ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಸಂಪ್ಯ ಅಕ್ಷಯ ಸಮೂಹ ಸಂಸ್ಥೆ, ಆಂತರಿಕ ಗುಣಮಟ್ಟ ಭರವಸೆ ಕೋಶ,  ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಮತ್ತು ಅದ್ವಯ ಕನ್ನಡ ಸಂಘದ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಅಕ್ಷಯ ಕಾಲೇಜು ಸಂಭಾಂಗಣದಲ್ಲಿ ಆಚರಿಸಲಾಯಿತು.

core technologies

ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ, ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಭಾಷಾ ಪುಸ್ತಕಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಚಾಲನೆ ನೀಡಲಾಯಿತು.

akshaya college

ಸಾಹಿತಿ, ಆಮಂತ್ರಣ ಸಾಂಸ್ಕೃತಿಕ ಸಾಹಿತ್ಯ ವೇದಿಕೆ ಕರ್ನಾಟಕದ ಜಿಲ್ಲಾಧ್ಯಕ್ಷೆ ವಿಂಧ್ಯಾ ಎಸ್. ರೈ ಕಡೇಶಿವಾಲಯ ಅವರು ಕನ್ನಡ ರಾಜ್ಯೋತ್ಸವ ಮಹತ್ವ ಕುರಿತು ಮಾತನಾಡಿದರು.

ಲಯನ್ಸ್ ಕ್ಲಬ್ ಪುತ್ತೂರ್ದ ಮುತ್ತು ಇದರ ಉಪಾಧ್ಯಕ್ಷ ರವಿ ಪ್ರಸಾದ್ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ಪದವಿ ಕಾಲೇಜಿನ ಪ್ರಾಂಶುಪಾಲ ಸಂಪತ್ ಪಕ್ಕಳ ಅಧ್ಯಕ್ಷತೆ ವಹಿಸಿದ್ದರು. ಪದವಿ  ಪೂರ್ವ ಕಾಲೇಜಿನ ಪ್ರಾಂಶುಪಾಲ ಗಂಗಾರತ್ನ ಮತ್ತು ಆಂತರಿಕ ಭರವಸೆ ಮತ್ತು ಗುಣಮಟ್ಟ ಕೋಶದ ನಿರ್ದೇಶಕಿ ರಶ್ಮಿ, ಕನ್ನಡ ಉಪನ್ಯಾಸಕಿ ರಶ್ಮಿತಾ ಮತ್ತು ಅದ್ವಯ ಸಾಹಿತ್ಯ ಸಂಘದ ಅಧ್ಯಕ್ಷ ಸಂತೋಷ್ ಮತ್ತು ಗಣೇಶ್  ಶೆಟ್ಟಿ, ಲಯನ್ ದಯಾನಂದ ರೈ ಕೊರ್ಮಂಡ ಉಪಸ್ಥಿತರಿದ್ದರು.

ಅದ್ವಯ ಕನ್ನಡ ಸಂಘದ ಪದಾಧಿಕಾರಿಗಳ ಅರ್ಥಪೂರ್ಣ ಪದಸ್ವೀಕಾರ  ನಡೆಯಿತು. ಪದವಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮತ್ತು ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಕನ್ನಡ ಉಪನ್ಯಾಸಕಿ ರಶ್ಮಿತಾ ಸ್ವಾಗತಿಸಿ, ಬಿ. ಹೆಚ್.ಎಸ್ ಉಪನ್ಯಾಸಕಿ ಶೃತ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು.

ವಿದ್ಯಾರ್ಥಿಗಳು  ಕನ್ನಡದ ತೇರು ಮತ್ತು ಹಚ್ಚೇವು ಕನ್ನಡದ ದೀಪ ಪದ್ಯವನ್ನು ಗಾಯನ ಮಾಡಿದರು. ನೇಹಾ ದ್ವಿತೀಯ ಬಿ. ಕಾಂ ವಂದಿಸಿ, ಹರಿಪ್ರಸಾದ್ ದ್ವಿತೀಯ ಬಿಎ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…