ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಸಹಿತ 30 ಮಂದಿ ಕಾಂಗ್ರೆಸ್ ಸೇರ್ಪಡೆಯಾದ ಬಗ್ಗೆ ವರದಿಯಾಗಿದೆ.
ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಸ್ವಾಗತಿಸಿದರು.
ಆರ್ಯಾಪು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆಯಾಗಿದ್ದ ಗೀತಾ ಚೆನ್ನಪ್ಪ ಅವರು 30 ಮಂದಿ ಬಿಜೆಪಿ ಕಾರ್ಯಕರ್ತರ ಜೊತೆಗೆ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು.
ಈ ಸಂದರ್ಭ ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಆರ್ಯಾಪು ವಲಯ ಅಧ್ಯಕ್ಷ ಗಿರೀಶ್ ರೈ ಮೊದಲಾದವರು ಉಪಸ್ಥಿತರಿದ್ದರು.