ಶಿಕ್ಷಣ

ಬಿಸಿಲ ತಾಪಕ್ಕೆ ನೆರಳಾದ ಗುಜುರಿ ಹಣ!! ಹೀಗೂ ಬಸ್ ನಿಲ್ದಾಣ ನಿರ್ಮಿಸಬಹುದೆಂದು ತೋರಿಸಿಕೊಟ್ಟ ಎನ್.ಎಸ್.ಎಸ್. ಕಾರ್ಯಕರ್ತರು!

GL
ಗುಜಿರಿ ಸಂಗ್ರಹಿಸಿ ಮಾರಿ ಸಿಕ್ಕಿದ ಹಣದಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ವಿದ್ಯಾರ್ಥಿಗಳು

ಈ ಸುದ್ದಿಯನ್ನು ಶೇರ್ ಮಾಡಿ

ಪೆರ್ಲ : ರಾಷ್ಟ್ರೀಯ ಸೇವಾ ಯೋಜನೆಯ ಶೇಣಿ ಶ್ರೀ ಶಾರದಾಂಬ ಹೈಯರ್ ಸೆಕೆಂಡರಿ ಶಾಲೆಯ ಘಟಕದ ಕಾರ್ಯಕರ್ತರು ಎಣ್ಮಕಜೆ ಗ್ರಾಮ ಪಂಚಾಯತಿನ ಬೆದ್ರಂಪಳ್ಳ ವಾರ್ಡಿನ ಚಂಬ್ರಕಾನದಲ್ಲಿ ನಿರ್ಮಿಸಿದ ಬಸ್ ನಿಲ್ದಾಣವನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು.

core technologies

ಈ ಪ್ರದೇಶದ ಜನರು ಗಾಳಿ ಮಳೆ, ಬಿಸಿಲಿಗೆ ರಕ್ಷಣೆಯಿಲ್ಲದೆ ಬಸ್ ಕಾಯುತ್ತಿರುವುದನ್ನು ಮನಗಂಡ ಎನ್ನೆಸ್ಸೆಸ್ ಕಾರ್ಯಕರ್ತರು ಗುಜುರಿ ಸಾಮಾಗ್ರಿಗಳನ್ನು ಸಂಗ್ರಹಿಸಿ ಮಾರುವ ಯೋಜನೆ ಮೂಲಕ ವಿವಿಧ ಧಾನಿಗಳ ನೆರವಿನಿಂದ ಈ ಬಸ್‌ ನಿಲ್ದಾಣವನ್ನು ನಿರ್ಮಿಸಲು ಯೋಜನೆ ಸಿದ್ಧಪಡಿಸಿದ್ದು, ಕಳೆದ ಒಂದು ತಿಂಗಳ ಅಂತರದಲ್ಲಿ ಕಾಮಗಾರಿ ಪೂರ್ತಿಗೊಳಿಸಿದ್ದಾರೆ.

ಮಂಜೇಶ್ವರ ಶಾಸಕ ಎಕೆಎಂ ಆಶ್ರಫ್ ಉದ್ಘಾಟಿಸಿದರು. ಪಂಚಾಯತು ಅಧ್ಯಕ್ಷ ಸೋಮಶೇಖರ ಜೆ.ಎಸ್‌. ಅಧ್ಯಕ್ಷತೆ ವಹಿಸಿದ್ದರು. ಮಂಜೇಶ್ವರ ಬ್ಲಾಕ್ ಸದಸ್ಯ ಅನಿಲ್‌ ಕುಮಾ‌ರ್ ಕೆ.ಪಿ, ಪಂ. ಸದಸ್ಯರಾದ ರಾಧಾಕೃಷ್ಣ ನಾಯಕ್‌ ಜೆ.ಎಸ್, ರಾಮಚಂದ್ರ ಎಂ, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ವಿಲ್ಸನ್ ಡಿಸೋಜ, ಉಪಾಧ್ಯಕ್ಷ ಉಮ್ಮರ್ ಕಂಗಿನಮೂಲೆ, ಯುಪಿ ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಅಬೂಬಕ್ಕ‌ರ್ ಪೆರ್ದನೆ, ಎನ್ನೆಸ್ಸೆಸ್ ನಾಯಕಿ ನಫೀಸಾ ಸುಲೈಮ ಮುಂತಾದವರು ಮಾತನಾಡಿದರು.

ಹೈಯರ್ ಸೆಕೆಂಡರಿ ಪ್ರಾಂಶುಪಾಲ ಶಾಸ್ತ ಕುಮಾರ್ ಎ ಸ್ವಾಗತಿಸಿ, ಎನ್ನೆಸ್ಸಸ್ ಕಾರ್ಯ ನಿರ್ವಹಣಾಧಿಕಾರಿ ಸಂತೋಷ್ ಕುಮಾರ್ ಕ್ರಾಸ್ತಾ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಂಬಿಕಾ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಬಹುಮಾನ | ಸ್ಕೂಲ್ ಗೇಮ್ ಫೆಡರೇಶನ್ ಆಫ್ ಇಂಡಿಯಾ ಸ್ಪರ್ಧೆಗೆ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ…

ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26

ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…