tamanvi
ದೇಶ

ಶಬರಿಮಲೆ ಭಕ್ತರೇ: ತಪ್ಪದೇ ಈ ಸುದ್ದಿ ಓದಿ | ಇರುಮುಡಿ ಕಟ್ಟುವಾಗಲೇ ಈ ಸೂಚನೆ ಪಾಲಿಸಿ!! ತಿರೂವಾಂಕೂರು ದೇವಸ್ವಂ ಬೋರ್ಡ್ ಹೊರಡಿಸಿದ ಸೂಚನೆಯಾದರೂ ಏನು?

D_shiva_bhat
ಶಬರಿಮಲೆಗೆ ಬರುವ ಭಕ್ತರು ತಮ್ಮ-ಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ತ್ತುಗಳನ್ನು ಕೊಂಡೋಯ್ಯುವಂತ್ತಿಲ್ಲ ಎಂದು ದಿವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಶಬರಿಮಲೆ Shabarimale ಮಾಲಾಧಾರಿಗಳು ಅಥವಾ ಭಕ್ತರು ತಮ್ಮ ಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ವತ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂದು ದೇವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.

maithri

ಶಬರಿಮಲೆಗೆ (Shabarimale) ಅಯ್ಯಪ್ಪ ಭಕ್ತರ ಭೇಟಿ ಶುರುವಾಗಿದ್ದು, ಇದರ ಬೆನ್ನಲ್ಲೇ ಭಕ್ತರು ತಮ್ಮ ಇರುಮುಡಿಕಟ್ಟುವಿನಲ್ಲಿ ಕಸವಾಗಿ ಬದಲಾಗುವ ವಸ್ತುಗಳನ್ನು ತಾರದಂತೆ ತಿರುವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ. ಹೀಗಾಗಿ ಇನ್ನು ಮುಂದೆ ಇರುಮುಡಿಕಟ್ಟುವಿನಲ್ಲಿ ಕರ್ಪೂರ, ಧೂಪದ್ರವ್ಯದ ಕಡ್ಡಿಗಳು ಮತ್ತು ರೋಸ್ ವಾಟರ್‌ಗಳನ್ನು ಇಡದಂತೆ ಸೂಚಿಸಲಾಗಿದೆ.
ತಿರುವಾಂಕೂರು ದೇವಸ್ವಂ ಮಂಡಳಿಯ ದೇವಾಲಯಗಳಲ್ಲಿ ಕರ್ಪೂರ, ಧೂಪದ್ರವ್ಯ ಮತ್ತು ಗುಲಾಬಿ ನೀರನ್ನು ಬಳಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗುವುದು ಎಂದು ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಮತ್ತು ಸದಸ್ಯ ಎ.ಅಜಿಕುಮಾ‌ರ್ ತಿಳಿಸಿದ್ದಾರೆ.

ಇದಲ್ಲದೆ, ಈ ನಿಟ್ಟಿನಲ್ಲಿ ಕೊಚ್ಚಿ ಮತ್ತು ಮಲಬಾರ್ ದೇವಸ್ವಂ ಮಂಡಳಿಗಳಿಗೆ ಸಹ ಪತ್ರ ನೀಡಲಾಗುವುದು. ರಾಜ್ಯದ ಖಾಸಗಿ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಮತ್ತು ಇತರ ರಾಜ್ಯಗಳ ಗುರುಸ್ವಾಮಿಗಳಿಗೆ ಕೂಡ ಈ ಬಗ್ಗೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಯಾಕೆ ಈ ವಸ್ತುಗಳನ್ನು ಇರುಮುಡಿಯಲ್ಲಿ ಇಡುವಂತಿಲ್ಲ?:
ಕರ್ಪೂರ ಮತ್ತು ಧೂಪದ್ರವ್ಯದ ಕಡ್ಡಿಗಳು ಪೂಜಾ ವಸ್ತುಗಳಾಗಿದ್ದರೂ ಬೆಂಕಿ ಹೊತ್ತಿಕೊಳ್ಳುವ ಅಪಾಯದ ಕಾರಣದಿಂದ ಅವುಗಳನ್ನು ಸನ್ನಿಧಾನದಲ್ಲಿ ಬಳಸಲು ಅನುಮತಿ ಇಲ್ಲ. ಹೀಗಾಗಿ ಭಕ್ತರು ಇರುಮುಡಿಕಟ್ಟುವಿನಲ್ಲಿ ತರುವ ಹೆಚ್ಚಿನ ವಸ್ತುಗಳು ಸಾಮಾನ್ಯವಾಗಿ ವ್ಯರ್ಥವಾಗಿ ಬಿಸಾಡಲ್ಪಡುತ್ತವೆ. ನಂತರ ದೇವಸ್ಥಾನ ಮಂಡಳಿಯವರು ಇಂಥ ತ್ಯಾಜ್ಯವನ್ನು ಪಂಡಿತಥಾವಲಂನಲ್ಲಿರುವ ಭಸ್ಮಗಾರಕ್ಕೆ ತೆಗೆದುಕೊಂಡು ಹೋಗಿ ಸುಡಬೇಕಾಗುತ್ತದೆ. ಈ ಪರಿಸ್ಥಿತಿಯನ್ನು ತಪ್ಪಿಸಲು ಹೊಸ ನಿಯಮ ಮಾಡಲಾಗಿದೆ ಎಂದು ದೇವಸ್ವಂ ಮಂಡಳಿ ಮಾಹಿತಿ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…