ಪುತ್ತೂರು: ಮಾದಕ ವ್ಯಸನ ಈಗಿನ ಸಮಾಜದ ದೊಡ್ಡ ಭಾದಕವಾಗಿದ್ದು, ಯುವ ಸಮಾಜ ಇದರಿಂದ ದಾರಿ ತಪ್ಪುತ್ತಿದ್ದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ವಿದ್ಯಾರ್ಥಿಗಳು ಕೆಟ್ಟ ಚಟುವಟಿಕೆಗಳಿಗೆ ಬಲಿಯಾಗದೆ ಶಿಕ್ಷಣದ ಕಡೆ ಗಮನಹರಿಸಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ತರಬೇತುದಾರ ಶ್ರೀಕಾಂತ್ ಬಿರಾವು ಹೇಳಿದರು.
ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ ಜಿಲ್ಲೆ, ಮೇರಾ ಯುವ ಭಾರತ್ ದಕ್ಷಿಣ ಕನ್ನಡ ಜಿಲ್ಲೆ, ದಕ್ಷ ಸೇವಾ ಟ್ರಸ್ಟ್ ಪುತ್ತೂರು ಇದರ ವತಿಯಿಂದ ಪಾಪೆಮಜಲು ಸರಕಾರಿ ಫ್ರೌಡ ಶಾಲೆ ಇಲ್ಲಿ ಮಾದಕ ದ್ರವ್ಯ ವ್ಯಸನ ತಡೆಗಟ್ಟುವಿಕೆ ಅರಿವು ಕಾರ್ಯಕ್ರಮ ವನ್ನು ಉದ್ದೇಶಿತ ಮಾತನಾಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಮೊನಪ್ಪ ಪೂಜಾರಿ, ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.





















