ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಯೋಗ ದಿನಾಚರಣೆ | ದೇಹದ ನಿಯಂತ್ರಣಕ್ಕೆ ಯೋಗಾಭ್ಯಾಸ ಅಗತ್ಯ: ಮಾಲತಿ ಡಿ.

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ  ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ ಸಂಸ್ಥೆಯಲ್ಲಿ ಶನಿವಾರ ಅಂತರಾಷ್ಟ್ರೀಯ  ಯೋಗ ದಿನಾಚರಣೆಯನ್ನು ಆಚರಿಸಲಾಯಿತು.

chennai-shopping
maithri

ಶಾಲಾ ಪ್ರಾಂಶುಪಾಲೆ ಮಾಲತಿ ಡಿ. ಮಾತನಾಡಿ, ನಮ್ಮ ದೇಹ  ನಮ್ಮ ನಿಯಂತ್ರಣದಲ್ಲಿ ಇರಬೇಕು. ಆಗ ಮಾತ್ರ ನಾವು ಮನಸನ್ನು ನಿಗ್ರಹಿಸಲು ಸಾಧ್ಯ. ಹೀಗೆ ನಮ್ಮ ದೇಹವನ್ನು ನಿಯಂತ್ರಿಸಿಟ್ಟುಕೊಳ್ಳಲು ಸಾಧಿತವಾಗುವುದು ಯೋಗದಿಂದ. ನಾವು ಆರೋಗ್ಯವಂತ  ಜೀವನವನ್ನು ನಡೆಸಬೇಕಾದರೆ ಪ್ರತಿದಿನ ಯೋಗದ ಅವಶ್ಯಕತೆ ಇದೆ ಎಂದು ತಿಳಿಸಿದರು.

ಎಂಟನೇ ತರಗತಿಯ ವಿದ್ಯಾರ್ಥಿಗಳಾದ ಆರ್ಯ ಮೋಹನ್, ಯೋಗದ ಪ್ರಾಮುಖ್ಯತೆ ಕುರಿತು ತಿಳಿಸಿದರೆ, ಪ್ರೇಮ್ ಅವರು ಸೂರ್ಯ ನಮಸ್ಕಾರದ ಉಪಯೋಗದ ಕುರಿತು ತಿಳಿಸಿದರು. ವಿದ್ಯಾರ್ಥಿಗಳಾದ ಸನ್ಮಯ್, ಆದಿ ಶ್ರೀ, ತನ್ವಿ ನಾಗೇಂದ್ರ ,ಅನುಶ್ರೀ ಇವರು ಯೋಗ ಶ್ಲೋಕವನ್ನು ಹಾಡಿದರು. ನಂತರ ವಿದ್ಯಾರ್ಥಿಗಳು ಸಾಮೂಹಿಕವಾಗಿ ಯೋಗವನ್ನು ಪ್ರಸ್ತುತಗೊಳಿಸಿದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವಿದ್ಯಾಥಿ ದೀಪಾಂಶ್ ಸ್ವಾಗತಿಸಿ, ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…