ಬೆಂಗಳೂರು: ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ ಹಿನ್ನೆಲೆ ರಾಜ್ಯ ಸರ್ಕಾರ 638 ಕನ್ನಡ ಶಾಲೆಗಳನ್ನು ಮುಚ್ಚಿರುವುದಕ್ಕೆ ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ಶಾಲೆಗಳು ಬಂದ್ ಆಗುತ್ತಿರುವುದು ದುಃಖಕರ ಎಂದು ಅವರು ಹೇಳಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದ್ದು, ಸರ್ಕಾರ ದಿವಾಳಿಯಾಗಿದೆ. ಅವರು ಸಂಬಳ ಕೊಡಲು ಆಗುತ್ತಿಲ್ಲ. ಹೀಗಾಗಿ ಕನ್ನಡ ಶಾಲೆಗಳನ್ನು ಮುಚ್ಚುತ್ತಿದ್ದಾರೆ. ಇದು ಕನ್ನಡ ವಿರೋಧಿ ಮತ್ತು ಕನ್ನಡ ಶಾಲೆಗಳ ವಿರೋಧಿಯಾಗಿದೆ. ಇದನ್ನು ಖಂಡಿಸುತ್ತೇನೆ ಹಾಗೂ ಕನ್ನಡ ಶಾಲೆಗಳನ್ನು ಪುನಾರಾರಂಭಿಸುವಂತೆ ಅವರು ಆಗ್ರಹಿಸಿದರು.























