ದೇಶ

ಬಾಳೆಹಣ್ಣಿಗಾಗಿ ಮಂಗಗಳ ಕಿತ್ತಾಟ; ರೈಲ್ವೆ ಸೇವೆಯಲ್ಲಿ ವ್ಯತ್ಯಯ

GL
ಎರಡು ಮಂಗಗಳ ನಡುವಿನ ಕಿತ್ತಾಟ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಎರಡು ಮಂಗಗಳ ನಡುವಿನ ಕಿತ್ತಾಟ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

chennai-shopping
maithri

ಪ್ಲಾಟ್‌ಫಾರ್ಮ್‌ ಸಂಖ್ಯೆ 4ರಲ್ಲಿ ಎರಡು ಕೋತಿಗಳು ಬಾಳೆಹಣ್ಣಿಗಾಗಿ ಕಿತ್ತಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

‘ಕಿತ್ತಾಡುತ್ತಿದ್ದ ಮಂಗಗಳ ಪೈಕಿ ಒಂದು ಮಂಗ ಇದ್ದಕ್ಕಿದ್ದಂತೆ ಯಾವುದೋ ಒಂದು ವಸ್ತುವನ್ನು ಮತ್ತೊಂದು ಮಂಗದ ಕಡೆಗೆ ಎತ್ತಿ ಎಸೆದಿದೆ. ಆ ವಸ್ತು ಓವರ್ ಹೆಡ್ ವೈರ್‌ಗೆ ಬಡಿದು ವಿದ್ಯುತ್ ತಂತಿ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ಇದರಿಂದಾಗಿ ಕೆಲಕಾಲ ರೈಲುಗಳ ಸಂಚಾರ ಸ್ಥಗಿತಗೊಂಡಿತ್ತು’ ಎಂದು ಪೂರ್ವ ಕೇಂದ್ರ ರೈಲ್ವೆ ನಿಲ್ದಾಣದ ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ ಸರಸ್ವತಿ ಚಂದ್ರ ಪಿಟಿಐಗೆ ತಿಳಿಸಿದ್ದಾರೆ.

ಕೂಡಲೇ ಇದನ್ನು ಗಮನಿಸಿದ ರೈಲ್ವೆ ಅಧಿಕಾರಿಗಳು, ಸಮಸ್ಯೆಯನ್ನು ಬಗೆಹರಿಸಿ ರೈಲ್ವೆ ಸೇವೆ ಪುನರಾರಂಭಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

“ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ”: ಸಂಚಲನ ಸೃಷ್ಟಿಸಿದ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವರ್ತನೆ

ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ರಾಷ್ಟ್ರೀಯ ಗೀತೆ…

ಮಧ್ಯಪ್ರಾಚ್ಯ ಉದ್ವಿಗ್ನತೆ : ಸಂಕಷ್ಟದಲ್ಲಿನ ಕನ್ನಡಿಗರ ನೆರವಿಗೆ ಉಡುಪಿ ಜಿಲ್ಲಾಡಳಿತದಿಂದ ತುರ್ತು ಸಹಾಯವಾಣಿ

ಮಂಗಳೂರು: ಮಧ್ಯಪ್ರಾಚ್ಯದ ಕೆಲವು ರಾಷ್ಟ್ರಗಳಲ್ಲಿ ಉಂಟಾಗಿರುವ ಅಸ್ಥಿರತೆ ಹಾಗೂ ಅಂತರಾಷ್ಟ್ರೀಯ…