ದೇಶ

ಬಾಳೆಹಣ್ಣಿಗಾಗಿ ಮಂಗಗಳ ಕಿತ್ತಾಟ; ರೈಲ್ವೆ ಸೇವೆಯಲ್ಲಿ ವ್ಯತ್ಯಯ

ಎರಡು ಮಂಗಗಳ ನಡುವಿನ ಕಿತ್ತಾಟ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಈ ಸುದ್ದಿಯನ್ನು ಶೇರ್ ಮಾಡಿ

ಎರಡು ಮಂಗಗಳ ನಡುವಿನ ಕಿತ್ತಾಟ ರೈಲ್ವೆ ಸೇವೆಯಲ್ಲಿ ವ್ಯತ್ಯಯ ಉಂಟುಮಾಡಿರುವ ಘಟನೆ ಬಿಹಾರದ ಸಮಸ್ತಿಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

maithri

ಪ್ಲಾಟ್‌ಫಾರ್ಮ್‌ ಸಂಖ್ಯೆ 4ರಲ್ಲಿ ಎರಡು ಕೋತಿಗಳು ಬಾಳೆಹಣ್ಣಿಗಾಗಿ ಕಿತ್ತಾಡುತ್ತಿದ್ದ ಸಂದರ್ಭ ಈ ಘಟನೆ ನಡೆದಿದೆ.

‘ಕಿತ್ತಾಡುತ್ತಿದ್ದ ಮಂಗಗಳ ಪೈಕಿ ಒಂದು ಮಂಗ ಇದ್ದಕ್ಕಿದ್ದಂತೆ ಯಾವುದೋ ಒಂದು ವಸ್ತುವನ್ನು ಮತ್ತೊಂದು ಮಂಗದ ಕಡೆಗೆ ಎತ್ತಿ ಎಸೆದಿದೆ. ಆ ವಸ್ತು ಓವರ್ ಹೆಡ್ ವೈರ್‌ಗೆ ಬಡಿದು ವಿದ್ಯುತ್ ತಂತಿ ತುಂಡಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿತ್ತು.

ಇದರಿಂದಾಗಿ ಕೆಲಕಾಲ ರೈಲುಗಳ ಸಂಚಾರ ಸ್ಥಗಿತಗೊಂಡಿತ್ತು’ ಎಂದು ಪೂರ್ವ ಕೇಂದ್ರ ರೈಲ್ವೆ ನಿಲ್ದಾಣದ ಪ್ರಧಾನ ಸಾರ್ವಜನಿಕ ಸಂಪರ್ಕಾಧಿಕಾರಿ ಸರಸ್ವತಿ ಚಂದ್ರ ಪಿಟಿಐಗೆ ತಿಳಿಸಿದ್ದಾರೆ.

ಕೂಡಲೇ ಇದನ್ನು ಗಮನಿಸಿದ ರೈಲ್ವೆ ಅಧಿಕಾರಿಗಳು, ಸಮಸ್ಯೆಯನ್ನು ಬಗೆಹರಿಸಿ ರೈಲ್ವೆ ಸೇವೆ ಪುನರಾರಂಭಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಬಕ್ರೀದ್ ದಿನ ವಿಶಾಲ್ ಆಗಿ ಮತಾಂತರಗೊಂಡ ಬಿಲಾಲ್! ಮುಸ್ಲಿಂ ಧರ್ಮ ತ್ಯಜಿಸಿ ಹಿಂದೂ ಧರ್ಮ ಸ್ವೀಕರಿಸಿ ರಾಮಚರಿತ ಮಾನಸ ಪಠಣ!

ಇಸ್ಲಾಂ ಧರ್ಮದ ಪವಿತ್ರ ಹಬ್ಬವಾದ ಬಕ್ರೀದ್ ಆಚರಣೆಯಂದೇ ಬಿಲಾಲ್ ಎಂಬ ಮುಸ್ಲಿಂ ಯುವಕ ಹಿಂದೂ…

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…