇಕೆನ್ನುವ ತೀರ್ಮಾನವನ್ನು ವಿಶ್ವಸಂಸ್ಥೆಯು 1972 ರಲ್ಲಿ ಕೈಗೊಂಡಿತು. ಅದರನ್ವಯ ನಾವು ಜೂನ್ 5ರಂದು ವಿಶ್ವ ಪರಿಸರ ದಿನವನ್ನು ಆಚರಿಸುತ್ತೇವೆ ಎಂದು ಇತಿಹಾಸದೆಡೆಗೆ ಬೆಳಕು ಚೆಲ್ಲಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಮಾತನಾಡಿ ಪ್ಲಾಸ್ಟಿಕ್ ಎಂಬುದು ಪರಿಸರಕ್ಕೆ ಹಾನಿಕಾರಕ. ಅದು ಮಣ್ಣಲ್ಲಿ ಮಣ್ಣಾಗುವುದಿಲ್ಲ, ನೀರಲ್ಲಿ ಕರಗುವುದಿಲ್ಲ, ಬೆಂಕಿಯಲ್ಲಿ ಸುಡುವುದಿಲ್ಲ. ಹಾಗಾಗಿ ನಾವು ಪ್ಲಾಸ್ಟಿಕ್ ಕೈ ಚೀಲ ಬಳಸುವುದರ ಬದಲು ಬಟ್ಟೆಯ ಕೈಚೀಲವನ್ನು ಬಳಸಬೇಕು. ಪ್ರಕೃತಿಯನ್ನು ಉಳಿಸುವುದು, ಸಂರಕ್ಷಿಸುವುದು ನಮ್ಮ ಕರ್ತವ್ಯ. ಪ್ರಕೃತಿಯನ್ನು ನಾವು ಸಂರಕ್ಷಿಸದೇ ಇದ್ದಲ್ಲಿ ಪ್ರಕೃತಿಯಲ್ಲಿ ಖಂಡಿತವಾಗಿ ನಮ್ಮ ಅಸ್ತಿತ್ವ ಇರಲು ಸಾಧ್ಯವಿಲ್ಲ ಎಂದರು.
10ನೇ ತರಗತಿ ವಿದ್ಯಾರ್ಥಿನಿ ತನ್ವಿ ಯು. ಪರಿಸರ ಮಾಲಿನ್ಯದ ಕುರಿತು ಮಾತನಾಡಿದರೆ, ೮ನೇ ತರಗತಿ ವಿದ್ಯಾರ್ಥಿನಿ ಅನ್ವಿತಾ ಹವಾಮಾನದ ಕುರಿತು, 7ನೇ ತರಗತಿ ವಿದ್ಯಾರ್ಥಿನಿ ಶಾಂಭವಿ ರಂಜನ್ ಪ್ರಕೃತಿಯ ವೈಶಿಷ್ಟ್ಯತೆಯ ಕುರಿತು ಮಾಹಿತಿಯನ್ನು ಹಂಚಿಕೊAಡರು. ವೇದಿಕೆಯಲ್ಲಿ ಶಾಲಾ ಪ್ರಂಶುಪಾಲೆ ಮಾಲತಿ ಡಿ. ಭಟ್ ಉಪಸ್ಥಿತರಿದ್ದರು.
9ನೇ ತರಗತಿಯ ವಿದ್ಯಾರ್ಥಿನಿ ದ್ವಿತಿ ಸ್ವಾಗತಿಸಿ, 9ನೇ ತರಗತಿಯ ವಿದ್ಯಾರ್ಥಿ ಯಶಸ್ ವಂದಿಸಿದರು. 8ನೇ ತರಗತಿಯ ವಿದ್ಯಾರ್ಥಿ ಶ್ರೀರಾಮ್ ಕಾರ್ಯಕ್ರಮ ನಿರೂಪಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ | ಪ್ಲಾಸ್ಟಿಕ್’ನಿಂದ ಪರಿಸರ ಮತ್ತು ಆರೋಗ್ಯ ಹಾನಿ : ಉಲ್ಲಾಸ್ ಕೆ.
Related Posts
ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ | ಅಧಿಕಾರಿ, ಜನಪ್ರತಿನಿಧಿಗಳಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳು: 9.30ಕ್ಕೆ ಪ್ರಾರಂಭವಾಗಬೇಕಾದ ಕಾರ್ಯಕ್ರಮ ಶುರುವಾದದ್ದು 11 ಗಂಟೆಗೆ!!
ಪುತ್ತೂರು: ಜೂನ್ 1 ಭಾನುವಾರ. ಹಾಗೂ ಶೈಕ್ಷಣಿಕ ವರ್ಷಾರಂಭ ಜೂನ್ 2ರ ಸೋಮವಾರ. ಹಾಗಾಗಿ ಪುತ್ತೂರು…
ಹಾರಾಡಿ ಶಾಲೆಯಲ್ಲಿ ಮೇಳೈಸಿದ ಶಾಲಾ ಪ್ರಾರಂಭೋತ್ಸವ
ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ…
ಮೈಸೂರು ವಿವಿಯ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ ಸಚಿವ!
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ…
ದೂಮಡ್ಕ: ಪರಿಸರ ದಿನ, ಕೊಡೆ ವಿತರಣೆ
ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ್ಯಾಂಕ್
ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್…
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ | ಕರಾವಳಿಗೆ ಒಲಿದ ಮೊದಲೆರಡು ಸ್ಥಾನ
ರಾಜ್ಯದಲ್ಲಿ ಎಸ್ಎಸ್ಎಲ್ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ…
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ | ಕರಾವಳಿಗೆ ಒಲಿದ ಮೊದಲೆರಡು ಸ್ಥಾನ
ರಾಜ್ಯದಲ್ಲಿ ಎಸ್ಎಸ್ಎಲ್ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ…
ಮೇಗಿನಪೇಟೆ: ಅಕ್ಷಯ ಕಾಲೇಜಿನ ಎನ್ಎಸ್ಎಸ್ ಶಿಬಿರ ಸಂಪನ್ನ
ಅಕ್ಷಯ ಕಾಲೇಜಿನ ರಾ.ಸೇ.ಯೋ. ಘಟಕಗಳ ವಾರ್ಷಿಕ ವಿಶೇಷ ಶಿಬಿರ ಮೇಗಿನಪೇಟೆ ದ.ಕ.ಜಿ.ಪಂ. ಹಿರಿಯ…