Gl
ರಾಜಕೀಯ

ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಯಿಂದ 6 ವರ್ಷ ಕಾಲ ಉಚ್ಚಾಟನೆ!

ಯತ್ನಾಳ್‌ ಉಚ್ಚಾಟನೆ ಬಿಜೆಪಿಯಲ್ಲಿ ಅಚ್ಚರಿ, ಕುತೂಹಲ, ಭಯ ಹಾಗೂ ಆಕ್ರೋಶವನ್ನು ಏಕಕಾಲಕ್ಕೆ ಹುಟ್ಟು ಹಾಕಿದ್ದು, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಎಷ್ಟೇ ದೊಡ್ಡವರಾದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ಬಿಜೆಪಿ ವರಿಷ್ಠರು ರವಾನಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಭಾರೀ ಸಂಚಲನ ಸೃಷ್ಟಿಸುವ ಮಾಹಿತಿಯೊಂದನ್ನು ಕೇಂದ್ರ ಬಿಜೆಪಿ ನಾಯಕರು ರವಾನಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಮರ ಸಾರಿದ್ದ ಕೇಂದ್ರದ ಮಾಜಿ ಸಚಿವ ಹಾಗೂ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಚಾಟನೆಗೊಳಿಸಿ ಬಿಜೆಪಿ ಕೇಂದ್ರೀಯ ಶಿಸ್ತು ಸಮಿತಿ ಆದೇಶ ಹೊರಡಿಸಿದೆ.

Pashupathi

ಶಾಸಕರಾದ ಎಸ್‌.ಟಿ.ಸೋಮಶೇಖ‌ರ್, ಶಿವರಾಂ ಹೆಬ್ಬಾರ್, ಬಿ.ಪಿ.ಹರೀಶ್, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಕಟ್ಟಾಸುಬ್ರಹ್ಮಣ್ಯ ನಾಯ್ಡುಗೆ ಅವರಿಗೆ ಶಿಸ್ತು ಉಲ್ಲಂಘನೆ ಕಾರಣಕ್ಕೆ ಮಂಗಳವಾರ ಶೋಕಾಸ್‌ ನೋಟಿಸ್ ನೀಡಿ ಬಿಸಿ ಮುಟ್ಟಿಸಿದ್ದ ಬಿಜೆಪಿ ಹೈಕಮಾಂಡ್ ಈಗ ಮರು ದಿನವೇ ಯತ್ನಾಳ್‌ಗೆ ಗೇಟ್ ಪಾಸ್ ಕೊಟ್ಟು ಅಚ್ಚರಿ ಮೂಡಿಸಿದೆ.

akshaya college

ಯತ್ನಾಳ್‌ ಉಚ್ಚಾಟನೆ ಬಿಜೆಪಿಯಲ್ಲಿ ಅಚ್ಚರಿ, ಕುತೂಹಲ, ಭಯ ಹಾಗೂ ಆಕ್ರೋಶವನ್ನು ಏಕಕಾಲಕ್ಕೆ ಹುಟ್ಟು ಹಾಕಿದ್ದು, ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದರೆ ಎಷ್ಟೇ ದೊಡ್ಡವರಾದರೂ ಕ್ರಮ ತೆಗೆದುಕೊಳ್ಳುತ್ತೇವೆ ಎಂಬ ಎಚ್ಚರಿಕೆಯ ಸಂದೇಶವನ್ನು ಬಿಜೆಪಿ ವರಿಷ್ಠರು ರವಾನಿಸಿದ್ದಾರೆ. ವರಿಷ್ಠರ ನಿರ್ಧಾರವನ್ನು ವಿರೋಧಿಸುವವರು ಯಾರೇ ಆದರೂ ಸಹಿಸುವುದಿಲ್ಲ  ಎಂಬ ಸಂದೇಶ ನೀಡಲಾಗಿದೆ. ಈ ಬೆಳವಣಿಗೆಯಿಂದಾಗಿ ಪಕ್ಷದಲ್ಲಿ ವಿಜಯೇಂದ್ರ ಕೈ ಮತ್ತೆ ಮೇಲಾಗಿದೆ ಎಂದು ವ್ಯಾಖ್ಯಾನಿಸಲಾಗುತ್ತಿದೆ.

ಯಡಿಯೂರಪ್ಪ ಮತ್ತು ವಿಜಯೇಂದ್ರ ವಿರುದ್ಧ ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲದಿಂದ ನಿರಂತರ ವಾಗ್ದಾಳಿ ನಡೆಸುತ್ತಿದ್ದ ಯತ್ನಾಳ್‌ಗೆ 2 ಸಲ ಶೋಕಾಸ್ ನೋಟಿಸ್‌ ನೀಡಿದರೂ ತಮ್ಮ ನಡವಳಿಕೆಯಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೇ ಇದ್ದದು ಮತ್ತು ಅವರ ಹೇಳಿಕೆಯಿಂದ ಪಕ್ಷದಲ್ಲಿ ಗೊಂದಲ ಉಂಟಾಗಿ ಪಕ್ಷದ ವರ್ಚಸ್ಸಿಗೆ ಧಕ್ಕೆ ಆಗುತ್ತಿದ್ದುದನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ಕೊನೆಗೂ ಉಚ್ಚಾಟನೆ ಕ್ರಮ ಕೈಗೊಂಡಿದೆ.

ಉಚ್ಚಾಟನೆ ಆದೇಶದಲ್ಲಿ ಏನಿದೆ?

ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯ ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ, ನೀವು ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಎಲ್ಲ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಮುಂದಿನ ಆದೇಶದವರೆಗೆ ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷದ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರೀಯ ಶಿಸ್ತು ಸಮಿತಿ ಸದಸ್ಯ ಕಾರ್ಯದರ್ಶಿ ಓಂ ಪಾಠಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯತ್ನಾಳ್ ದಿಲ್ಲಿಯಲ್ಲೇ ಇದ್ದರು :

ಕುತೂಹಲಕಾರಿ ಸಂಗತಿಯೆಂದರೆ ಈ ಆದೇಶ ಪ್ರಕಟವಾಗುವ ಕಾಲಕ್ಕೆ ಯತ್ನಾಳ್ ಹಾಗೂ ವಿಜಯೇಂದ್ರ ಇಬ್ಬರೂ ದೆಹಲಿಯಲ್ಲೇ ಇದ್ದರು. ಸೋದರ ಬಿ.ವೈ.ರಾಘವೇಂದ್ರ ಅವರ ಪುತ್ರನ ವಿವಾಹಕ್ಕೆ ಆಹ್ವಾನ ನೀಡುವುದಕ್ಕಾಗಿ ವಿಜಯೇಂದ್ರ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು. ಸಕ್ಕರೆ ಕಾರ್ಖಾನೆ ಉದ್ಘಾಟನೆಗಾಗಿ ದೆಹಲಿ ನಾಯಕರ ಆಹ್ವಾನಕ್ಕೆ ತೆರಳಿದ್ದ ಯತ್ನಾಳ್-ವಿಜಯೇಂದ್ರ ಹಾಗೂ ಡಿ.ಕೆ.ಶಿವಕುಮಾರ್ ವಿರುದ್ಧ ದೆಹಲಿಯಲಿ ತೀವ, ಆಕೋಶ ಹೊರ ಹಾಕಿದ್ದರು. ಇದಾದ ಕೆಲವೇ ಹೊತ್ತಿನಲ್ಲಿ ಯತ್ನಾಳ್ ಉಚ್ಚಾಟನೆ ಆದೇಶ ಪ್ರಕಟವಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…