ದಡ್ಡಲಕಾಡು ಸರ್ಕಾರಿ ಶಾಲೆಯಲ್ಲಿ ನಡೆದ 2026-27ನೇ ಸಾಲಿನ ಬಂಟ್ವಾಳ ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕನ್ಯಾನ ಶ್ರೀ ಸರಸ್ವತಿ ವಿದ್ಯಾಲಯದ 9ನೇ ತರಗತಿಯ ಪ್ರಣಿತ್ ಪಿ. ಶೆಟ್ಟಿಗಾರ್ ಅವರು ಅಂಡರ್-17 ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
10ನೇ ತರಗತಿಯ ಶ್ರಾವ್ಯ ಪಿ. ಅವರು ಅಂಡರ್-17 (+68 ಕೆ.ಜಿ.) ವಿಭಾಗದಲ್ಲಿ ತೃತೀಯ ಸ್ಥಾನ ಹಾಗೂ 9ನೇ ತರಗತಿಯ ರುತ್ವಿ ಎಚ್. ಅವರು ಅಂಡರ್-17 (-48 ಕೆ.ಜಿ.) ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಗುರು ಎಜುಕೇಶನ್ ಟ್ರಸ್ಟ್ ಅಧ್ಯಕ್ಷರು, ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.
























