ಧಾರ್ಮಿಕ

ತೆಂಕುತಿಟ್ಟು ಹಿರಿಯ ಯಕ್ಷಗಾನ ಕಲಾವಿದ ಗೋಪಾಲಕೃಷ್ಣ ಕುರುಪ್ ನಿಧನ

GL
ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ವಾದನದ ತಜ್ಞ ಕಲಾವಿದ, ಹಿರಿಯ ಯಕ್ಷಗಾನ ಗುರು ಬಿ.ಗೋಪಾಲಕೃಷ್ಣ ಕುರುಪ್‌ (90) ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ವಾದನದ ತಜ್ಞ ಕಲಾವಿದ, ಹಿರಿಯ ಯಕ್ಷಗಾನ ಗುರು ಬಿ.ಗೋಪಾಲಕೃಷ್ಣ ಕುರುಪ್‌ (90) ನಿಧನರಾದರು.

maithri

ಕಾಸರಗೋಡು ಜಿಲ್ಲೆಯ ನೀಲೇಶ್ವರ ಬಳಿಯ ಪಟ್ಟೇನ ಎಂಬಲ್ಲಿ ಪುತ್ರಿ ಮನೆಯಲ್ಲಿ ವಾಸಿಸುತ್ತಿದ್ದರು.ವಯೋಸಹಜವಾಗಿ ನಿನ್ನೆ ರಾತ್ರಿ ಕೊನೆಯುಸಿರೆಳೆದರು

ಗಡಿನಾಡು ಕಾಸರಗೋಡು ಮೂಲದ ಕುರುಪ್ ಅವರು ಬೆಳ್ತಂಗಡಿಯ ಶಿಶಿಲದಲ್ಲಿ ಈ ಹಿಂದೆ ನೆಲೆಸಿದ್ದರು.ಇವರ ಪತ್ನಿ, ಮತ್ತು ಇಬ್ಬರು ಪುತ್ರ ಹಾಗೂ ಓರ್ವ ಪುತ್ರಿ ಯನ್ನು ಅಗಲಿದ್ದಾರೆ.

ತೆಂಕುತಿಟ್ಟು ಯಕ್ಷಗಾನದ ಹಿಮ್ಮೇಳ ವಾದನದಲ್ಲಿ ಅತ್ಯುನ್ನತ ಹೆಸರಾಗಿದ್ದ ಇವರು ಆರು ದಶಕಕ್ಕೂ ಅಧಿಕಕಾಲ ಹಿಮ್ಮೇಳ ಶಿಕ್ಷಣ ನೀಡಿ ಅನೇಕ ಶಿಷ್ಯರನ್ನು ನೀಡಿದ್ದಾರೆ. ತೆಂಕುತಿಟ್ಟು ಸಾಂಪ್ರದಾಯಿಕ ಕ್ರಮಗಳ ಕುರಿತು  ಮಾತಾಡಬಲ್ಲವರಾಗಿದ್ದ ಅವರು ಹಿಮ್ಮೇಳ ವಾದನದ ಕುರಿತು ( ಮಧ್ಯಳೆ ವಾದನ ಕ್ರಮ) ಕೃತಿ ರಚಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸನ ಪ್ರಶಸ್ತಿ, ಯಕ್ಷಗಾನ ಅಕಾಡೆಮಿ ಪ್ರಶಸ್ತಿ, ಕೇರಳದ ಗುರುಪೂಜಾ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿಗಳಿಗೆ ಅವರು ಭಾಜನರಾಗಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಉಪ್ಪಿನಂಗಡಿ ವೃತ್ತದಲ್ಲಿ ಉಬಾರ್ ಮಂಜ ಬೈದ್ಯರ ಪುತ್ಥಳಿ ಸ್ಥಾಪಿಸಿ, ಅವರ ಹೆಸರನ್ನಿಡುವಂತೆ ಗೆಜ್ಜೆಗಿರಿ ಸಮಿತಿ ಮನವಿ

ಉಪ್ಪಿನಂಗಡಿ ಮುಖ್ಯ ರಸ್ತೆಯ ವೃತ್ತಕ್ಕೆ ವೀರ ಉಬಾರ್ ಮಂಜ ಬೈದ್ಯರ ತ್ಯಾಗವನ್ನು ಸಾರುವ ಸಲುವಾಗಿ…

ಅನಾಹುತ, ಮೃತ್ಯು ಕಂಟಕ ಪರಿಹಾರಕ್ಕಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಸೂಕ್ತ ಜಪ, ವಿಶೇಷ ಪ್ರಾರ್ಥನೆ

ಪುತ್ತೂರು: ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಂಗಳವಾರ ಮೃತ್ಯುಂಜಯ…