ದೇಶ

ಶಬರಿಮಲೆ ಭಕ್ತರೇ: ತಪ್ಪದೇ ಈ ಸುದ್ದಿ ಓದಿ | ಇರುಮುಡಿ ಕಟ್ಟುವಾಗಲೇ ಈ ಸೂಚನೆ ಪಾಲಿಸಿ!! ತಿರೂವಾಂಕೂರು ದೇವಸ್ವಂ ಬೋರ್ಡ್ ಹೊರಡಿಸಿದ ಸೂಚನೆಯಾದರೂ ಏನು?

GL
ಶಬರಿಮಲೆಗೆ ಬರುವ ಭಕ್ತರು ತಮ್ಮ-ಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ತ್ತುಗಳನ್ನು ಕೊಂಡೋಯ್ಯುವಂತ್ತಿಲ್ಲ ಎಂದು ದಿವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಶಬರಿಮಲೆ Shabarimale ಮಾಲಾಧಾರಿಗಳು ಅಥವಾ ಭಕ್ತರು ತಮ್ಮ ಮುಡಿಕಟ್ಟುವಿನಲ್ಲಿ ಇನ್ಮುಂದೆ ಈ ಯಾವ ವತ್ತುಗಳನ್ನು ಕೊಂಡೊಯ್ಯುವಂತಿಲ್ಲ ಎಂದು ದೇವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ.

chennai-shopping
maithri

ಶಬರಿಮಲೆಗೆ (Shabarimale) ಅಯ್ಯಪ್ಪ ಭಕ್ತರ ಭೇಟಿ ಶುರುವಾಗಿದ್ದು, ಇದರ ಬೆನ್ನಲ್ಲೇ ಭಕ್ತರು ತಮ್ಮ ಇರುಮುಡಿಕಟ್ಟುವಿನಲ್ಲಿ ಕಸವಾಗಿ ಬದಲಾಗುವ ವಸ್ತುಗಳನ್ನು ತಾರದಂತೆ ತಿರುವಾಂಕೂರು ದೇವಸ್ವಂ ಮಂಡಳಿ ವಿನಂತಿಸಿದೆ. ಹೀಗಾಗಿ ಇನ್ನು ಮುಂದೆ ಇರುಮುಡಿಕಟ್ಟುವಿನಲ್ಲಿ ಕರ್ಪೂರ, ಧೂಪದ್ರವ್ಯದ ಕಡ್ಡಿಗಳು ಮತ್ತು ರೋಸ್ ವಾಟರ್‌ಗಳನ್ನು ಇಡದಂತೆ ಸೂಚಿಸಲಾಗಿದೆ.
ತಿರುವಾಂಕೂರು ದೇವಸ್ವಂ ಮಂಡಳಿಯ ದೇವಾಲಯಗಳಲ್ಲಿ ಕರ್ಪೂರ, ಧೂಪದ್ರವ್ಯ ಮತ್ತು ಗುಲಾಬಿ ನೀರನ್ನು ಬಳಸುವಂತಿಲ್ಲ ಎಂದು ಸುತ್ತೋಲೆ ಹೊರಡಿಸಲಾಗುವುದು ಎಂದು ದೇವಸ್ವಂ ಮಂಡಳಿ ಅಧ್ಯಕ್ಷ ಪಿ.ಎಸ್. ಪ್ರಶಾಂತ್ ಮತ್ತು ಸದಸ್ಯ ಎ.ಅಜಿಕುಮಾ‌ರ್ ತಿಳಿಸಿದ್ದಾರೆ.

ಇದಲ್ಲದೆ, ಈ ನಿಟ್ಟಿನಲ್ಲಿ ಕೊಚ್ಚಿ ಮತ್ತು ಮಲಬಾರ್ ದೇವಸ್ವಂ ಮಂಡಳಿಗಳಿಗೆ ಸಹ ಪತ್ರ ನೀಡಲಾಗುವುದು. ರಾಜ್ಯದ ಖಾಸಗಿ ದೇವಾಲಯಗಳ ಆಡಳಿತ ಮಂಡಳಿಗಳಿಗೆ ಮತ್ತು ಇತರ ರಾಜ್ಯಗಳ ಗುರುಸ್ವಾಮಿಗಳಿಗೆ ಕೂಡ ಈ ಬಗ್ಗೆ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ಯಾಕೆ ಈ ವಸ್ತುಗಳನ್ನು ಇರುಮುಡಿಯಲ್ಲಿ ಇಡುವಂತಿಲ್ಲ?:
ಕರ್ಪೂರ ಮತ್ತು ಧೂಪದ್ರವ್ಯದ ಕಡ್ಡಿಗಳು ಪೂಜಾ ವಸ್ತುಗಳಾಗಿದ್ದರೂ ಬೆಂಕಿ ಹೊತ್ತಿಕೊಳ್ಳುವ ಅಪಾಯದ ಕಾರಣದಿಂದ ಅವುಗಳನ್ನು ಸನ್ನಿಧಾನದಲ್ಲಿ ಬಳಸಲು ಅನುಮತಿ ಇಲ್ಲ. ಹೀಗಾಗಿ ಭಕ್ತರು ಇರುಮುಡಿಕಟ್ಟುವಿನಲ್ಲಿ ತರುವ ಹೆಚ್ಚಿನ ವಸ್ತುಗಳು ಸಾಮಾನ್ಯವಾಗಿ ವ್ಯರ್ಥವಾಗಿ ಬಿಸಾಡಲ್ಪಡುತ್ತವೆ. ನಂತರ ದೇವಸ್ಥಾನ ಮಂಡಳಿಯವರು ಇಂಥ ತ್ಯಾಜ್ಯವನ್ನು ಪಂಡಿತಥಾವಲಂನಲ್ಲಿರುವ ಭಸ್ಮಗಾರಕ್ಕೆ ತೆಗೆದುಕೊಂಡು ಹೋಗಿ ಸುಡಬೇಕಾಗುತ್ತದೆ. ಈ ಪರಿಸ್ಥಿತಿಯನ್ನು ತಪ್ಪಿಸಲು ಹೊಸ ನಿಯಮ ಮಾಡಲಾಗಿದೆ ಎಂದು ದೇವಸ್ವಂ ಮಂಡಳಿ ಮಾಹಿತಿ ನೀಡಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

“ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ”: ಸಂಚಲನ ಸೃಷ್ಟಿಸಿದ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವರ್ತನೆ

ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ರಾಷ್ಟ್ರೀಯ ಗೀತೆ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…