ಶಿಕ್ಷಣ

ಪಿಯುಸಿ ಫಲಿತಾಂಶ: ರಾಜ್ಯಕ್ಕೆ 8ನೇ ರ್ಯಾಂಕ್ ಪಡೆದ ಶ್ರೀವಿದ್ಯಾ ಜೆಡ್ಡು ಅವರಿಗೆ ಗೌರವ

GL

ಈ ಸುದ್ದಿಯನ್ನು ಶೇರ್ ಮಾಡಿ

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 8ನೇ ಸ್ಥಾನ ಗಳಿಸಿದ ಬಂಟ್ವಾಳ ತಾಲೂಕಿನ ಬಸವನಗುಡಿಯ ನಿವಾಸಿ ಶ್ರೀವಿದ್ಯಾ ಜೆಡ್ಡು ಅವರಿಗೆ ಮುಡಿಪು ಶ್ರೀ ಗೋಪಾಲಕೃಷ್ಣ ಸಭಾಭವನದಲ್ಲಿ ನಡೆದ ಪಟಿಕ್ಕಲ್ ಕೃಷ್ಣಪಸಾದರ ಮಗ ಚಿನ್ಮಯ ರಾಮ ಅವರ ಉಪನಯನ ಸಂದರ್ಭ ಗೌರವಿಸಲಾಯಿತು.

maithri

ಶ್ರೀವಿದ್ಯಾ ಜೆಡ್ಡು ಸ್ವರ ಸಿಂಚನ ಸಂಗೀತ ಕಲಾ ಶಾಲೆಯ ವಿದ್ಯಾರ್ಥಿ. ಭರತನಾಟ್ಯ ಕಲಾವಿದೆ. ಬಹುಮುಖ ಕಲಾ ಪ್ರತಿಭೆ. ಪುತ್ತೂರು ವಿವೇಕಾನಂದ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ.

ಪಟಿಕ್ಕಲ್ ರಾಮಚಂದ್ರ ಭಟ್ ಮತ್ತು ದೇವಕಿ ಅವರು ಶಾಲು ಪೇಟ ತೊಡಿಸಿದರು. ಶಾರದಮ್ಮ ಪೆರ್ನಾಜೆ ಹಾರ ಹಾಕಿದರು. ಗೌರಿ ಜೆಡ್ಡು ಪುಸ್ತಕ, ಸ್ಮರಣಿಕೆ ನೀಡಿದರು. ಕುಮಾರ ಪೆರ್ನಾಜೆ- ಸೌಮ್ಯ ಪೆರ್ನಾಜೆ ದಂಪತಿ ಜೇನುತುಪ್ಪ, ತಾಂಬೂಲ ನೀಡಿ ಶುಭ ಹಾರೈಸಿದರು.

ವಿದ್ಯಾರ್ಥಿನಿಯ ಹೆತ್ತವರು ನ್ಯಾಯವಾದಿ ಪ್ರಕಾಶ್ ನಾರಾಯಣ ಜೆಡ್ಡು, ರಮ್ಯ ಜೆಡ್ಡು ಹಾಗೂ ಕೃಷ್ಣಪ್ರಸಾದ್ ಪಟಿಕ್ಕಲ್, ಸ್ವರ್ಣ ಗೌರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಹತ್ತನೆಯಲ್ಲಿ 55 ಶೇಕಡ, ಪಿಯು ಫಲಿತಾಂಶದಲ್ಲಿ 94.6 ಶೇಕಡ! ಬಪ್ಪಳಿಗೆಯ ಅಂಬಿಕಾ ಪ.ಪೂ.ವಿದ್ಯಾಲಯದ ನಿಹಾಲ್ ಎನ್ ಅವರಿಂದ ವಿಶಿಷ್ಟ ಸಾಧನೆ

ಪುತ್ತೂರು: ಇತ್ತೀಚೆಗೆ ಪ್ರಕಟವಾದ ದ್ವಿತೀಯ ಪಿಯು ಫಲಿತಾಂಶದಲ್ಲಿ ಪುತ್ತೂರಿನ ನಟ್ಟೋಜ ಫೌಂಡೇಶನ್…

ಮಕ್ಕಳ ರಕ್ಷಣೆಗೆ ಮಹತ್ವದ ನಿರ್ಧಾರ ಪ್ರಕಟಿಸಿದ ಸರ್ಕಾರ | ಮೊಬೈಲ್ ಬ್ಯಾನ್ ಜೊತೆಗೆ ಹಲವು ಸುಧಾರಣಾ ಕ್ರಮಗಳು!

ಬೆಂಗಳೂರು:ರಾಜ್ಯದಲ್ಲಿ ಮಕ್ಕಳ ಆರೋಗ್ಯ ಮತ್ತು ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು ಮಹತ್ವದ…