Gl jewellers
ರಾಜಕೀಯ

ಕೊನೆಗೂ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರು! ಬಜೆಟ್ ಮಂಡಿಸುತ್ತಾ ಸಿಎಂ ಸಿದ್ದರಾಮಯ್ಯ ಘೋಷಣೆ! ಶಾಸಕ ಅಶೋಕ್ ರೈ ಪ್ರಯತ್ನಕ್ಕೆ ಸಿಕ್ಕ ಫಲ!

ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಕೊನೆಗೂ ಪುತ್ತೂರಿಗೆ ಮೆಡಿಕಲ್ ಕಾಲೇಜು ಮಂಜೂರಾಗಿದೆ. ಮೆಡಿಕಲ್ ಕಾಲೇಜು ಕುರಿತ ಹಲವು ವರ್ಷಗಳ ಪುತ್ತೂರಿನ ಜನತೆಯ ಕನಸು ಈ ಬಾರಿ ನನಸಾಗಲಿದೆ.

Papemajalu garady
Karnapady garady

ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉದ್ದೇಶಿಸಲಾಗಿದ್ದು, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನು ಉನ್ನತೀಕರಿಸಿ ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ನಲ್ಲಿ ತಿಳಿಸಿದ್ದಾರೆ.

ಪುತ್ತೂರಿನಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಸ್ಥಾಪನೆ ನಿಟ್ಟಿನಲ್ಲಿ ಕಳೆದ ಏಳೆಂಟು ವರ್ಷಗಳಿಂದ ನಡೆಯುತ್ತಿರುವ ಹೋರಾಟ ಈ ಮೂಲಕ ತಾರ್ಕಿಕ ಅಂತ್ಯ ಕಂಡಿದೆ.

2024ರ ಬಜೆಟ್‌ನಲ್ಲಿಯೇ ಪುತ್ತೂರಿಗೆ ಮೆಡಿಕಲ್‌ ಕಾಲೇಜು ಘೋಷಣೆಯಾಗಲಿದೆ ಎಂದು ಹೇಳಲಾಗುತ್ತಿತ್ತು. ಆದರೆ ಅದು ಬೇಡಿಕೆಯಾಗಿಯೇ ಉಳಿದಿತ್ತು. ಮೆಡಿಕಲ್‌ ಕಾಲೇಜು ಮಂಜೂರಾತಿಗಾಗಿ ಆರಂಭದಿಂದಲೇ ಸರಕಾರದ ಮೇಲೆ ಒತ್ತಡ ಹೇರಿದ್ದ ಶಾಸಕ ಅಶೋಕ್ ಕುಮಾರ್ ರೈ ಶ್ರಮ ಈಗ ಫಲ ಕೊಟ್ಟಿದೆ.

ದಕ್ಷಿಣ ಕನ್ನಡದಲ್ಲಿ ಈಗಾಗಲೇ 8 ಮೆಡಿಕಲ್ ಕಾಲೇಜುಗಳ ಪಟ್ಟಿಗೆ ಇನ್ನೊಂದು ಮೆಡಿಕಲ್ ಕಾಲೇಜು ಸೇರ್ಪಡೆಗೊಳ್ಳಲಿದೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ವ್ಹೀಲ್ ಚೇರಿನಲ್ಲಿ ವಿಧಾನಸಭೆ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಎಂಟ್ರಿ! ಅಷ್ಟಕ್ಕೂ ಸಿಎಂಗೇನಾಯ್ತು?

ಇಂದಿನಿಂದ ವಿಧಾನಸಭೆ ಅಧಿವೇಶನ. ಈ ಅಧಿವೇಶನಕ್ಕೆ ಸಿಎಂ ಸಿದ್ದರಾಮಯ್ಯ ಅವರು ವ್ಹೀಟ್‌ ಚೇರಿನಲ್ಲಿ…

ಅರವಿಂದ್ ಕೇಜ್ರಿವಾಲ್ ಹೊಸ ರಾಜಕೀಯ ಇನ್ನಿಂಗ್ಸ್ ಶುರು? ರಾಜ್ಯಸಭೆ ಎಂಟ್ರಿಗೆ ಹೊಸ ದಾಳ ಉರುಳಿಸಿದ ಮಾಜಿ ಸಿಎಂ!

ಇತ್ತೀಚಿನ ದೆಹಲಿ ವಿಧಾನಸಭಾ ಚುನಾವಣೆ ಸೋಲಿನ ಬೆನ್ನಲ್ಲೇ ಆಮ್‌ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ…