ಶಿಕ್ಷಣ

ಬೆಳ್ತಂಗಡಿ: ತೆರೆದ ಟಿಪ್ಪರ್‌ನಲ್ಲಿ ಶಾಲಾ ಪ್ರವಾಸ!

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಜೇನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು ಟಿಪ್ಪರ್ ವಾಹನದಲ್ಲಿ ಅಪಾಯಕಾರಿಯಾಗಿ ಕರೆದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಂಜೆ ಗ್ರಾಮದಲ್ಲಿ ನಡೆದಿದೆ.

maithri

ಇಲ್ಲಿನ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕರು ಶಾಲಾ ಮಕ್ಕಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ತೆರದ ಪಿಕಪ್ ಮತ್ತು ಟಿಪ್ಪರ್‌ನಲ್ಲಿ ಕರೆದೊಕೊಂಡು ಹೊಗಿರುವುದು ಬೆಳಕಿಗೆ ಬಂದಿದೆ. ಸ್ಥಳೀಯರು ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದು, ಮಕ್ಕಳನ್ನು ತೆರೆದ ವಾಹನದಲ್ಲಿ ಸಾಗಿಸುವುದು ಅಪಾಯಕಾರಿಯಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಮಕ್ಕಳನ್ನು ಸುರಕ್ಷತಾ ನಿಯಮಗಳನ್ನು ಪಾಲಿಸದೇ ತೆರದ ಟಿಪ್ಪರ್‌ನಲ್ಲಿ ತುಂಬಿಸಿಕೊಂಡು ಕರೆದೊಯ್ಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಟಿಪ್ಪರ್ ಅಪಘಾತಗೊಂಡರೆ ಅಥವಾ ಅಕಸ್ಮಾತ್ ಬ್ರೇಕ್ ಹಾಕಿದರೆ ದೊಡ್ಡ ಅನಾಹುತ ಸಂಭವಿಸಬಹುದೆಂಬ ಆತಂಕ ವ್ಯಕ್ತವಾಗಿದೆ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಮಕ್ಕಳ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…