ರಾಜಕೀಯ

ಕೇರಳ ಚುನಾವಣೆ: `ಹಾಟ್ ಸೀಟ್’ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪರ ಕಿಶೋರ್ ಕುಮಾರ್ ಪುತ್ತೂರು ಪ್ರಚಾರ

GL

ಈ ಸುದ್ದಿಯನ್ನು ಶೇರ್ ಮಾಡಿ

ಕಾಸರಗೋಡು ಜಿಲ್ಲೆಯ ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಸುರೇಂದ್ರನ್ ಅವರ ಪರವಾಗಿ ಕರ್ನಾಟಕ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಪ್ರಚಾರ ನಡೆಸಿದರು.

chennai-shopping
maithri

ಕೇರಳದ ಮಂಜೇಶ್ವರ ವಿಧಾನಸಭಾ ಕ್ಷೇತ್ರ ಪ್ರತಿ ಚುನಾವಣೆಯಲ್ಲೂ ಕಠಿಣ ಸ್ಪರ್ಧೆ ನಡೆಯುವ ಹಾಟ್ ಸೀಟ್ ಎಂದು ಪರಿಗಣಿಸಲಾಗುವ ಕ್ಷೇತ್ರ. ಪ್ರತೀ ಚುನಾವಣೆಯಲ್ಲಿ ಅತೀ ಕಡಿಮೆ ಅಂತರದಲ್ಲಿ ಸೋಲುವ ಬಿಜೆಪಿ ಈ ಬಾರಿ  ಕಮಲ ಅರಳಿಸಲು ಶತಾಯಗತಾಯ ಪ್ರಯತ್ನ ಮಾಡುತ್ತಿದೆ.

ಎಣ್ಮಕಜೆ ವ್ಯಾಪ್ತಿಯ ಕಂಡೇರಿ ಗ್ರಾಮ ಪಂಚಾಯತ್ ನಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು. ಎಲ್ ಡಿ ಎಫ್ ಹಾಗೂ ಯುಡಿಎಫ್ ನ ಆಡಳಿತ ವೈಫಲ್ಯ ಕಾಸರಗೋಡಿನ ಜ್ವಲಂತ ಸಮಸ್ಯೆಗಳಿಂದ ಬೇಸತ್ತಿರುವ ಜೊತೆಗೆ ನವ ಕಾಸರಗೋಡಿನ ನಿರ್ಮಾಣಕ್ಕಾಗಿ ಕಾಸರಗೋಡಿನ ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದು ಈ ಸಂದರ್ಭದಲ್ಲಿ ಹೇಳಿದರು.

ಪದ್ಮನಾಭ ಭಟ್ ಕಂಡೇರಿ, ಪ್ರದೀಪ್ ಭಟ್ ಕಂಡೇರಿ, ಸಾತ್ವಿಕ್ ಕಂಡೇರಿ, ನಾಲ್ಕನೇ ವಾರ್ಡ್ ಪಂಚಾಯತ್ ಸದಸ್ಯೆ ಪುಷ್ಪಾವತಿ ವಿ. ರೈ, ಪಕ್ಷಕ್ಕೆ ಹೊಸದಾಗಿ ಸೇರ್ಪಡೆಗೊಂಡ ಸ್ವಸ್ತಿಕ್ ಕೆಂಗಣಾಜೆ, ಪ್ರಜ್ವಲ್ ಆರ್ ಕೆ ದಂಬೆಕಾನ, ವಿನೋದ್ ಕೊಲ್ಯ, ಪ್ರಶಾಂತ್ ಮತ್ತು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts