ಪುತ್ತೂರು: ಪುತ್ತಿಲ ಪರಿವಾರದ ನೇತೃತ್ವದಲ್ಲಿ ನಡೆದ ಶ್ರೀನಿವಾಸ ಕಲ್ಯಾಣೋತ್ಸವದ ಸಭಾಂಗಣದಲ್ಲಿ ತನಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಪ್ರಸನ್ನ ಮಾರ್ತ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಸೋಮವಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ಪ್ರಮುಖರ ಜೊತೆ ಆಗಮಿಸಿದ ಪ್ರಸನ್ನ ಮಾರ್ತ ಅವರು ಪ್ರಾರ್ಥನೆ ಸಲ್ಲಿಸಿದರು.
ಭಾನುವಾರ ರಾತ್ರಿ ಪ್ರಸನ್ನ ಮಾರ್ತ ಅವರು ಪತ್ನಿ ಸಹಿತ ಶ್ರೀನಿವಾಸ ಕಲ್ಯಾಣೋತ್ಸವಕ್ಕೆ ತೆರಳಿದ್ದರು. ಆಗ ಚಂದ್ರಶೇಖರ್ ಎಂಬವರು ಒಳಗೆ ಬಿಡದೆ, ಅವರನ್ನು ಹಿಂದಕ್ಕೆ ದೂಡಿದ್ದರು ಎಂದು ಆರೋಪಿಸಲಾಗಿದೆ.
























