ಶಿಕ್ಷಣ

ಅಕ್ಷಯ ಕಾಲೇಜಿನ ಸಂಸ್ಕೃತ ಸಂಘದಿಂದ ಗೀತಾ ಜಯಂತಿ ಸ್ಪರ್ಧೆಯ ಬಹುಮಾನ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ವಾಗ್ವೈಭವ ಸಂಸ್ಕೃತ ಸಂಘದಿಂದ  ಗೀತಾ ಜಯಂತಿ ಪ್ರಯುಕ್ತ ಆಯೋಜಿಸಲಾದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಅತಿಥಿ ವೇದವ್ಯಾಸ ರಾಮಕುಂಜ ಅವರು ಭಗವದ್ಗೀತೆ ಮತ್ತು 18 ಸಂಖೆಯ ಮಹತ್ವವನ್ನು ವಿಮರ್ಶಿಸಿದರು.

ಅಕ್ಷಯ ಕಾಲೇಜ್ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಅವರು ಸಂಸ್ಕೃತದಿಂದಲೇ ಎಲ್ಲಾ ಭಾಷೆಗಳು ಉತ್ಪತ್ತಿಗೊಂಡಿವೆ ಮತ್ತು ಶ್ರೀಕೃಷ್ಣನೇ ಮೊದಲ ಮನಶಾಸ್ತ್ರಜ್ಞ ಎಂದು ಅಭಿಪ್ರಾಯಿಸಿದರು.

ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗರತ್ನ, ಸಂಸ್ಕೃತ ಸಂಘದ ಸಂಯೋಜಕಿ ಸಾಯಿ ಕೃಪಾ ಕೆ ಉಪಸ್ಥಿತರಿದ್ದರು.

ಬಳಿಕ ವಿಜೇತರಿಗೆ ನಗದು ಬಹುಮಾನ ಮತ್ತು ಭಗವದ್ಗೀತೆಯ ಪುಸ್ತಕವನ್ನು ನೀಡಲಾಯಿತು. ಬಹುಮಾನ ವಿಜೇತರ ಹೆಸರನ್ನು ಅಕ್ಷಿತ್ ಕೆ ಆರ್ ಸಂಸ್ಕೃತ ಸಂಘದ ಅಧ್ಯಕ್ಷರು ಘೋಷಿಸಿದರು.

ವಿದ್ಯಾರ್ಥಿನಿಯರಾದ ಪ್ರಕೃತಿ, ಗೌತಮಿ, ರಿಷಿತ ಪ್ರಾರ್ಥಿಸಿದರು. ಅವಿಷ್ ಎಸ್ ಶೆಟ್ಟಿ ಸ್ವಾಗತಿಸಿದರು. ಸಾಯಿ ಕೃಪಾ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಶಸ್ವಿ ಬಿ ಕೆ ವಂದಿಸಿದರು. ಸಂಸ್ಕೃತ ಸಂಘದ ಕಾರ್ಯದರ್ಶಿ ಅಪೇಕ್ಷ ಕೆ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿ ಭಾರತಿ ಎಸ್ ರೈರವರಿಗೆ ಡಾಕ್ಟರೇಟ್ ಪದವಿ

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಇಂಗ್ಲೀಷ್‌ ವಿಭಾಗದ ಮುಖ್ಯಸ್ಥೆ ಭಾರತಿ ಎಸ್‌.…

ಸೇಂಟ್ ಫಿಲೊಮಿನಾ ಕಾಲೇಜಿನಲ್ಲಿ ಹುತಾತ್ಮರ ದಿನಾಚರಣೆ | ಮಹಾತ್ಮ ಗಾಂಧೀಜಿ, ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ

ಪುತ್ತೂರು: ಇಲ್ಲಿನ ಸೇಂಟ್ ಫಿಲೊಮಿನಾ ಕಾಲೇಜಿನ (ಸ್ವಾಯತ್ತ) ಸ್ಪಂದನ ಹಾಲ್‌ನಲ್ಲಿ ಜನವರಿ…