Gl
ದೇಶ

ಬದುಕೇ ಬದಲಿಸಿದ ಕುಂಭಮೇಳ: 45 ದಿನದಲ್ಲಿ 30 ಕೋಟಿ ರೂ. ಗಳಿಸಿದ ದೋಣಿ ನಾವಿಕ! | ಆರೋಗ್ಯ, ಸ್ವಚ್ಛತಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಯೋಗಿ | ಟೀಕೆಗಳಿಗೆ ಪ್ರತ್ಯುತ್ತರ ನೀಡಿದ ಯುಪಿ ಸಿಎಂ!

ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭಮೇಳಕ್ಕೆ ಸಾಕ್ಷಿಯಾದ ಪ್ರಯಾಗ್‌ರಾಜ್‌ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭಮೇಳಕ್ಕೆ ಸಾಕ್ಷಿಯಾದ ಪ್ರಯಾಗ್‌ರಾಜ್‌ಗೆ ದೇಶ-ವಿದೇಶಗಳಿಂದ ಬಂದ 63 ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

Pashupathi

ಜನವರಿ 13ರಿಂದ ಶುರುವಾದ ಮಹಾಕುಂಭ ಫೆ.26ರಂದು ಅಂತ್ಯವಾಗಿದೆ. ಅಂದರೆ ಸುಮಾರು ಒಂದುವರೆ ತಿಂಗಳುಗಳ ಕಾಲ ಮಹಾಕುಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ. ಈ ಕುಂಭಮೇಳದಲ್ಲಿ ಅನೇಕರು ಬದುಕನ್ನು ಕಟ್ಟಿಕೊಂಡಿದ್ದಾರೆ. ಕೆಲವರು ಇದರಿಂದ ಕೋಟ್ಯಾಧಿಪತಿಗಳು ಆಗಿದ್ದಾರೆ. ಈ ಕುರಿತಾಗಿ ಸ್ವತಃ ಯೋಗಿ ಆದಿತ್ಯನಾಥ್ ಅವರೇ ಮಾಹಿತಿ ತೆರೆದಿಟ್ಟಿದ್ದಾರೆ.

akshaya college

ಕುಂಭಮೇಳದಲ್ಲಿ ಅನೇಕರ ಬದುಕೇ ಬದಲಾಗಿದೆ. ಜೇನುಗಣ್ಣಿನ ಸುಂದರಿ, ಮೊನಾಲಿಸಾಳ ಬದುಕೆ ಇದಕ್ಕೆ ಉದಾಹರಣೆ. ಅಲ್ಲದೆ ಅಲ್ಲಿನ ವ್ಯಾಪಾರಿಗಳಿಗೆ ಇಡೀ ವರ್ಷ ಆಗುವ ವ್ಯಾಪಾರ ಕೇವಲ ಈ 45 ದಿನಗಳಲ್ಲಿ ನಡೆದಿದೆ. ಹಾಗೆಯೇ ಹಲವರಿಗೆ ಭಾಗ್ಯದ ಬಾಗಿಲು ತೆರೆದ ಈ ಕುಂಭಮೇಳವೂ ದೋಣಿ ಮಾಲೀಕರ ಕುಟುಂಬವೊಂದಕ್ಕೆ ಕೋಟ್ಯಾಧಿಪತಿಯಾಗುವ ಭಾಗ್ಯವನ್ನು ಕರುಣಿಸಿದೆ.

ಸ್ವತಃ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ವಿಚಾರವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ.

130 ಬೋಟುಗಳನ್ನು ಹೊಂದಿರುವ ಕುಟುಂಬವೊಂದು ಕುಂಭ ಮೇಳದ ನಡೆದ 45 ದಿನದ ಅವಧಿಯಲ್ಲಿ 30 ಕೋಟಿ ಆದಾಯ ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.

ದೋಣಿ ನಾವಿಕರ ಕುಟುಂಬ ಹೆಚ್ಚು ಸಂಪಾದನೆ ಮಾಡಿಲ್ಲ ಹಾಗೂ ಗಂಗೆಯ ಸ್ವಚ್ಛತೆ ಕಾಪಾಡಿಲ್ಲ ಎನ್ನುತ್ತಿದ್ದ ವಿರೋಧ ಪಕ್ಷ ಸಮಾಜವಾದಿ ಪಾರ್ಟಿಯನ್ನು ಟೀಕಿಸಿದ ಸಿಎಂ ಯೋಗಿ ಆದಿತ್ಯನಾಥ್ ಅವರು ಕುಂಭಮೇಳದಲ್ಲಿ ಇದ್ದ ಸ್ವಚ್ಛತಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಗೌರವಿಸಿ ಮಾತನಾಡುತ್ತಾ ಈ ವಿಚಾರ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

 ಅಮೆರಿಕದ ಡಾಲರ್ ಎದುರು ರೂಪಾಯಿ ಮೌಲ್ಯ ಏರಿಕೆ| ರೂಪಾಯಿಗೆ ಬಲ ನೀಡಿದ ಕ್ರಮವನ್ನು‌ ಬಹಿರಂಗಪಡಿಸಿದ ವಿನಿಮಿಯ ದತ್ತಾಂಶ!

ಅಮೆರಿಕದ ಡಾಲರ್ ಎದುರು ಸೋಮವಾರ ಭಾರತೀಯ ರೂಪಾಯಿ ಬಲಗೊಂಡಿದ್ದು, ಜಾಗತಿಕವಾಗಿ ಅಮೆರಿಕದ ಕರೆನ್ಸಿ…

‘ಆಪರೇಷನ್ ಸಿಂಧೂರ್’ ನಂತರ ಚೀನಾಕ್ಕೆ ಅಜಿತ್ ದೋವಲ್ ಕಟು ಸಂದೇಶ! ಪಾಕ್ ಇಷ್ಟಕ್ಕೆ ಸುಮ್ಮನಾಗದಿದ್ದರೇ… ಮುಂದಿದೆ ಮಾರಿಹಬ್ಬ!

ಆಪರೇಷನ್ ಸಿಂಧೂರ್' ಮೂಲಕ ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿದ ನಂತರ, ಭಾರತ…