tamanvi
ಶಿಕ್ಷಣ

ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಇಪ್ಪತ್ತೆöÊದು ವರ್ಷಗಳನ್ನು ಪೂರ್ಣಗೊಳಿಸಿ ಬೆಳ್ಳಿಹಬ್ಬದ ಸಂಭ್ರಮದೊAದಿಗೆ ಮುನ್ನಡೆಯುತ್ತಿರುವ ಸವಿನೆನಪಿನಲ್ಲಿ 2026  – 27ನೇ ಸಾಲಿನಿಂದ ಸರ್ಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾಥಿಗಳಿಗೆ ಉಚಿತ ಶಿಕ್ಷಣ ಒದಗಿಸುವ ಯೋಜನೆಯನ್ನು ಹಮ್ಮಿಕೊಂಡಿದೆ. ಇದರನ್ವಯ ಸರಕಾರಿ ಶಾಲೆಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದ್ದರೆ ಅಂತಹವರಿಗೆ ಅತ್ಯುತ್ತಮ ಗುಣಮಟ್ಟದ ಪದವಿ ಪೂರ್ವ ವಿಜ್ಞಾನ ಅಥವಾ ವಾಣಿಜ್ಯ ಶಾಸ್ತç ಶಿಕ್ಷಣವನ್ನು ಒದಗಿಸಿಕೊಡಲಾಗುತ್ತದೆ. ಈ ಸೌಲಭ್ಯವು ಪ್ರತಿ ವರ್ಷವೂ ಹತ್ತು ಮಂದಿ ವಿದ್ಯಾರ್ಥಿಗಳಿಗೆ ಲಭ್ಯವಾಗಲಿದೆ.

maithri

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ಈಗಾಗಲೇ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ರೂಪದಲ್ಲಿ ಸಾಕಷ್ಟು ಆರ್ಥಿಕ ನೆರವನ್ನು ಒದಗಿಸಿಕೊಡುತ್ತಿದೆ. 2010ರಿಂದಲೇ ಅರ್ಹ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿರುವ ಅಂಬಿಕಾ ಸಂಸ್ಥೆ ಕಳೆದ ಕೆಲವು ವರ್ಷಗಳಿಂದ ಪ್ರತಿವರ್ಷವೂ ಒಂದು ಕೋಟಿ ರೂಪಾಯಿಗಳಿಗಿಂತಲೂ ಅಧಿಕ ಹಣದ ನೆರವನ್ನು ವಿದ್ಯಾರ್ಥಿಗಳಿಗೆ ಕೊಡಮಾಡುತ್ತಿದೆ. ಸಹಸ್ರಾರು ವಿದ್ಯಾರ್ಥಿಗಳು ಈಗಾಗಲೇ ಈ ಆರ್ಥಿಕ ನೆರವಿನ ಪ್ರಯೋಜನಗಳನ್ನು ಪಡೆದುಕೊಂಡು ತಮ್ಮ ಬದುಕನ್ನು ರೂಪಿಸಿಕೊಂಡಿರುವುದು ಉಲ್ಲೇಖಾರ್ಹ. ಇದರೊಂದಿಗೆ ಇದೀಗ ಸರ್ಕಾರಿ ಶಾಲೆಗಳಲ್ಲಿನ ಪ್ರತಿಭಾನ್ವಿತ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕ ಹಾಗೂ ಕೋಚಿಂಗ್ ಶುಲ್ಕ ಒಳಗೊಂಡAತೆ ಉಚಿತ ಶಿಕ್ಷಣವನ್ನು ನೀಡುವ ಯೋಜನೆಗೆ ಇದೀಗ ಅಡಯಿಟ್ಟಿದೆ.

ಉಚಿತ ಶಿಕ್ಷಣದ ಅರ್ಹತೆ: ಎಸ್‌ಎಸ್‌ಎಲ್‌ಸಿ ಬೋರ್ಡ್ ಪರೀಕ್ಷೆ ಪೂರ್ಣಗೊಂಡ ನಂತರ ಅಂಬಿಕಾ ಸಂಸ್ಥೆಯಲ್ಲಿ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಈ ಸೌಲಭ್ಯ ಒದಗಿಸಲಾಗುವುದು.

ಆಸಕ್ತ ವಿದ್ಯಾರ್ಥಿಗಳು   https://forms.gle/wK8ft2469PfV4NAdA ಈ ಗೂಗಲ್ ಲಿಂಕ್ ಮೂಲಕ ಮಾರ್ಚ್ ೫ರ ಒಳಗಾಗಿ ಅರ್ಜಿ ಸಲ್ಲಿಸಬಹುದು. ಎಪ್ರಿಲ್ 4ರಂದು ಬೆಳಗ್ಗೆ 9.30 ಗಂಟೆಗೆ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯದಲ್ಲಿ ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗಾಗಿ: 9741481600, 9448835488.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ

ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…