tamanvi
ಶಿಕ್ಷಣ

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪದವೀಧರರ ಸಮಾರಂಭ | ಪದವಿ ಪಡೆಯುತ್ತಿರುವ ಸ್ನಾತಕೋತ್ತರ ವಿದ್ಯಾರ್ಥಿಗಳ ಪ್ರಥಮ ತಂಡವನ್ನು ಅಧಿಕೃತವಾಗಿ ಗೌರವಿಸುವ ಪ್ರಥಮ ಐತಿಹಾಸಿಕ ಸಮಾರಂಭ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ತನ್ನ ಶೈಕ್ಷಣಿಕ ಇತಿಹಾಸದಲ್ಲಿ ಮಹತ್ವದ ಮೈಲಿಗಲ್ಲೊಂದನ್ನು ಆಚರಿಸಲಿದ್ದು, ಕಾಲೇಜಿನ ಪ್ರಥಮ ಪದವೀಧರರ ಸಮಾರಂಭ ಸೆಪ್ಟೆಂಬರ್ 11ರಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಎಸ್.ಜೆ.ಎಂ. ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಸಂಚಾಲಕ ಅತಿ ವಂI ಡಾI ಜೆ.ಬಿ. ಸಲ್ದಾನ್ಹಾ ಹೇಳಿದರು.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ನಾತಕೋತ್ತರ ಪದವಿ ಪಡೆಯುತ್ತಿರುವ ಪ್ರಥಮ ಸ್ನಾತಕೋತ್ತರ ವಿದ್ಯಾರ್ಥಿಗಳ ತಂಡವನ್ನು ಅಧಿಕೃತವಾಗಿ ಗೌರವಿಸುವ ಈ ಸಮಾರಂಭವು ಸಂಸ್ಥೆಯ ಶೈಕ್ಷಣಿಕ ಪಯಣದಲ್ಲಿ ಹೊಸ ಅಧ್ಯಾಯವೊಂದಕ್ಕೆ ನಾಂದಿ ಹಾಡಲಿದೆ. ಕಾಲೇಜಿನ ಪ್ರಥಮ ಪದವೀಧರರ ಸಮಾರಂಭವು ಸಂಸ್ಥೆಯ ಶೈಕ್ಷಣಿಕ ಪಯಣದಲ್ಲಿ ವಿಶೇಷ ಮಹತ್ವವನ್ನು ಹೊಂದಿದೆ. ಸ್ವಾಯತ್ತ ಸಂಸ್ಥೆಯಾಗಿ ಕಾಲೇಜಿನ ನಿರಂತರ ಪ್ರಗತಿ ಮತ್ತು ಬೆಳವಣಿಗೆಯಲ್ಲಿ ಇದು ಒಂದು ಪ್ರಮುಖ ಮೈಲಿಗಲ್ಲಾಗುವುದರ ಜೊತೆಗೆ, ಶೈಕ್ಷಣಿಕ ಶ್ರೇಷ್ಠತೆ, ವ್ಯಕ್ತಿತ್ವ ನಿರ್ಮಾಣ ಹಾಗೂ ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಯ ಕುರಿತಾಗಿ ಕಾಲೇಜು ಹೊಂದಿರುವ ಬದ್ಧತೆಯನ್ನು ಮತ್ತೊಮ್ಮೆ ದೃಢಪಡಿಸುವ ಸಂಭ್ರಮ ಆಗಿದೆ ಎಂದರು.

ಈ ಸಂದರ್ಭದಲ್ಲಿ ಆಡಳಿತ ಮಂಡಳಿ, ಶೈಕ್ಷಣಿಕ ನಾಯಕತ್ವ, ಬೋಧಕ ವರ್ಗ, ಸಿಬ್ಬಂದಿ, ಪೋಷಕರು, ಹಿರಿಯ ವಿದ್ಯಾರ್ಥಿಗಳು ಹಾಗೂ ವಿದ್ಯಾರ್ಥಿಗಳು ಒಂದೆಡೆ ಸೇರಿ ಪದವೀಧರ ವಿದ್ಯಾರ್ಥಿಗಳ ಹಾಗೂ ಶೈಕ್ಷಣಿಕ ಸಾಧಕರ ಸಾಧನೆಗಳನ್ನು ಸ್ಮರಿಸಿ ಗೌರವಿಸಲಿದ್ದಾರೆ ಎಂದರು.

ಮಂಗಳೂರು ಧರ್ಮಪ್ರಾಂತ್ಯದ ಬಿಷಪ್ ಹಾಗೂ ಮಂಗಳೂರು ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಇದರ ಅಧ್ಯಕ್ಷ ಅತಿ ವಂದನೀಯ ಡಾI ಪೀಟರ್ ಪಾಲ್ ಸಲ್ದಾನ್ಹಾ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಪಿ. ಎಲ್. ಧರ್ಮ ಮುಖ್ಯ ಅತಿಥಿಯಾಗಿರುವರು. ಕಾಲೇಜು ಶಿಕ್ಷಣ ಇಲಾಖೆಯ ಮಂಗಳೂರು ವಿಭಾಗದ ಜಂಟಿ ನಿರ್ದೇಶಕಿ ಪ್ರೊ. ಕವಿತಾ ಕೆ.ಆರ್., ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಕಾರ್ಯದರ್ಶಿ ವಂದನೀಯ ಡಾI ಪ್ರವೀಣ್ ಲಿಯೋ ಲಸ್ರಾದೋ ಹಾಗೂ ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ಸಂಚಾಲಕ ಅತಿ ವಂದನೀಯ ಡಾI ಜೆ. ಬಿ. ಸಲ್ದಾನ್ಹಾ ಅತಿಥಿಗಳಾಗಿರುವರು ಎಂದರು.

ಪದವೀಧರರ ಸಮಾರಂಭವು ಕೇವಲ ಒಂದು ಔಪಚಾರಿಕ ಶೈಕ್ಷಣಿಕ ಕಾರ್ಯಕ್ರಮವಾಗಿರದೆ, ಹಲವು ವರ್ಷಗಳ ಕಲಿಕೆ, ಶಿಸ್ತು ಮತ್ತು ವೈಯಕ್ತಿಕ ಬೆಳವಣಿಗೆಯ ಪರಿಪೂರ್ಣತೆಯನ್ನು ಸಂಭ್ರಮಿಸುವ ಮಹತ್ವದ ಸಂದರ್ಭವಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗಳನ್ನು ಗುರುತಿಸಿ ಗೌರವಿಸುವುದರ ಜೊತೆಗೆ, ಅವರ ಶೈಕ್ಷಣಿಕ ಪಯಣದಲ್ಲಿ ಪೋಷಕರು, ಶಿಕ್ಷಕರು ಹಾಗೂ ಇಡೀ ಕಾಲೇಜು ಸಮುದಾಯ ನೀಡಿದ ಬೆಂಬಲ ಮತ್ತು ಸಹಕಾರವನ್ನು ಸ್ಮರಿಸುವ ಅವಕಾಶವೂ ಇದಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ವಂದನೀಯ ಡಾ. ಆಂಟನಿ ಪ್ರಕಾಶ್ ಮೊಂತೆರೊ, ಮೌಲ್ಯಮಾಪನ ವಿಭಾಗದ ರಿಜಿಸ್ಟ್ರಾರ್ ಡಾ. ವಿನಯಚಂದ್ರ ಶೈಕ್ಷಣಿಕ ವಿಭಾಗದ ರಿಜಿಸ್ಟ್ರಾರ್ ಡಾI ನಾರ್ಬರ್ಟ್ ಮಸ್ಕರೇನ್ಹಸ್, ಪುತ್ತೂರು ಮಾಯಿ ದೆ ದೇವುಸ್ ಚರ್ಚ್  ಪಾಲನಾ ಪರಿಷತ್ತಿನ ಉಪಾಧ್ಯಕ್ಷ ರೋಶನ್ ಲಸ್ರಾದೋ, ಸಾರ್ವಜನಿಕ ಸಂಪರ್ಕಾಧಿಕಾರಿ ಡಾI ಭಾರತಿ ಎಸ್. ರೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…