ಪುತ್ತೂರು: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಜಗತ್ತಿನಲ್ಲಿ ಯೋಗ ಹಾಗೂ ಅಧ್ಯಾತ್ಮದಲ್ಲಿ ತೊಡಗಿಸಿಕೊಳ್ಳದಿದ್ದರೆ ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿ ಗಳಿಸಿಕೊಳ್ಳುವುದು ಕಷ್ಟ ಸಾಧ್ಯ. ಹಾಗಾಗಿ ಪಠ್ಯ ಶಿಕ್ಷಣದೊಂದಿಗೆ ಯೋಗ ಶಿಕ್ಷಣವನ್ನೂ ವಿದ್ಯಾರ್ಥಿಗಳಿಗೆ ಒದಗಿಸಿಕೊಡುವುದು ಅಗತ್ಯ. ಯಾಕೆಂದರೆ ಯೋಗದ ಜತೆ ದೊರಕುವ ಶಿಕ್ಷಣವೇ ನಿಜವಾದ ಶಿಕ್ಷಣ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಹೇಳಿದರು.
ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆಯಲ್ಲಿನ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ಯೋಗ ತರಬೇತಿ ತರಗತಿಗಳನ್ನು ಉದ್ಘಾಟಿಸಿ ಮಾತನಾಡಿದರು.
ಹೊಸದಾಗಿ ಸಂಸ್ಥೆಗೆ ದಾಖಲಾತಿ ಹೊಂದಿದ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಶ್ರೀ ರವಿಶಂಕರ ಗುರೂಜಿಯವರ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸಹಯೋಗದಲ್ಲಿ ಯೋಗ, ಪ್ರಾಣಾಯಾಮ, ಧ್ಯಾನ, ಸುದರ್ಶನ ಕ್ರಿಯೆಯ ತರಬೇತಿ ನೀಡುವುದು ಹಾಗೂ ತದನಂತರ ಯೋಗದ ಜೊತೆಗೆ ದೈನಂದಿನ ಪಠ್ಯ ಶಿಕ್ಷಣದ ಪ್ರಾರಂಭ ಮಾಡುವುದು ಅಂಬಿಕಾ ಸಂಸ್ಥೆಯಲ್ಲಿ ನಡೆದುಬಂದಿದೆ. ಪಠ್ಯದ ಜೊತೆಗೆ ಯೋಗವನ್ನೂ ವಿದ್ಯಾಥಿಗಳಿಗೆ ಕಲಿಸಿಕೊಡುವ ಶಿಕ್ಷಣವನ್ನು ಪ್ರಾರಂಭಿಸಿದ್ದು ಅಂಬಿಕಾದ ಪ್ರಥಮಗಳಲ್ಲಿ ಒಂದಾಗಿದೆ ಎಂದು ನುಡಿದರು.
ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಸಂಚಾಲಕಿ ದೀಪಿಕಾ ಹಾಗೂ ಹಿರಿಯ ಅನುಭವಿ ಶಿಕ್ಷಕಿ ಆಶಾ ರವಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ಸ್ವಾಗತಿಸಿದರು. ಗಣಿತಶಾಸ್ತ್ರ ಉಪನ್ಯಾಸಕಿ ಜ್ಯೋತಿ ಕಾರ್ಯಕ್ರಮ ನಿರೂಪಿಸಿದರು.
ಸ್ವಾಸ್ಥ್ಯ ಹಾಗೂ ಮಾನಸಿಕ ನೆಮ್ಮದಿಗಾಗಿ ಯೋಗ ಅಗತ್ಯ: ಸುಬ್ರಮಣ್ಯ ನಟ್ಟೋಜ | ನೆಲ್ಲಿಕಟ್ಟೆ ಅಂಬಿಕಾ ಪ.ಪೂ. ವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಯೋಗ ಶಿಕ್ಷಣ
What's your reaction?
- 294c
- 294cc
- 2ai technology
- 1artificial intelegence
- 1avg
- 1bt ranjan
- 1co-operative
- 1crime news
- 1death news
- 1gl
- 1google for education
- 1independence
- 1jewellers
- 1karnataka state
- 1lokayuktha
- 1lokayuktha raid
- 1manipal
- 1minister krishna bairegowda
- 1mla ashok rai
- 1nidana news
- 1ptr tahasildar
- 1puttur
- 1puttur news
- 0puttur tahasildar
- 0revenue
- 0revenue department
- 0revenue minister
- 0society
- 0sowmya
- 0tahasildar
- 0tahasildar absconded
- 0udupi
Related Posts
KSOU:ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ;ವಿವಿಧ ಕೋರ್ಸ್ಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು 2025-26ನೇ ಶೈಕ್ಷಣಿಕ ಸಾಲಿನ ವಿವಿಧ ಶಿಕ್ಷಣ…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಅತಿಥಿ ಉಪನ್ಯಾಸಕರ ನೇಮಕ ವಿಳಂಬ: ಸೆಮಿಸ್ಟರ್ ಅವಧಿ ವಿಸ್ತರಣೆ!
ಮಂಗಳೂರು: ರಾಜ್ಯಾದ್ಯಂತ ಶೈಕ್ಷಣಿಕ ಕ್ಯಾಲೆಂಡರ್ ಯಥಾಸ್ಥಿತಿಗೆ ಬರುತ್ತಿದೆ ಎಂಬ ಆಶಾಭಾವ…
ಕರಾಟೆ: ಅಂಬಿಕಾದ ವಿದ್ಯಾಲಯದ ದೃಶಾನ ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಅಕ್ಷಯ ಕಾಲೇಜಿನಲ್ಲಿ ಡ್ರೇಪಿಂಗ್ ಕಾರ್ಯಾಗಾರ
ಪುತ್ತೂರು: ಸಂಪ್ಯ ಅಕ್ಷಯ ಕಾಲೇಜಿನ ಫ್ಯಾಷನ್ ಡಿಸೈನ್ ವಿಭಾಗ "ಫಸೆರಾ" ಫ್ಯಾಷನ್…
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಜ್ಞಾನಮ್ ಸಂಸ್ಕೃತ ತರಬೇತಿ
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ
ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…
ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…