tamanvi
ದೇಶ

ಬದುಕೇ ಬದಲಿಸಿದ ಕುಂಭಮೇಳ: 45 ದಿನದಲ್ಲಿ 30 ಕೋಟಿ ರೂ. ಗಳಿಸಿದ ದೋಣಿ ನಾವಿಕ! | ಆರೋಗ್ಯ, ಸ್ವಚ್ಛತಾ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಯೋಗಿ | ಟೀಕೆಗಳಿಗೆ ಪ್ರತ್ಯುತ್ತರ ನೀಡಿದ ಯುಪಿ ಸಿಎಂ!

D_shiva_bhat
ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭಮೇಳಕ್ಕೆ ಸಾಕ್ಷಿಯಾದ ಪ್ರಯಾಗ್‌ರಾಜ್‌ಗೆ ದೇಶ-ವಿದೇಶಗಳಿಂದ ಬಂದ 63ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ

ಈ ಸುದ್ದಿಯನ್ನು ಶೇರ್ ಮಾಡಿ

ವಿಶ್ವದ ಅತಿ ದೊಡ್ಡ ಧಾರ್ಮಿಕ ಉತ್ಸವ 144 ವರ್ಷಕ್ಕೊಮ್ಮೆ ಸಂಭವಿಸುವ ಮಹಾಕುಂಭಮೇಳಕ್ಕೆ ಸಾಕ್ಷಿಯಾದ ಪ್ರಯಾಗ್‌ರಾಜ್‌ಗೆ ದೇಶ-ವಿದೇಶಗಳಿಂದ ಬಂದ 63 ಕೋಟಿಗೂ ಅಧಿಕ ಭಕ್ತಾಧಿಗಳು ಆಗಮಿಸಿ, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ.

maithri

ಜನವರಿ 13ರಿಂದ ಶುರುವಾದ ಮಹಾಕುಂಭ ಫೆ.26ರಂದು ಅಂತ್ಯವಾಗಿದೆ. ಅಂದರೆ ಸುಮಾರು ಒಂದುವರೆ ತಿಂಗಳುಗಳ ಕಾಲ ಮಹಾಕುಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿದೆ. ಈ ಕುಂಭಮೇಳದಲ್ಲಿ ಅನೇಕರು ಬದುಕನ್ನು ಕಟ್ಟಿಕೊಂಡಿದ್ದಾರೆ. ಕೆಲವರು ಇದರಿಂದ ಕೋಟ್ಯಾಧಿಪತಿಗಳು ಆಗಿದ್ದಾರೆ. ಈ ಕುರಿತಾಗಿ ಸ್ವತಃ ಯೋಗಿ ಆದಿತ್ಯನಾಥ್ ಅವರೇ ಮಾಹಿತಿ ತೆರೆದಿಟ್ಟಿದ್ದಾರೆ.

ಕುಂಭಮೇಳದಲ್ಲಿ ಅನೇಕರ ಬದುಕೇ ಬದಲಾಗಿದೆ. ಜೇನುಗಣ್ಣಿನ ಸುಂದರಿ, ಮೊನಾಲಿಸಾಳ ಬದುಕೆ ಇದಕ್ಕೆ ಉದಾಹರಣೆ. ಅಲ್ಲದೆ ಅಲ್ಲಿನ ವ್ಯಾಪಾರಿಗಳಿಗೆ ಇಡೀ ವರ್ಷ ಆಗುವ ವ್ಯಾಪಾರ ಕೇವಲ ಈ 45 ದಿನಗಳಲ್ಲಿ ನಡೆದಿದೆ. ಹಾಗೆಯೇ ಹಲವರಿಗೆ ಭಾಗ್ಯದ ಬಾಗಿಲು ತೆರೆದ ಈ ಕುಂಭಮೇಳವೂ ದೋಣಿ ಮಾಲೀಕರ ಕುಟುಂಬವೊಂದಕ್ಕೆ ಕೋಟ್ಯಾಧಿಪತಿಯಾಗುವ ಭಾಗ್ಯವನ್ನು ಕರುಣಿಸಿದೆ.

ಸ್ವತಃ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಈ ವಿಚಾರವನ್ನು ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಹೇಳಿಕೊಂಡಿದ್ದಾರೆ.

130 ಬೋಟುಗಳನ್ನು ಹೊಂದಿರುವ ಕುಟುಂಬವೊಂದು ಕುಂಭ ಮೇಳದ ನಡೆದ 45 ದಿನದ ಅವಧಿಯಲ್ಲಿ 30 ಕೋಟಿ ಆದಾಯ ಮಾಡಿದೆ ಎಂದು ಯೋಗಿ ಆದಿತ್ಯನಾಥ್ ಅವರು ವಿಧಾನಸಭೆಯಲ್ಲಿ ಹೇಳಿದ್ದಾರೆ.

ದೋಣಿ ನಾವಿಕರ ಕುಟುಂಬ ಹೆಚ್ಚು ಸಂಪಾದನೆ ಮಾಡಿಲ್ಲ ಹಾಗೂ ಗಂಗೆಯ ಸ್ವಚ್ಛತೆ ಕಾಪಾಡಿಲ್ಲ ಎನ್ನುತ್ತಿದ್ದ ವಿರೋಧ ಪಕ್ಷ ಸಮಾಜವಾದಿ ಪಾರ್ಟಿಯನ್ನು ಟೀಕಿಸಿದ ಸಿಎಂ ಯೋಗಿ ಆದಿತ್ಯನಾಥ್ ಅವರು ಕುಂಭಮೇಳದಲ್ಲಿ ಇದ್ದ ಸ್ವಚ್ಛತಾ ಕಾರ್ಯಕರ್ತರು ಹಾಗೂ ಆರೋಗ್ಯ ಕಾರ್ಯಕರ್ತರನ್ನು ಗೌರವಿಸಿ ಮಾತನಾಡುತ್ತಾ ಈ ವಿಚಾರ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ಬಾಲಿವುಡ್ ನಟರು, ಕ್ರಿಕೆಟ್ ತಾರೆಯರು ಚುನಾವಣಾ ಆಖಾಡಕ್ಕೆ!! | ನಡುರಾತ್ರಿಯ ಬಿಜೆಪಿ ಸಭೆ ನಿರ್ಣಯಿಸಿದ ಆ ಸೆಲಬ್ರಿಟಿಗಳು ಯಾರು?

ನವದೆಹಲಿ: ಖ್ಯಾತ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌ ಹಾಗೂ ಮಾಜಿ ಕ್ರಿಕೆಟಿಗ ಯುವರಾಜ್‌ ಸಿಂಗ್‌…