tamanvi
ಶಿಕ್ಷಣ

ರಾಷ್ಟ್ರಮಟ್ಟದಲ್ಲಿ ಪ್ರಥಮ: ಎಸ್.ಜೆ.ಎಫ್.ಐ. ಮಟ್ಟದ ಸ್ಪರ್ಧೆಗೆ ಅಂಬಿಕಾ ವಿದ್ಯಾಲಯದ ದೃಶಾನ ಆಯ್ಕೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಉತ್ತರ ಪ್ರದೇಶ, ಮಥುರಾದ ಗೋವರ್ಧನ ಮಾರ್ಗದಲ್ಲಿರುವ ಶ್ರೀ ಜೀ ಬಾಬಾ ಸರಸ್ವತಿ ವಿದ್ಯಾಮಂದಿರದಲ್ಲಿ ನವೆಂಬರ್ ೧೩ರಿಂದ ೧೬ರವರೆಗೆ ವಿದ್ಯಾಭಾರತಿ ಹಮ್ಮಿಕೊಂಡಿದ್ದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ.ಬಿ.ಎಸ್.ಇ.ಯ 9ನೇ ತರಗತಿ ವಿದ್ಯಾರ್ಥಿನಿ ದೃಶಾನ ಎಸ್. ಸರಳಿಕಾನ ಅವರು ಕಿಶೋರ ವರ್ಗದ ಬಾಲಕಿಯರ 52 ಕೆ.ಜಿ. ವಿಭಾಗದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ್ದಾರೆ.

ದೃಶಾನ ಅವರು ಬೆಟ್ಟಂಪಾಡಿ ಗ್ರಾಮದ ಸರಳಿಕಾನದ ಸುರೇಶ್ ಗೌಡ ಸರಳೀಕಾನ ಮತ್ತು ವಿದ್ಯಾಶ್ರೀ ದಂಪತಿಗಳ ಪುತ್ರಿ.

ದೃಶಾನ ಜನವರಿಯಲ್ಲಿ ಮಹಾರಾಷ್ಟ್ರದ ಪುಣೆಯಲ್ಲಿ ನಡೆಯಲಿರುವ ಎಸ್.ಜೆ.ಎಫ್.ಐ. (ಸ್ಕೂಲ್ ಗೇಮ್  ಫೆಡರೇಷನ್ ಆಫ್ ಇಂಡಿಯಾ) ಮಟ್ಟದ ಕರಾಟೆ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…