Gl harusha
ಶಿಕ್ಷಣ

ಬಿಸಿಲ ತಾಪಕ್ಕೆ ನೆರಳಾದ ಗುಜುರಿ ಹಣ!! ಹೀಗೂ ಬಸ್ ನಿಲ್ದಾಣ ನಿರ್ಮಿಸಬಹುದೆಂದು ತೋರಿಸಿಕೊಟ್ಟ ಎನ್.ಎಸ್.ಎಸ್. ಕಾರ್ಯಕರ್ತರು!

ಗುಜಿರಿ ಸಂಗ್ರಹಿಸಿ ಮಾರಿ ಸಿಕ್ಕಿದ ಹಣದಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ವಿದ್ಯಾರ್ಥಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ಪೆರ್ಲ : ರಾಷ್ಟ್ರೀಯ ಸೇವಾ ಯೋಜನೆಯ ಶೇಣಿ ಶ್ರೀ ಶಾರದಾಂಬ ಹೈಯರ್ ಸೆಕೆಂಡರಿ ಶಾಲೆಯ ಘಟಕದ ಕಾರ್ಯಕರ್ತರು ಎಣ್ಮಕಜೆ ಗ್ರಾಮ ಪಂಚಾಯತಿನ ಬೆದ್ರಂಪಳ್ಳ ವಾರ್ಡಿನ ಚಂಬ್ರಕಾನದಲ್ಲಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು.

srk ladders
Pashupathi
Muliya

ಈ ಪ್ರದೇಶದ ಜನರು ಗಾಳಿ ಮಳೆ, ಬಿಸಿಲಿಗೆ ರಕ್ಷಣೆಯಿಲ್ಲದೆ ಬಸ್ ಕಾಯುತ್ತಿರುವುದನ್ನು ಮನಗಂಡ ಎನ್ನೆಸ್ಸೆಸ್ ಕಾರ್ಯಕರ್ತರು ಗುಜುರಿ ಸಾಮಾಗ್ರಿಗಳನ್ನು ಸಂಗ್ರಹಿಸಿ ಮಾರುವ ಯೋಜನೆ ಮೂಲಕ ವಿವಿಧ ಧಾನಿಗಳ ನೆರವಿನಿಂದ ಈ ಬಸ್‌ ನಿಲ್ದಾಣವನ್ನು ನಿರ್ಮಿಸಲು ಯೋಜನೆ ಸಿದ್ಧಪಡಿಸಿದ್ದು, ಕಳೆದ ಒಂದು ತಿಂಗಳ ಅಂತರದಲ್ಲಿ ಕಾಮಗಾರಿ ಪೂರ್ತಿಗೊಳಿಸಿದ್ದಾರೆ.

ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಉದ್ಘಾಟಿಸಿದರು. ಪಂಚಾಯತು ಅಧ್ಯಕ್ಷ ಸೋಮಶೇಖರ ಜೆ.ಎಸ್‌. ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಸದಸ್ಯ ಅನಿಲ್‌ ಕುಮಾ‌ರ್ ಕೆ.ಪಿ, ಪಂ. ಸದಸ್ಯರಾದ ರಾಧಾಕೃಷ್ಣ ನಾಯಕ್‌ ಜೆ.ಎಸ್, ರಾಮಚಂದ್ರ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ, ಉಪಾಧ್ಯಕ್ಷ ಉಮ್ಮರ್ ಕಂಗಿನಮೂಲೆ, ಯುಪಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕ‌ರ್ ಪೆರ್ದನೆ, ಎನ್ನೆಸ್ಸೆಸ್ ನಾಯಕಿ ನಫೀಸಾ ಸುಲೈಮ ಮುಂತಾದವರು ಮಾತನಾಡಿದರು.

ಹೈಯರ್ ಸೆಕೆಂಡರಿ ಪ್ರಾಂಶುಪಾಲ ಶಾಸ್ತ ಕುಮಾರ್ ಎ ಸ್ವಾಗತಿಸಿ, ಎನ್ನೆಸ್ಸಸ್ ಕಾರ್ಯ ನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ಕ್ರಾಸ್ತಾ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕೊಂಬೆಟ್ಟು ಕಾಲೇಜಿನ ಶ್ರಾವ್ಯ.ಎಚ್.ಬಿ ಇವರಿಗೆ ಕಾಮರ್ಸ್ ವಿಭಾಗದಲ್ಲಿ ರಾಜ್ಯ ಮಟ್ಟದಲ್ಲಿ 6ನೇ ರಾಂಕ್

ಸರಕಾರಿ ಪದವಿ ಪೂರ್ವ ಕಾಲೇಜು ಕೊಂಬೆಟ್ಟು ಪುತ್ತೂರು ಇಲ್ಲಿನ ವಿದ್ಯಾರ್ಥಿನಿ ಶ್ರಾವ್ಯ.ಎಚ್.ಬಿ.…

ದ್ವಿತೀಯ ಪಿಯು ಫಲಿತಾಂಶ: ಪುತ್ತೂರು ಅಂಬಿಕಾ ವಿದ್ಯಾಲಯಕ್ಕೆ ರಾಜ್ಯದಲ್ಲಿ 6ನೇ ಸ್ಥಾನ, ತಾಲೂಕಿಗೆ ಪ್ರಥಮ

ಪುತ್ತೂರು: ನಗರದ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಂಸ್ಥೆಯ ಪದವಿ …