ಪುತ್ತೂರು: ಮಕ್ಕಳು ಹೆತ್ತವರನ್ನು ಅನುಕರಣೆ ಮಾಡುವುದರ ಮೂಲಕ ಕಲಿಯುತ್ತಾರೆ. ಹಾಗಾಗಿ ಪೋಷಕರಾದವರು ಮಕ್ಕಳಿಗೋಸ್ಕರ ಬದಲಾಗಬೇಕು. ಕೇವಲ ಅಂಕ ಗಳಿಸುವುದು ನಿಜವಾದ ಶಿಕ್ಷಣ ಎಂಬ ತಪ್ಪು ಕಲ್ಪನೆಯಲ್ಲಿ ಅನೇಕ ಪೋಷಕರಿದ್ದಾರೆ. ಆದರೆ ಮಗುವಿನಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಧರ್ಮ ಪ್ರಜ್ಞೆ, ದೇಶಪ್ರೇಮವನ್ನು ಬೆಳೆಸುವುದು ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಆಯೋಜಿಸಲಾದ ರಕ್ಷಕ ಶಿಕ್ಷಕ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗಿಡವಾಗಿ ಬಗ್ಗದ್ದು ಮರವಾಗಿ ಬಗ್ಗೀತೆ ಎಂಬ ಮಾತಿನಂತೆ ಧಾರ್ಮಿಕ ವಿಚಾರಗಳನ್ನು ಮಕ್ಕಳಿಗೆ ಬಾಲ್ಯದಲ್ಲೇ ನೀಡಬೇಕು. ತಪ್ಪಿದಲ್ಲಿ, ನಂತರದ ದಿನಗಳಲ್ಲಿ ನಾವು ಅಸಹಾಯಕರಾಗಬೇಕಾಗುತ್ತದೆ. ಆದ್ದರಿಂದ ಹೆತ್ತವರು ಶಾಲೆಗೆ ಸೇರಿಸುವುದಷ್ಟೇ ಅಲ್ಲದೆ ಮಕ್ಕಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು. ಉತ್ಕೃಷ್ಟ ನಾಗರಿಕರನ್ನಾಗಿ ಅವರನ್ನು ಬೆಳೆಸಬೇಕು ಎಂದರು.
ಸಂಸ್ಥೆಯ ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ, ಪುತ್ತೂರು ತಾಲೂಕು ವಲಯ ವೈದ್ಯಾಧಿಕಾರಿ ಡಾ.ದೀಪಕ್ ರೈ ಮಾತನಾಡಿ, ಶಿಕ್ಷಣ ಎಂದರೆ ಕೇವಲ ಪ್ರಮಾಣಪತ್ರವನ್ನು ಪಡೆದುಕೊಳ್ಳುವುದಲ್ಲ. ಆತ್ಮದಿಂದ ಬೆಳವಣಿಗೆ ಆಗಬೇಕು. ಅಷ್ಟೇ ಅಲ್ಲದೆ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಹೀಗೆ ಸರ್ವತೋಮುಖ ಬೆಳವಣಿಗೆಯೇ ನಿಜವಾದ ಶಿಕ್ಷಣ. ನಮ್ಮ ದೇಶದಲ್ಲಿ ಶಿಕ್ಷಣವನ್ನು ಪಡೆಯುವ ನಮ್ಮ ಮಕ್ಕಳು ನಮ್ಮ ದೇಶದ ಪ್ರಗತಿಗಾಗಿ ದುಡಿಯಬೇಕು ಎಂದು ತಿಳಿಸಿದರು.
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್ ಎ. ಅವರು ಶಾಲೆಯಲ್ಲಿ ನೂತನವಾಗಿ ಅಳವಡಿಸಲಾಗುವ ಶಾಲಾ ಆ್ಯಪ್ ಕುರಿತು ಮಾಹಿತಿ ನೀಡಿದರು. ಶಾಲಾ ಪ್ರಾಂಶುಪಾಲೆ ಮಾಲತಿ ಡಿ ಭಟ್ ಅವರು ಶೈಕ್ಷಣಿಕ ವರ್ಷದ ಮೊದಲಾರ್ಧದಲ್ಲಿ ನಡೆಯಲಿರುವ ಕಾರ್ಯ ಚಟುವಟಿಕೆಗಳ ಕುರಿತು ವಿವರಣೆಯನ್ನು ನೀಡಿದರು. ಶಾಲಾ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಪಾಲಕರು ನಿರ್ವಹಿಸಬಹುದಾದ ಕರ್ತವ್ಯಗಳ ಕುರಿತು ಮಾತನಾಡಿದರು.
ಶಿಕ್ಷಕಿಯರಾದ ಸುಷ್ಮಾ ಮಿಥುನ್ ಸ್ವಾಗತಿಸಿ, ಕುಸುಮ ವಂದಿಸಿದರು. ಪ್ರಿಯಾಶ್ರೀ ಕೆ.ಎಸ್. ಕಾರ್ಯಕ್ರಮ ನಿರೂಪಿಸಿದರು.
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಸಭೆ | ಮಕ್ಕಳಲ್ಲಿ ಮಾನವೀಯ ಮೌಲ್ಯದ ಜೊತೆಗೆ ಧರ್ಮಪ್ರಜ್ಞೆ, ದೇಶಪ್ರೇಮ ಬೆಳೆಸಿ: ಸುಬ್ರಮಣ್ಯ ನಟ್ಟೋಜ
Related Posts
ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ | ಅಧಿಕಾರಿ, ಜನಪ್ರತಿನಿಧಿಗಳಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳು: 9.30ಕ್ಕೆ ಪ್ರಾರಂಭವಾಗಬೇಕಾದ ಕಾರ್ಯಕ್ರಮ ಶುರುವಾದದ್ದು 11 ಗಂಟೆಗೆ!!
ಪುತ್ತೂರು: ಜೂನ್ 1 ಭಾನುವಾರ. ಹಾಗೂ ಶೈಕ್ಷಣಿಕ ವರ್ಷಾರಂಭ ಜೂನ್ 2ರ ಸೋಮವಾರ. ಹಾಗಾಗಿ ಪುತ್ತೂರು…
ಹಾರಾಡಿ ಶಾಲೆಯಲ್ಲಿ ಮೇಳೈಸಿದ ಶಾಲಾ ಪ್ರಾರಂಭೋತ್ಸವ
ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ…
ಮೈಸೂರು ವಿವಿಯ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ ಸಚಿವ!
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ…
ದೂಮಡ್ಕ: ಪರಿಸರ ದಿನ, ಕೊಡೆ ವಿತರಣೆ
ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ | ಪ್ಲಾಸ್ಟಿಕ್’ನಿಂದ ಪರಿಸರ ಮತ್ತು ಆರೋಗ್ಯ ಹಾನಿ : ಉಲ್ಲಾಸ್ ಕೆ.
ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ…
ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ್ಯಾಂಕ್
ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್…
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ | ಕರಾವಳಿಗೆ ಒಲಿದ ಮೊದಲೆರಡು ಸ್ಥಾನ
ರಾಜ್ಯದಲ್ಲಿ ಎಸ್ಎಸ್ಎಲ್ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ
ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ನಾಳೆ ಎಪ್ರಿಲ್ 08 ರಂದು ಪ್ರಕಟವಾಗಲಿದೆ. ಪ್ರಾಥಮಿಕ ಹಾಗೂ…
ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟ | ಕರಾವಳಿಗೆ ಒಲಿದ ಮೊದಲೆರಡು ಸ್ಥಾನ
ರಾಜ್ಯದಲ್ಲಿ ಎಸ್ಎಸ್ಎಲ್ಸಿ-1 ಪರೀಕ್ಷೆಗಳು ಮಾರ್ಚ್ 21ರಿಂದ ಏಪ್ರಿಲ್ 4, 2025ರವರೆಗೆ…