tamanvi
ಶಿಕ್ಷಣ

ಅಂಬಿಕಾ  ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯಲ್ಲಿ ಆಟಿದ ಕೂಟ ಕಾರ್ಯಕ್ರಮ|ಆಧುನಿಕತೆ, ಅನ್ಯಭಾಷೆಗಳ  ಹೇರಿಕೆಯಿಂದ ತುಳುವಿಗೆ ಹಾನಿ: ಹೇಮಂತ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರುತುಳು ಭಾಷೆಗೆ ಅದರದ್ದೇ ಆದ ಲಿಪಿ ಇದೆತುಳು ಗ್ರಂಥಗಳಿವೆಆದರೆ ಆಧುನಿಕತೆ ಮತ್ತು ಅನ್ಯ ಭಾಷಾ ಹೇರಿಕೆಯಿಂದಾಗಿ ತುಳು ಭಾಷೆ ತೆರೆಯಮರೆಗೆ ಸರಿಯುತ್ತಿದೆ ಎಂದು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್ ಸಂಸ್ಥೆಯ ಜೀವನ ಕೌಶಲ್ಯ ಶಿಕ್ಷಕ ಹೇಮಂತ್ ಹೇಳಿದರು.

     ಅವರು ಸಂಸ್ಥೆಯಲ್ಲಿ ಸೋಮವಾರ ಆಯೋಜಿಸಲಾದ ಆಟಿದ ಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಹಿಂದಿನ ಕಾಲದಲ್ಲಿ ಅನುಭವಿಸುತ್ತಿದ್ದ ಕಷ್ಟದ ಜೀವನ ಕಾಲಕ್ಕೆ ಸೇವಿಸುತ್ತಿದ್ದ ಆಹಾರ ಪದ್ಧತಿರೋಗರುಜಿನಗಳಿಗೆ ಔಷಧವಿಲ್ಲದ ಸಂದರ್ಭದಲ್ಲಿ ಪಾಲೆ ತೊಗಟೆಯ ಕಷಾಯ ಸೇವನೆ ಮತ್ತು ಅದರಲ್ಲಿನ ರೋಗ ನಿರೋಧಕ ಶಕ್ತಿಯ ಗುಣಗಳನ್ನು ವಿವರಿಸಿಆಟಿ ತಿಂಗಳ ಕಷ್ಟವನ್ನು ಕಳೆಯಲು ಬರುವ ಆಟಿಕಳಂಜನ ಹಿನ್ನೆಲೆವೇಷಭೂಷಣಆಚರಣಾ ಪದ್ಧತಿಗಳ ಬಗ್ಗೆ ಮಕ್ಕಳಿಗೆ ತಿಳಿಹೇಳಿದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ತುಳುನಾಡಿನ ಪರಂಪರೆಯ ದ್ಯೋತಕವಾದ ಚೆನ್ನಮಣೆ ಆಟದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರುಪ್ರಾಂಶುಪಾಲೆ ಮಾಲತಿ ಡಿ ಭಟ್ ಹಾಗೂ ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಉಪಸ್ಥಿತರಿದ್ದರುವಿವಿಕ್ತಾ ರೈ ಸ್ವಾಗತಿಸಿಕನಿಷ್ಕ್ ಧನ್ಯವಾದ ಸಮರ್ಪಣೆ ಮಾಡಿದರು ರಕ್ಷಾ ಕಾರ್ಯಕ್ರಮ ನಿರೂಪಿಸಿದರುಆಟಿಕಳಂಜನ ಆಗಮನದ ಮೂಲಕ ತುಳು ಭಾಷೆಯಲ್ಲಿಯೇ ಆಟಿದ ಕೂಟ ಕಾರ್ಯಕ್ರಮ ನಡೆಸಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…