tamanvi
ಶಿಕ್ಷಣ

ವಿವೇಕಾನಂದ ಇಂಜಿನಿಯರಿಂಗ್ ಕಾಲೇಜಿನ ಸ್ಥಾಪಕ ಪ್ರಾಂಶುಪಾಲ ಪ್ರೊ. ಜಿ.ಆರ್. ರೈ ಅವರಿಗೆ ನುಡಿನಮನ

D_shiva_bhat
ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ.ಜಿ.ಆರ್.ರೈ ಅವರು ಇಂದು ವಿಧಿವಶರಾಗಿದ್ದು ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯ ಸ್ಥಾಪಕ ಪ್ರಾಂಶುಪಾಲರಾಗಿ ಕಾಲೇಜಿಗೆ ಭದ್ರ ಬುನಾದಿಯನ್ನು ಹಾಕಿಕೊಟ್ಟ ಪ್ರೊ.ಜಿ.ಆರ್.ರೈ ಅವರು  ವಿಧಿವಶರಾಗಿದ್ದು ಅವರಿಗೆ ಭಾವ ಪೂರ್ಣ ಶ್ರದ್ದಾಂಜಲಿಯನ್ನು ಸಮರ್ಪಿಸಲಾಯಿತು.
ನುಡಿ ನಮನವನ್ನು ಸಲ್ಲಿಸಿದ ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ.ಕೆ ಮಾತನಾಡಿ ಸಿವಿಲ್ ಇಂಜಿನಿಯರ್ ಆಗಿದ್ದ ಫ್ರೊ.ಜಿ.ಆರ್.ರೈ ಅವರು ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ಸೇವೆಯಲ್ಲಿ ಸಲ್ಲಿಸುತ್ತಾ ಅದರ ಅಭಿವೃದ್ಧಿಗೆ ಶ್ರಮಿಸಿದವರು. ದಿ.ಉರಿಮಜಲು ರಾಮ ಭಟ್ ಅವರ ಬಾಲ್ಯ ಸ್ನೇಹಿತನಾಗಿದ್ದು ಅವರ ಒತ್ತಾಸೆಯ ಮೇರೆಗೆ ವಿವೇಕಾನಂದ ಇಂಜಿನಿಯರಿAಗ್ ಕಾಲೇಜಿನ ಪ್ರಾರಂಭಕ್ಕೆ ಅಗತ್ಯ ದಾಖಲೆಗಳನ್ನು ಸಿದ್ದಪಡಿಸಿ ಅದರ ಸ್ಥಾಪಕ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದಾರೆ. ಅಗಲಿದ ಮಹಾನ್ ಚೇತನಕ್ಕೆ ವಿಷ್ಣು ಸಾಯುಜ್ಯ ಪ್ರಾಪ್ತಿಯಾಗಲಿ ಎಂದರು. ಈ ಸಂದರ್ಭದಲ್ಲಿ ಮೌನ ಪ್ರಾರ್ಥನೆಯನ್ನು ನಡೆಸಲಾಯಿತು.
ಕಾಲೇಜಿನ ಸಂಚಾಲಕ ಸುಬ್ರಮಣ್ಯ ಭಟ್.ಟಿ.ಎಸ್, ವಿಭಾಗ ಮುಖ್ಯಸ್ಥರು, ಉಪನ್ಯಾಸಕರು ಮತ್ತು ಸಿಬ್ಬಂದಿಗಳು ಹಾಜರಿದ್ದು  ಪುಷ್ಪ ನಮನ ಸಲ್ಲಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…