ಶಿಕ್ಷಣ

ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಬಹುಬೇಡಿಕೆಯ 3 ಹೊಸ ಕೋರ್ಸ್‌ ಆರಂಭ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಇದೀಗ 3 ಹೊಸ ಕೋರ್ಸ್’ಗಳನ್ನು ಆರಂಭಿಸಲಾಗಿದೆ ಎಂದು ಆಡಳಿತ ಮಂಡಳಿ ಅಧ್ಯಕ್ಷ ವಿಶ್ವೇಶ್ವರ ಭಟ್ ಬಂಗಾರಡ್ಕ ಹೇಳಿದರು.

chennai-shopping
maithri

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು 4 ದಶಕಗಳ ಶೈಕ್ಷಣಿಕ ವರ್ಷಗಳನ್ನು ಪೂರೈಸಿದ್ದು ಸಂಸ್ಥೆಯಲ್ಲಿ ಇದೀಗ 2026-27ನೇ ಶೈಕ್ಷಣಿಕ ಸಾಲಿನಿಂದ ಆಟೋಮೇಷನ್ ಆಂಡ್ ರೊಬೋಟಿಕ್, ಆರ್ಟಿಫೀಶಿಯಲ್ ಇಂಟಲೆಜನ್ಸಿ ಆಂಡ್ ಮೆಷಿನ್ ಲರ್ನಿಂಗ್(ಕೃತಕ ಬುದ್ದಿಮತ್ತೆ), ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಆಂಡ್ ಇಲೆಕ್ಟ್ರಿಕಲ್ ವೆಹಿಕಲ್ ಟೆಕ್ನೋಲಜಿಗಳನ್ನು ಸೇರ್ಪಡೆಗೊಳಿಸಲಾಗಿದೆ ಎಂದರು.

ಆಧುನಿಕ ವಿದ್ಯಾಮಾನಕ್ಕೆ ಸರಿಯಾದ ಬೇಡಿಕೆಯಲ್ಲಿರುವ ಈ ಮೂರು ಹೊಸ ಕೋರ್ಸ್‌ಗಳಿಗೆ ನವದೆಹಲಿಯ ಎಐಸಿಟಿಇಯಿಂದ ಮಾನ್ಯತೆ ನೀಡಿದೆ. ವಿವೇಕಾನಂದ ಪಾಲಿಟೆಕ್ನಿಕ್ ಸಂಸ್ಥೆಯು ತಾಂತ್ರಿಕ ಪರೀಕ್ಷಾ ಮಂಡಳಿ ಬೆಂಗಳೂರು ಇವರೊಂದಿಗೆ ಸಂಯೋಜನೆಗೊಂಡಿದೆ ಎಂದರು.

ಈಗಾಗಲೇ ಸಂಸ್ಥೆಯಲ್ಲಿ ಸಿವಿಲ್ ಇಂಇನಿಯರಿಂಗ್, ಮೆಕ್ಯಾನಿಕಲ್ ಇಂಜಿನಿಯರಿಂಗ್, ಇಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಇಂಜಿನಿಯರಿಂಗ್, ಆಟೋಮೊಬೈಲ್ ಇಂಜಿನಿಯರಿಂಗ್ ಮತ್ತು ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ ಡಿಪ್ಲೋಮಾ ಕೋರ್ಸ್ ಗಳು ಇವೆ. ಇದರ ಜೊತೆಗೆ ಇದೀಗ ಮೂರು ಹೊಸ ಕೋರ್ಸ್ ಗಳು ಸೇರ್ಪಡೆಗೊಂಡಿವೆ. ನೂತನ ಮೂರು ಕೋರ್ಸ್‌ಗಳ ಸೇರ್ಪಡೆಗೆ ಸಂಬಂಧಿಸಿ ಇಲಾಖೆಗಳಿಂದ ಅನುಮತಿ ಕೊಡಿಸುವಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರು ಉತ್ತಮ ಸಹಕಾರ ನೀಡಿದ್ದಾರೆ. ಅವರಿಗೆ ನಾವು ಅಭಿನಂದನೆ ಸಲ್ಲಿಸುತ್ತೇವೆ ಎಂದರು.

ಸೇರ್ಪಡೆಗೊಂಡ ಮೂರು ಹೊಸ ಕೋರ್ಸ್‌ಗಳಲ್ಲಿ ತಲಾ 30 ಸೀಟುಗಳು ಲಭ್ಯವಿದೆ. ಡಿಪ್ಲೋಮಾ ಶಿಕ್ಷಣ ಪಡೆಯಲು ಕನಿಷ್ಠ ವಿದ್ಯಾರ್ಹತೆ ಎಸ್‌ಎಸ್‌ಎಲ್‌ಸಿ ಆಗಿರಬೇಕು. ಡಿಪ್ಲೊಮಾ ಪದವಿ ಪಡೆದವರು 3 ವರ್ಷಗಳ ಪಾಲಿಟೆಕ್ನಿಕ್ ಕೋರ್ಸ್‌ಗಳ ಬಳಿಕ ನೇರವಾಗಿ ಇಂಜಿನಿಯರಿಂಗ್ 2 ನೇ ವರ್ಷಕ್ಕೆ ಪ್ರವೇಶ, ಪಿಯುಸಿ ವಿಜ್ಞಾನ ವಿಭಾಗ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳಿಗೆ ಡಿಪ್ಲೋಮಾದ 2ನೇ ವರ್ಷಕ್ಕೆ ನೇರ ದಾಖಲಾತಿ, ಕಂಪೆನಿಗಳಲ್ಲಿ ಇಂಟರ್‌ಶಿಪ್ ಟ್ರೈನಿಂಗ್, ಕಂಪೆನಿಗಳಿಗೆ ಕಾಲೇಜಿನಿಂದ ನೇರ ನೇಮಕಾತಿ, ಸುಸಜ್ಜಿತ ಕೊಠಡಿಗಳು, ಗ್ರಂಥಾಲಯ, ಪ್ರಯೋಗಾಲಯ, ವಿಶಾಲವಾದ ಆಟದ ಮೈದಾನವಿದೆ. ಸರಕಾರದಿಂದ ಕೊಡಮಾಡುವ ಎಲ್ಲಾ ವಿದ್ಯಾರ್ಥಿ ವೇತನಗಳು, ಆಡಳಿತ ಮಂಡಳಿಯ ವತಿಯಿಂದ ನೀಡುವ ದತ್ತಿನಿಧಿ ವಿದ್ಯಾರ್ಥಿವೇತನಗಳು ಲಭ್ಯ. ವಸತಿ ನಿಲಯಗಳಿವೆ. ಆರ್ಥಿಕವಾಗಿ ಹಿಂದುಗಳಿದಿರುವ ಅರ್ಹ ಬಡ ವಿದ್ಯಾರ್ಥಿಗಳಗೆ ವಿವೇಕಾನಂದ ವಿದ್ಯಾವರ್ಧಕ ಸಂಘದಿಂದ ಶುಲ್ಕ ರಿಯಾಯಿತಿ ನೀಡಲಾಗುತ್ತದೆ ಎಂದು ವಿವರಿಸಿದರು.

ಪತ್ರಿಕಾಗೋಷ್ಟಿಯಲ್ಲಿ ಸಂಸ್ಥೆಯ ಸಂಚಾಲಕ ಮಣಿಲ ಮಹಾದೇವ ಶಾಸ್ತ್ರೀ, ಆಡಳಿತ ಮಂಡಳಿ ಸದಸ್ಯರಾದ ರವಿಮುಂಗ್ಲಿಮನೆ, ಈಶ್ವರಚಂದ್ರ, ಪ್ರಶಾಂತ್, ಪ್ರಾಂಶುಪಾಲ ಮುರಳಿಧರ, ಸಿವಿಲ್ ವಿಭಾಗದ ಮುಖ್ಯಸ್ಥ ರವಿರಾಮ ಸಿದ್ಧಮೂಲೆ, ಕಂಪ್ಯೂಟರ್ ವಿಭಾಗದ ಮುಖ್ಯಸ್ಥೆ ಪುಷ್ಪಾ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…