tamanvi
ಶಿಕ್ಷಣ

ಅಕ್ಷಯ ಕಾಲೇಜಿನ ಸಂಸ್ಕೃತ ಸಂಘದಿಂದ ಗೀತಾ ಜಯಂತಿ ಸ್ಪರ್ಧೆಯ ಬಹುಮಾನ ವಿತರಣೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇದರ ವಾಗ್ವೈಭವ ಸಂಸ್ಕೃತ ಸಂಘದಿಂದ  ಗೀತಾ ಜಯಂತಿ ಪ್ರಯುಕ್ತ ಆಯೋಜಿಸಲಾದ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ದೀಪ ಬೆಳಗಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಅತಿಥಿ ವೇದವ್ಯಾಸ ರಾಮಕುಂಜ ಅವರು ಭಗವದ್ಗೀತೆ ಮತ್ತು 18 ಸಂಖೆಯ ಮಹತ್ವವನ್ನು ವಿಮರ್ಶಿಸಿದರು.

ಅಕ್ಷಯ ಕಾಲೇಜ್ ಪ್ರಾಂಶುಪಾಲ ಸಂಪತ್ ಕೆ ಪಕ್ಕಳ ಅವರು ಸಂಸ್ಕೃತದಿಂದಲೇ ಎಲ್ಲಾ ಭಾಷೆಗಳು ಉತ್ಪತ್ತಿಗೊಂಡಿವೆ ಮತ್ತು ಶ್ರೀಕೃಷ್ಣನೇ ಮೊದಲ ಮನಶಾಸ್ತ್ರಜ್ಞ ಎಂದು ಅಭಿಪ್ರಾಯಿಸಿದರು.

ಅಕ್ಷಯ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಗಂಗರತ್ನ, ಸಂಸ್ಕೃತ ಸಂಘದ ಸಂಯೋಜಕಿ ಸಾಯಿ ಕೃಪಾ ಕೆ ಉಪಸ್ಥಿತರಿದ್ದರು.

ಬಳಿಕ ವಿಜೇತರಿಗೆ ನಗದು ಬಹುಮಾನ ಮತ್ತು ಭಗವದ್ಗೀತೆಯ ಪುಸ್ತಕವನ್ನು ನೀಡಲಾಯಿತು. ಬಹುಮಾನ ವಿಜೇತರ ಹೆಸರನ್ನು ಅಕ್ಷಿತ್ ಕೆ ಆರ್ ಸಂಸ್ಕೃತ ಸಂಘದ ಅಧ್ಯಕ್ಷರು ಘೋಷಿಸಿದರು.

ವಿದ್ಯಾರ್ಥಿನಿಯರಾದ ಪ್ರಕೃತಿ, ಗೌತಮಿ, ರಿಷಿತ ಪ್ರಾರ್ಥಿಸಿದರು. ಅವಿಷ್ ಎಸ್ ಶೆಟ್ಟಿ ಸ್ವಾಗತಿಸಿದರು. ಸಾಯಿ ಕೃಪಾ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯಶಸ್ವಿ ಬಿ ಕೆ ವಂದಿಸಿದರು. ಸಂಸ್ಕೃತ ಸಂಘದ ಕಾರ್ಯದರ್ಶಿ ಅಪೇಕ್ಷ ಕೆ ಜೆ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಜ್ಞಾನ, ಪ್ರೀತಿಯ ಬೆಸುಗೆಯೇ ವಿವೇಕ | ಸಂತ ಫಿಲೋಮಿನಾ ಕಾಲೇಜಿನ ಪ್ರಥಮ ಪದವೀಧರರ ಸಮಾರಂಭದಲ್ಲಿ ಡಾ| ಪೀಟರ್ ಪಾವ್ಲ್ ಸಲ್ದಾನ

ಪುತ್ತೂರು: ಪದವಿ ಪಡೆಯುವುದರೊಂದಿಗೆ ಜ್ಞಾನಾರ್ಜನೆ ಮುಗಿಯುವುದಿಲ್ಲ; ಬದಲಾಗಿ ನಿಮ್ಮ ಜ್ಞಾನದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…