ಪುತ್ತೂರು: ನರ ಮತ್ತು ಮಾನಸಿಕ ಆರೋಗ್ಯ ತಪಾಸಣೆ ಹಾಗೂ ರಕ್ತದ ಮಧುಮೇಹ ಉಚಿತ ತಪಾಸಣಾ ಶಿಬಿರ ಜು. 4ರಂದು ಸಾಲ್ಮರದ ಕೆರೆಮೂಲೆ ದೀಪಶ್ರೀ ಹಿರಿಯ ನಾಗರಿಕರ ಪುನರ್ವಸತಿ ಕೇಂದ್ರದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ.
ರೋಟರಿ ಕ್ಲಬ್ ಪುತ್ತೂರು ಯುವ, ಬೆಂಗಳೂರಿನ ಸಿಎಡಿ ಎಮ್ಎಸ್ ಟ್ರಸ್ಟ್ ಡಾ. ಶ್ರೀಧರ್ ಕೆ.ಸಿ. ಹಾಗೂ ತಂಡ, ಪುತ್ತೂರಿನ ದೀಪಶ್ರೀ ಹಿರಿಯ ನಾಗರಿಕರ ಪುನರ್ವಸತಿ ಕೇಂದ್ರ ಮತ್ತು ಧನ್ವಂತರಿ ಲ್ಯಾಬೋರೇಟರಿ ಇವುಗಳ ಆಶ್ರಯದಲ್ಲಿ ಸಾರ್ವಜನಿಕರಿಗಾಗಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್ಚಿನ ಮಾಹಿತಿ ಹಾಗೂ ನೋಂದಾವಣೆಗಾಗಿ ಸಮಾಜ ಸೇವಾ ನಿರ್ದೇಶಕರಾದ ಅಭೀಷ್ (ಮೊಬೈಲ್ ಸಂಖ್ಯೆ: 9964875468) ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ರೋಟರಿ ಸಂಸ್ಥೆಯ ಅಧ್ಯಕ್ಷೆ ವಚನ ಜಯರಾಮ್ ಮತ್ತು ರೋಟರಿ ಕಾರ್ಯದರ್ಶಿ ಅನೂಪ್ ಕೆ.ಜೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.























