tamanvi
ಶಿಕ್ಷಣ

ಜಿಡೆಕಲ್ಲು ಸರಕಾರಿ ಕಾಲೇಜಿಗೆ ಹೆಚ್ಚುವರಿ ಬಸ್ ಸಂಪರ್ಕ ಕಲ್ಪಿಸುವಂತೆ ಶಾಸಕ ಅಶೋಕ್ ರೈಗೆ ವಿದ್ಯಾರ್ಥಿಗಳಿಂದ ಮನವಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜಿಡೆಕಲ್ಲು ಪ್ರಥಮ ದರ್ಜೆ ಸರಕಾರಿ ಕಾಲೇಜಿಗೆ ತೆರಳಲು ಹೆಚ್ಚುವರಿ ಸರಕಾರಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ವಿದ್ಯಾರ್ಥಿಗಳು ಶಾಸಕ ಅಶೋಕ್ ರೈ ಅವರಿಗೆ ಮನವಿ ಸಲ್ಲಿಸಿದರು.

maithri

ಶಾಸಕರ ಕಚೇರಿಗೆ ಬಂದು ಮನವಿ ಸಲ್ಲಿಸಿದ ವಿದ್ಯಾರ್ಥಿಗಳು, ಜಿಡೆಕಲ್ಲು ಕಾಲೇಜಿನಲ್ಲಿ ಸುಮಾರು 150ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈಗಾಗಲೇ ಬೆಳಗ್ಗೆ ಮತ್ತು ಸಂಜೆ ಒಂದು ಬಸ್ಸಿನ ವ್ಯವಸ್ಥೆ ಇದ್ದು, ಬಸ್ಸಿನಲ್ಲಿ ಪ್ರಯಾಣಿಸುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳಿಗೆ ಒಂದೇ ಬಸ್ಸಿನಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಬೆಳಗ್ಗೆ ಮತ್ತು ಸಂಜೆ ಹೆಚ್ಚುವರಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿ ಬೆಳಗ್ಗೆ ಗಂಟೆ 8.50 ಮತ್ತು 9.10 ಕ್ಕೆ ಹಾಗೂ ಸಂಜೆ 3.30 ಮತ್ತು 4.30 ಗಂಟೆಗೆ ಹೆಚ್ಚುವರಿ ಬಸ್ ವ್ಯವಸ್ಥೆಯನ್ನು ಒದಗಿಸಿ ಕೊಡುವಂತೆ ವಿನಂತಿಸಿದರು.

ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ಕುಮಾರ್ ರೈ ಅವರು, ವಿದ್ಯಾರ್ಥಿಗಳಾದ ನಿಮ್ಮ ಮನವಿ ನ್ಯಾಯಯುತವಾಗಿಯೇ ಇದೆ. ಈಗಾಗಲೇ ಎರಡು ಬಸ್ ವ್ಯವಸ್ಥೆ ಇದೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರುವ ಕಾರಣ ಹೆಚ್ಚುವರಿ ಬಸ್ ಬೇಡಿಕೆ ಇಟ್ಟಿದ್ದೀರಿ. ಕೆಎಸ್ಆರ್ಟಿಸಿ ಡಿಸಿ ಜೊತೆ ಮಾತನಾಡಿ ಪರಿಶೀಲಿಸಿ ತಕ್ಷಣ ಕ್ರಮಕ್ಕೆ ಸೂಚನೆ ನೀಡುತ್ತೇನೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ವಿವೇಕಾನಂದ ವಿದ್ಯಾವರ್ಧಕ ಸಂಘಕ್ಕೆ ನೂತನ ಸಾರಥ್ಯ! | ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಕಡಬ ಸಾರಥಿ!

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿ, ಪುತ್ತೂರು ಎಪಿಎಂಸಿ ಮಾಜಿ ಅಧ್ಯಕ್ಷ…