tamanvi
ಶಿಕ್ಷಣ

ಸವಣೂರು, ಸಜಂಕಾಡಿ ಶಾಲೆಯಲ್ಲಿ ಗ್ರಾಹಕ ಜಾಗೃತಿ, ಅರಿವು ಕಾರ್ಯಕ್ರಮ | ಸಂತ ಫಿಲೋಮಿನಾ ಕಾಲೇಜಿನ ಗ್ರಾಹಕ ವೇದಿಕೆಯಿಂದ ಆಯೋಜನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ದರ್ಬೆ ಪುತ್ತೂರು ಇದರ ಗ್ರಾಹಕ ವೇದಿಕೆ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಇತ್ತೀಚೆಗೆ ದ.ಕ.ಜ.ಪ. ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಸವಣೂರು ಹಾಗೂ ಸ.ಹಿ.ಪ್ರಾ ಶಾಲೆ, ಸಜಂಕಾಡಿ ಇಲ್ಲಿ ಗ್ರಾಹಕ ಜಾಗೃತಿ ಕಾರ್ಯಾಗಾರ ಮತ್ತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು.

philo

ಈ ಕಾರ್ಯಕ್ರಮದ ಮುಖ್ಯ ಉದ್ದೇಶವು ಶಾಲಾ ಮಕ್ಕಳಿಗೆ ಗ್ರಾಹಕರ ಮೂಲಭೂತ ಹಕ್ಕುಗಳು, ಜವಾಬ್ದಾರಿಯುತ ಖರೀದಿ ಪದ್ಧತಿ ಹಾಗೂ ವಸ್ತುಗಳನ್ನು ಖರೀದಿಸುವಾಗ ಜಾಗರೂಕರಾಗಿರಬೇಕಾದ ಅಗತ್ಯದ ಬಗ್ಗೆ ಅರಿವು ಮೂಡಿಸುವುದಾಗಿತ್ತು.

ಗ್ರಾಹಕ ವೇದಿಕೆಯ ಸದಸ್ಯರಾದ ಕಾಲೇಜು ವಿದ್ಯಾರ್ಥಿಗಳು ಶಾಲಾ ಮಕ್ಕಳೊಂದಿಗೆ ಸಂವಾದ ನಡೆಸಿ ವಿವಿಧ ಜಾಗೃತಿ ಚಟುವಟಿಕೆಗಳನ್ನು ನಡೆಸಿ, ಗ್ರಾಹಕ ಜಾಗೃತಿಗೆ ಸಂಬಂಧಿಸಿದ ಸರಳ ವಿಷಯಗಳನ್ನು ಮಕ್ಕಳಿಗೆ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ ವಿವರಿಸಿ, ಜೊತೆಗೆ ವಿವಿಧ ಉತ್ಪನ್ನಗಳನ್ನು ಪ್ರದರ್ಶಿಸಿ, ವಸ್ತುಗಳನ್ನು ಖರೀದಿಸುವಾಗ ಅದರ ಬೆಲೆ, ಉತ್ಪಾದನಾ ದಿನಾಂಕ, ಅವಧಿ ಮುಗಿಯುವ ದಿನಾಂಕ, ಗುಣಮಟ್ಟದ ಗುರುತುಗಳು ಹಾಗೂ ಸರಿಯಾದ ಲೇಬಲ್ ಮಾಹಿತಿಗಳನ್ನು ಹೇಗೆ ಪರಿಶೀಲಿಸಬೇಕು ಎಂಬುದನ್ನು ತಿಳಿಸಿದರು.

ಕಾರ್ಯಕ್ರಮವನ್ನು ಹೆಚ್ಚು ಆಸಕ್ತಿದಾಯಕವಾಗಿಸಲು ವಿದ್ಯಾರ್ಥಿಗಳು ಸ್ಕಿಟ್‌ಗಳು, ಉತ್ಪನ್ನ ಪ್ರದರ್ಶನಗಳು ಹಾಗೂ ಸಂವಾದಾತ್ಮಕ ಚಟುವಟಿಕೆಗಳನ್ನು ನಡೆಸಿ ಸಾಮಾನ್ಯ ಗ್ರಾಹಕ ಸಮಸ್ಯೆಗಳು ಮತ್ತು ತಿಳಿದ ಗ್ರಾಹಕರಾಗಿರುವ ಮಹತ್ವವನ್ನು ವಿವರಿಸಿದರು. ಇದರಿಂದ ಶಾಲಾ ಮಕ್ಕಳು ತಮ್ಮ ದೈನಂದಿನ ಜೀವನದಲ್ಲಿ ಗ್ರಾಹಕ ಜಾಗೃತಿಯ ಅಗತ್ಯವನ್ನು ತಿಳಿದುಕೊಳ್ಳಲು ಸಹಾಯವಾಯಿತು.

ದರ್ಬೆ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಗ್ರಾಹಕ ವೇದಿಕೆಯ ಸಂಯೋಜಕರಾದ ಪ್ರವೀಣ್ ಡಿ. ಸ್ವಾತಿ ಶೆಟ್ಟಿ ಕಾರ್ಯಕ್ರಮ ಸಂಯೋಜಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್‌ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಪುತ್ತೂರು: ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ…