tamanvi
ಶಿಕ್ಷಣ

ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ರೇಬೀಸ್ ರೋಗದ ಕುರಿತು ಜಾಗೃತಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳಾಲು: ರೇಬೀಸ್ ರೋಗದ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಸೆ.12ರಂದು ರೇಬೀಸ್ ರೋಗದ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಉಜಿರೆ ವಲಯದ ಪಶು ವೈದ್ಯಕೀಯ ಪರೀಕ್ಷಕರಾದ ಸಚಿನ್ ಅವರು ರೇಬೀಸ್ ರೋಗ ಹರಡುವ ಕಾರಣಗಳು, ರೋಗದಿಂದಾಗುವ ಅಪಾಯಗಳು ಹಾಗೂ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಮಾಹಿತಿ ನೀಡಿದರು. ಪಿಪಿಟಿ ಹಾಗೂ ವಿಡಿಯೋ ಪ್ರದರ್ಶನದ ಮೂಲಕ ವಿದ್ಯಾರ್ಥಿಗಳಿಗೆ ರೇಬೀಸ್ ಕುರಿತು ಅರಿವು ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ, ಬೆಳಾಲು ಗ್ರಾಮದ ಪಶುಸಖಿ ಯಶೋಧ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಭವಿತ ಕಾರ್ಯಕ್ರಮ ನಿರೂಪಿಸಿದರು.

ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಹಾಗೂ ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ಇವರ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಬೆಳಾಲು ಧ.ಮಂ. ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ನೆಟ್‌ಬಾಲ್ ಪಂದ್ಯಾಟ: ಆತಿಥೇಯ ಶಾಲೆಗೆ ಬಾಲಕಿಯರ ವಿಭಾಗದಲ್ಲಿ ಪ್ರಥಮ

ಬೆಳಾಲು: ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಸೆ. 9ರಂದು ತಾಲೂಕು ಮಟ್ಟದ…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಟನ್ ಪಂದ್ಯಾಟ | ವಿದ್ಯಾರ್ಥಿಗಳು ಸೋಲು ಗೆಲುವನ್ನು ಸಮಾನವಾಗಿ ಕಾಣಬೇಕು : ಸುರೇಶ್ ಶೆಟ್ಟಿ

ಪುತ್ತೂರು: ವಿದ್ಯಾರ್ಥಿಗಳು ಗೆಲುವನ್ನು ಮಾತ್ರ ನಿರೀಕ್ಷಿಸುತ್ತಿರಬಾರದ್ಲು. ಸೋತಾಗಲೂ ಅನುಭವ…

ಸೆ. 10 ಮತ್ತು 11ರಂದು ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ರಾಷ್ಟ್ರಮಟ್ಟದ ‘ಆರೋಹಂ’ ಶೈಕ್ಷಣಿಕ–ಸಾಂಸ್ಕೃತಿಕ ಉತ್ಸವ

ಉಜಿರೆ: ಸ್ಥಳೀಯ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಸೆ. 10 ಮತ್ತು 11ರಂದು ರಾಷ್ಟ್ರಮಟ್ಟದ…